Posts

ಕೊಪ್ಪ : "ದಿವಂಗತ ಮಂಜುನಾಥ್ ಸ್ಮರಣಾರ್ಥ ರಕ್ತ ದಾನ ಶಿಬಿರ "

Image
ಕೊಪ್ಪ : "ದಿವಂಗತ ಮಂಜುನಾಥ್ ಸ್ಮರಣಾರ್ಥ ರಕ್ತ ದಾನ ಶಿಬಿರ "  ಕೊಪ್ಪ : 04/04/26 ಶನಿವಾರ         ನಾಳೆಯ ದಿನ "ದಿವಂಗತ ಮಂಜುನಾಥ್" ಇವರ ಸ್ಮರಣಾರ್ಥವಾಗಿ, ಬ್ಲಡ್ ಡೋನರ್ಸ್ ಮಂಗಳೂರು, ಮೆಗ್ಗಾನ್ ರಕ್ತ ನಿಧಿ ಕೇಂದ್ರ ಹಾಗೂ ಕೊಪ್ಪ ಬ್ಲಡ್ ಡೋನರ್ಸ್ ಇವರ ವತಿಯಿಂದ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕೊಪ್ಪ ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿನ ಗೂಡ್ಸ್ ನಿಲ್ದಾಣದಲ್ಲಿ ಕೆಲವು ದಿನ ಗಳ ಹಿಂದೆ ರಿಕ್ಷಾ ಅಪಘಾತದಲ್ಲಿ ತಲೆಗೆ ಬಲವಾಗಿ ಪೆಟ್ಟು ಬಿದ್ದು ಚಿಕಿತ್ಸೆ ಫಲಕಾರಿ ಯಾಗದೇ ತನ್ನ ಅಂಗಾಂಗಗಳನ್ನು ದಾನ ಮಾಡಿ ಇವರ ಅಂಗಾಂಗಗಳಿಗೆ ಇನ್ನೊಬ್ಬರಿಗೆ ಕೊಟ್ಟು ಮರುಜೀವ ನೀಡಿ ಸಮಾಜಕ್ಕೆ ಮಾದರಿ ಯಾದಂತಹ ವ್ಯಕ್ತಿಯ ಸ್ಮರಣೆಗಾಗಿ ರಕ್ತದಾನ ಶಿಬಿರವನ್ನು ಆಯೋಜಿಸಿದೆ, ಆದ್ದರಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದಲ್ಲಿ ಭಾಗವಹಿಸಬೇಕಾಗಿ ವಿನಂತಿ...🤝 *ಆದಷ್ಟು ಶೇರ್ ಮಾಡುವ ಮೂಲಕ ಮಲೆನಾಡಿನಲ್ಲಿ ತುರ್ತಾಗಿ ರಕ್ತದ ಅವಶ್ಯಕತೆ ಇದ್ದಾಗ ಸಹಾಯ ಮಾಡುವ ಈ ತಂಡಕ್ಕೆ ನಿಮ್ಮ ಸಹಕಾರವಿರಲಿ..*

ಹಾವೇರಿ ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ನುಗ್ಗಿದ ಬಸ್; 2 ವರ್ಷದ ಮಗು ಸಾವು, ನಾಲ್ವರಿಗೆ ಗಾಯ..!

