Posts

Showing posts from March, 2025

ಅತ್ಯಾಚಾರ ಆರೋಪ : ಕುಂಭಮೇಳದ ಬೆಡಗಿ ಮೊನಾಲಿಸಾಗೆ ಸಿನಿಮಾ ಆಫರ್ ನೀಡಿದ್ದ ನಿರ್ದೇಶಕ 'ಸನೋಜ್ ಮಿಶ್ರಾ' ಅರೆಸ್ಟ್.!

Image
ಅತ್ಯಾಚಾರ ಆರೋಪ : ಕುಂಭಮೇಳದ ಬೆಡಗಿ ಮೊನಾಲಿಸಾಗೆ ಸಿನಿಮಾ ಆಫರ್ ನೀಡಿದ್ದ ನಿರ್ದೇಶಕ 'ಸನೋಜ್ ಮಿಶ್ರಾ' ಅರೆಸ್ಟ್.! ನಿರ್ದೇಶಕ ಸನೋಜ್ ಮಿಶ್ರಾ ಈ ಹಿಂದೆ ಮಹಾ ಕುಂಭ ಸೆನ್ಸೇಷನ್ ಮೊನಾಲಿಸಾಗೆ ಸಿನಿಮಾದ ಆಫರ್ ನೀಡುವ ಮೂಲಕ ಸುದ್ದಿಯಾಗಿದ್ದರು. ಇತ್ತೀಚಿನ ಬೆಳವಣಿಗೆಯಲ್ಲಿ ಅತ್ಯಾಚಾರ ಆರೋಪದ ಮೇಲೆ ಅವರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಯುವತಿಯೊಬ್ಬಳು ತನ್ನನ್ನು ಚಲನಚಿತ್ರ ತಾರೆಯನ್ನಾಗಿ ಮಾಡುವುದಾಗಿ ಸುಳ್ಳು ಭರವಸೆಗಳೊಂದಿಗೆ ಆಮಿಷವೊಡ್ಡಿ ಪದೇ ಪದೇ ಶೋಷಣೆ ಮಾಡುತ್ತಿದ್ದಾನೆ ಎಂದು ಆರೋಪಿಸಿದ್ದಾರೆ. ವರದಿಗಳ ಪ್ರಕಾರ, ಝಾನ್ಸಿಯಲ್ಲಿ ವಾಸಿಸುತ್ತಿದ್ದಾಗ 2020 ರಲ್ಲಿ ಟಿಕ್ಟಾಕ್ ಮತ್ತು ಇನ್ಸ್ಟಾಗ್ರಾಮ್ ಮೂಲಕ ಸನೋಜ್ ಮಿಶ್ರಾ ಅವರೊಂದಿಗೆ ಮೊದಲ ಬಾರಿಗೆ ಸಂಪರ್ಕ ಹೊಂದಿದ್ದೆ ಎಂದು ಸಂತ್ರಸ್ತೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಕಾಲಾನಂತರದಲ್ಲಿ, ಅವರು ಆಗಾಗ್ಗೆ ಮಾತನಾಡುತ್ತಿದ್ದರು, ಮತ್ತು ಜೂನ್ 17, 2021 ರಂದು, ಮಿಶ್ರಾ ಅವರು ಝಾನ್ಸಿ ರೈಲ್ವೆ ನಿಲ್ದಾಣದಲ್ಲಿದ್ದಾರೆ ಎಂದು ಹೇಳಿ ಅವಳಿಗೆ ಕರೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅವಳು ಅವನನ್ನು ಭೇಟಿಯಾಗಲು ನಿರಾಕರಿಸಿದಾಗ, ಅವಳು ಬರದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅವನು ಬೆದರಿಕೆ ಹಾಕಿದ್ದಾನೆ ಎಂದು ವರದಿಯಾಗಿದೆ. ಅವನ ಬೆದರಿಕೆಗಳಿಗೆ ಹೆದರಿದ ಸಂತ್ರಸ್ತೆ ಮರುದಿನ ಅವನನ್ನು ಭೇಟಿಯಾಗಲು ಒಪ್ಪಿಕೊಂಡಳು. ಜೂನ್ 18...

"100 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು: ಪವಾಡ ಎಂಬಂತೆ ಐವರು ಪಾರು! ಸ್ಥಳಕ್ಕೆ ಧಾವಿಸಿದ ಆಪದ್ಬಾಂಧವ ಹಾಗೂ ಸಮಾಜ ಸೇವಕ ಆರಿಫ್ "

Image
"100 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು: ಪವಾಡ ಎಂಬಂತೆ ಐವರು ಪಾರು!  ಸ್ಥಳಕ್ಕೆ ಧಾವಿಸಿದ ಆಪದ್ಬಾಂಧವ  ಹಾಗೂ ಸಮಾಜ ಸೇವಕ ಆರಿಫ್ " ಚಿಕ್ಕಮಗಳೂರು: - ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರ ಕಾರೊಂದು ಸುಮಾರು 100 ಅಡಿ ಆಳದ ಕಂದಕಕ್ಕೆ ಬಿದ್ದಿರುವ ಘಟನೆ ಜರುಗಿದೆ. ಕಾರು‌ 100 ಆಳದ ಪ್ರಪಾತಕ್ಕೆ ಬಿದ್ದರೂ ಕಾರಿನಲ್ಲಿದ್ದ ಐವರು ಪವಾಡ ಸದೃಶ್ಯ ಪಾರಾಗಿದ್ದಾರೆ. ಕಾರಿನಲ್ಲಿದ್ದ ಶಂಕರ್, ಸೀತಮ್ಮ, ಭಾನುಪ್ರಿಯಾ, ಆರಾಧ್ಯ, ಹರೀಶ್, ಶ್ರೇಯಸ್ ಸೇರಿ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನಲ್ಲಿದ