Image
ಹಾವೇರಿ ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ನುಗ್ಗಿದ ಬಸ್; 2 ವರ್ಷದ ಮಗು ಸಾವು, ನಾಲ್ವರಿಗೆ ಗಾಯ..! ಹಾವೇರಿ: ನಗರದ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್ ನಿಲ್ದಾಣದಲ್ಲಿ (Haveri Bus stand Accident) ಬುಧವಾರ ಮುಂಜಾನೆ ಘೋರ ಅಪಘಾತ ಸಂಭವಿಸಿದೆ. ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದಾಗಿ ಪ್ಲಾಟ್‌ಫಾರ್ಮ್‌ ಮೇಲೆ ನಿಂತಿದ್ದವರ ಮೇಲೆ ಬಸ್‌ ನುಗ್ಗಿದ ಪರಿಣಾಮ ಎರಡು ವರ್ಷದ ಪುಟ್ಟ ಮಗು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬುಧವಾರ ಮುಂಜಾನೆ ಸುಮಾರು 06.30 ಗಂಟೆಯಲ್ಲಿ ಘಟನೆ ಸಂಭವಿಸಿದೆ. ವಾಯವ್ಯ ಕರ್ನಾಟಕ ಸಾರಿಗೆ ಬಸ್‌ ಚಾಲಕ ಮಂಜುನಾಥ ಎಂಬಾತನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ದುರಂತ ಸಂಭವಿಸಿದೆ. ಪ್ಲಾಟ್ ಫಾರ್ಮ್‌ ನಂ.2 ಕಡೆಗೆ ಏಕಾಏಕಿ ಸಾರಿಗೆ ಬಸ್‌ ನುಗ್ಗಿದ್ದರಿಂದ ಸವಣೂರಿನ ಹಜರತ್‌ ಅಲಿ (2) ಮಗು ಮೃತಪಟ್ಟಿದೆ. ಘಟನೆಯಲ್ಲಿ ಬಂಕಾಪುರದ ವಾಸುದೇವ (44), ಹರ್ಷ (6), ಕಾವ್ಯಾಂಜಲಿ (39), ಅರಬಜ್‌ಖಾನ್‌ (13) ಗಾಯಗೊಂಡಿದ್ದಾರೆ. ಬಸ್‌ ಹರಿದಿದ್ದರಿಂದ ಹಜರತ್ ಅಲಿ ತೀವ್ರವಾಗಿ ಗಾಯಗೊಂಡಿದ್ದ. ತಕ್ಷಣವೇ ಹಾವೇರಿ ಜಿಲ್ಲಾಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಹಜರತ್ ಅಲಿ ಮೃತಪಟ್ಟಿದ್ದಾನೆ. ಈ ಅಪಘಾತದ ಬಗ್ಗೆ ನಯಿಮ್ ಎಂಬುವವರು ನೀಡಿದ...

ಸೇತುವೆಯಿಂದ ಕೆಳಗೆ ಹಳ್ಳಕ್ಕೆ ಬಿದ್ದ ಖಾಸಗಿ ಬಸ್; 36 ಜನರಿಗೆ ಗಾಯ..!

Image
ಸೇತುವೆಯಿಂದ ಕೆಳಗೆ  ಹಳ್ಳಕ್ಕೆ ಬಿದ್ದ ಖಾಸಗಿ ಬಸ್; 36 ಜನರಿಗೆ ಗಾಯ.!! ನೆನ್ನೆ ಮಧ್ಯಾಹ್ನ 1.30 ರ ಸುಮಾರಿಗೆ ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿ ಬಿದ್ದಿದ್ದು, ಅಪಘಾತದಲ್ಲಿ ಮೂವತ್ತಾರು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರ ಪ್ರಕಾರ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್, ಕಾಗೇಹಳ್ಳದ ಬಳಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು, ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ.

ಇನ್ನು ನಿಮ್ಮ ಸಹಾಯಕ್ಕೆ ಅಮೆರಿಕ ಇಲ್ಲ, ಹಾರ್ಮುಜ್​ಗೆ ಹೋಗಿ ತೈಲ ಪಡೆದುಕೊಳ್ಳಿ: ಮಿತ್ರರಾಷ್ಟ್ರಗಳಿಗೆ ಟ್ರಂಪ್ ಚಾಟಿ..!

Image
ಇನ್ನು ನಿಮ್ಮ ಸಹಾಯಕ್ಕೆ ಅಮೆರಿಕ ಇಲ್ಲ, ಹಾರ್ಮುಜ್​ಗೆ ಹೋಗಿ ತೈಲ ಪಡೆದುಕೊಳ್ಳಿ: ಮಿತ್ರರಾಷ್ಟ್ರಗಳಿಗೆ ಟ್ರಂಪ್ ಚಾಟಿ..! ಮಧ್ಯಪ್ರಾಚ್ಯದ ಸಂಘರ್ಷ ನಡುವೆ ಅಮೆರಿಕ ಡೊನಾಲ್ಡ್ ಟ್ರಂಪ್ ಯುದ್ಧದಲ್ಲಿ ಭಾಗವಹಿಸಲು ನಿರಾಕರಿಸಿದ ದೇಶಗಳ ವಿರುದ್ಧ ಕೆಂಡಾಮಂಡಲವಾಗಿದ್ದು, ನೀವೇ ಹಾರ್ಮುಜ್ ಜಲಸಂಧಿಗೆ ತೆರಳಿ ತೈಲ ಖರೀದಿಸಿ, ನಿಮ್ಮ ಸಹಾಯಕ್ಕೆ ನಾವು ಇಲ್ಲ ಎಂದು ನೇರವಾಗಿ ಚಾಟಿ ಬೀಸಿದರು . ಹಾರ್ಮುಜ್ ಜಲಸಂಧಿ ಮೇಲೆ ಕಣ್ಣಿಟ್ಟಿರುವ ಟ್ರಂಪ್ ಗೆ ನೆರೆ ದೇಶಗಳು ಸಹಾಯ ಮಾಡಲು ನಿರಾಕರಿಸಿದ್ದು, ಈ ಕಾರಣದಿಂದ ದೊಡ್ಡಣ್ಣ ಖಡಕ್ ಸೂಚನೆ ನೀಡಿದೆ. ಈ ಕುರಿತು ತಮ್ಮ ಟ್ರೂತ್ ಸೋಷಿಯಲ್ ಪೋಸ್ಟ್​ನಲ್ಲಿ , ಬ್ರಿಟನ್ ಸಹಿತ ಇತರ ದೇಶಗಳ ವಿರುದ್ಧ ಆಕ್ರೋಶ ಹೊರಹಾಕಿದ ಟ್ರಂಪ್ , ಯುದ್ಧದಲ್ಲಿ ಭಾಗವಹಿಸಲು ನಿರಾಕರಿಸುವ ದೇಶಗಳಿಗೆ ನನ್ನ ಸಲಹೆ ಏನೆಂದರೆ, ಒಂದೋ ಅಮೆರಿಕದಿಂದ ತೈಲ ಖರೀದಿಸಿ. ನಮ್ಮಲ್ಲಿ ಸಾಕಷ್ಟು ತೈಲ ಇದೆ. ಇಲ್ಲವೇ ನೀವೇ ಧೈರ್ಯ ಮಾಡಿ ಜಲಸಂಧಿಗೆ ಹೋಗಿ ತೈಲ ತೆಗೆದುಕೊಳ್ಳಿ' ಎಂದು ಖಡಕ್ ಆಗಿ ಹೇಳಿದ್ದಾರೆ. ಯಾವ ರೀತಿ ನೀವು ಅಮೆರಿಕದ ಸಹಾಯಕ್ಕೆ ಇಲ್ಲವೋ, ಅದೇ ರೀತಿ ಮುಂದಿನ ದಿನಗಳಲ್ಲಿ ನಿಮಗೆ ಸಹಾಯ ಮಾಡಲು ಅಮೆರಿಕ ಇರುವುದಿಲ್ಲ. ಈಗಾಗಲೇ ಇರಾನ್ ನ ಪ್ರಮುಖ ಸ್ಥಳಗಳನ್ನು ನೆಲಸಮ ಮಾಡಿದ್ದೇವೆ. ನಿಮ್ಮ ತೈಲವನ್ನು ಪಡೆದುಕೊಳ್ಳಿ ಹೋಗಿ ಎಂದು ಟ್ರಂಪ್ ಸವಾಲು ಹಾಕಿದ್ದಾರೆ.

ʻಹಳ್ಳಿ ಹೈದ ಪ್ಯಾಟೆಗೆ ಬಂದʼ ಖ್ಯಾತಿಯ ಬಾವತೀಶ್‌ ಬೈಕ್‌ ಅಪಘಾತಕ್ಕೆ ಬಲಿ..!

Image
ʻಹಳ್ಳಿ ಹೈದ ಪ್ಯಾಟೆಗೆ ಬಂದʼ ಖ್ಯಾತಿಯ ಬಾವತೀಶ್‌ ಬೈಕ್‌ ಅಪಘಾತಕ್ಕೆ ಬಲಿ..! ಉ.ಕ.ಜಿಲ್ಲೆ: ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ʻಹಳ್ಳಿ ಹೈದ ಪ್ಯಾಟೆಗೆ ಬಂದ ಸೀಸನ್‌ 3'ರ ಮೂಲಕ ನಾಡಿನ ಮನೆನಾತಾಗಿದ್ದ ಯುವ ಪ್ರತಿಭೆ ಬಾವತೀಶ್‌ (28) ಭೀಕರ ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ಮಂಗಳವಾರ ಮಧ್ಯಾಹ್ನ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿಕೆರೆ ಬಳಿ ಈ ದುರ್ಘಟನೆ ಸಂಭವಿಸಿದೆ. ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಬಾವತೀಶ್‌ ಬೈಕ್‌ ಡಿಕ್ಕಿ! ಮೂಲತಃ ಹಳಿಯಾಳ ತಾಲೂಕಿನ ವಾಡಗರಡೊಳ್ಳಿ ಗ್ರಾಮದ ನಿವಾಸಿಯಾದ ಬಾವತೀಶ್, ಮಂಗಳವಾರ ಮಧ್ಯಾಹ್ನ ತಮ್ಮ ಬೈಕ್‌ನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ, ರಸ್ತೆ ಬದಿಯಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಬಾವತೀಶ್‌ ಅವರ ಬೈಕ್‌ ಹಿಂಬದಿಯಿಂದ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ತಲೆಗೆ ಬಿದ್ದ ಬಲವಾದ ಪೆಟ್ಟು ಮತ್ತು ಸುಟ್ಟ ಗಾಯಗಳಿಂದ ಬಾವತೀಶ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಪ್ರಸ್ತುತ ಈ ಬಗ್ಗೆ ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ʻಹಳ್ಳಿ ಹೈದ ಪ್ಯಾಟೆಗೆ ಬಂದʼ ರಿಯಾಲಿಟಿ ಶೋ ಕರ್ನಾಟಕದಾದ್ಯಂ...

ಟ್ರಂಪ್​ಗೆ ಸೆಡ್ಡು ಹೊಡೆದ ಟೆಹ್ರಾನ್; ಯುದ್ಧ ನಿಲ್ಲಿಸಲು 5 ಷರತ್ತು ವಿಧಿಸಿದ ಇರಾನ್..!

Image
ಟ್ರಂಪ್​ಗೆ ಸೆಡ್ಡು ಹೊಡೆದ ಟೆಹ್ರಾನ್; ಯುದ್ಧ ನಿಲ್ಲಿಸಲು 5 ಷರತ್ತು ವಿಧಿಸಿದ ಇರಾನ್..! ಟೆಹ್ರಾನ್ , ಮಾರ್ಚ್ 25: ಕಳೆದ 2 ದಿನಗಳಿಂದ ಡೊನಾಲ್ಡ್ ಟ್ರಂಪ್ (Donald Trump) ಈ ಯುದ್ಧ ಸಾಕಾಗಿದೆ ಎಂಬಂತೆ ವರ್ತಿಸಿದ್ದರು. ಇರಾನ್ ಜೊತೆ ಕದನವಿರಾಮದ ಸುಳಿವನ್ನೂ ನೀಡಿದ್ದರು. ಹಾಗೇ, ಇರಾನ್ ಮೇಲಿನ ದಾಳಿಯನ್ನು ಕೊನೆಗೊಳಿಸಲು 15 ಅಂಶಗಳ ಶಾಂತಿ ಯೋಜನೆಯನ್ನು ಘೋಷಿಸಿದ್ದರು. ಆದರೆ, ಅವರ ಈ ನಿರ್ಧಾರವನ್ನು ತಿರಸ್ಕರಿಸಿರುವ ಇರಾನ್ ಅಮೆರಿಕಕ್ಕೆ ತಕ್ಕ ತಿರುಗೇಟು ನೀಡಿದೆ. ಈ ಯುದ್ಧವನ್ನು ಯಾವಾಗ ಕೊನೆಗೊಳಿಸಬೇಕು, ಹೇಗೆ ಕೊನೆಗೊಳಿಸಬೇಕೆಂದು ಟ್ರಂಪ್ ನಿರ್ಧರಿಸಲು ನಾವು ಅವಕಾಶ ನೀಡುವುದಿಲ್ಲ. ಈ ಯುದ್ಧ ನಿಲ್ಲಬೇಕಾದರೆ ನಾವು ಹಾಕುವ 5 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಇರಾನ್ ಘೋಷಿಸಿದೆ. ತನ್ನ ಷರತ್ತುಗಳು ಪೂರೈಸಿದರೆ ಮಾತ್ರ ಯುದ್ಧವನ್ನು ಕೊನೆಗೊಳಿಸುವುದಾಗಿ ಇರಾನ್ ಹೇಳಿದೆ. ಕದನ ವಿರಾಮಕ್ಕೆ ಸಮಯವನ್ನು ನಿಗದಿಪಡಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಪ್ರಯತ್ನವನ್ನು ದೃಢವಾಗಿ ತಿರಸ್ಕರಿಸಿರುವ ಇರಾನ್ ಅಮೆರಿಕ ಪಶ್ಚಿಮ ಏಷ್ಯಾದ ಯುದ್ಧದಲ್ಲಿ ಅತಿಯಾಗಿ ಮೂಗು ತೂರಿಸುತ್ತಿದೆ ಎಂದು ಟೀಕಿಸಿದೆ. ಇದರ ನಡುವೆ ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಇರಾನ್ ದೃಢ ನಿಲುವನ್ನು ತೆಗೆದುಕೊಂಡಿದೆ. ಯುದ್ಧ ನಿಲ್ಲಿಸಲು ಇರಾನ್ ಹಾಕಿರುವ 5 ಪ್ರಮುಖ ಷರತ್ತುಗಳು ಹೀಗಿವೆ. 1. ಅಮೆರಿಕ ಮತ್ತು ಇಸ್ರೇಲ್‌ನಿಂದ...

ಬಸ್ ಹತ್ತಲು ಮುಗಿಬಿದ್ದ ವಿದ್ಯಾರ್ಥಿಗಳು - ಚಕ್ರಕ್ಕೆ ಸಿಲುಕಿ ಕಾಲೇಜು ವಿದ್ಯಾರ್ಥಿನಿಯ ಕಾಲು ನುಜ್ಜುಗುಜ್ಜು.!

Image
ಬಸ್ ಹತ್ತಲು ಮುಗಿಬಿದ್ದ ವಿದ್ಯಾರ್ಥಿಗಳು - ಚಕ್ರಕ್ಕೆ ಸಿಲುಕಿ ಕಾಲೇಜು ವಿದ್ಯಾರ್ಥಿನಿಯ ಕಾಲು ನುಜ್ಜುಗುಜ್ಜು.! ತುಮಕೂರು: ನಗರದ ದೇವರಾಜ್ ಅರಸ್ ಕೆ ಎಸ್‌ ಆರ್‌ ಟಿ ಸಿ ಬಸ್ ನಿಲ್ದಾಣದಲ್ಲಿ ಇಂದು ಕಾಲೇಜು ವಿದ್ಯಾರ್ಥಿಗಳು ಬಸ್ ಹತ್ತಲು ಏಕಾಏಕಿ ಮುಗಿಬಿದ್ದ ಪರಿಣಾಮ, ದಾರುಣ (Shocking) ಅಪಘಾತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಬಸ್‌ನ ಹಿಂಬದಿಯ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿಯೊಬ್ಬಳ ಕಾಲು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ತುಮಕೂರಿನಿಂದ ಪಾವಗಡಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ, ಅಲ್ಲಿದ್ದ ನೂರಾರು ಕಾಲೇಜು ವಿದ್ಯಾರ್ಥಿಗಳು ಸೀಟು ಹಿಡಿಯುವ ತರಾತುರಿಯಲ್ಲಿ ಒಮ್ಮೆಲೇ ಬಸ್‌ನ ಬಾಗಿಲಿನ ಬಳಿ ನುಗ್ಗಿದ್ದಾರೆ. ಈ ನೂಕುನುಗ್ಗಲಿನ ನಡುವೆ, ವಿದ್ಯಾರ್ಥಿನಿಯೊಬ್ಬಳು ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ದುರದೃಷ್ಟವಶಾತ್, ಅದೇ ಸಮಯದಲ್ಲಿ ಬಸ್ ಚಲಿಸಿದ್ದರಿಂದ ಆಕೆಯ ಕಾಲು ಬಸ್‌ನ ಹಿಂದಿನ ಚಕ್ರದ ಕೆಳಗೆ ಸಿಲುಕಿದೆ. ಈ ಭೀಕರ ಅಪಘಾತದಲ್ಲಿ ವಿದ್ಯಾರ್ಥಿನಿಯ ಕಾಲು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಆಕೆ ತೀವ್ರವಾಗಿ ಗಾಯಗೊಂಡಿದ್ದಾಳೆ. ತಕ್ಷಣವೇ ಅಲ್ಲಿದ್ದವರು ಮತ್ತು ಬಸ್ ನಿಲ್ದಾಣದ ಸಿಬ್ಬಂದಿ ಗಾಯಾಳು ವಿದ್ಯಾರ್ಥಿನಿಯನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಆಕೆಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.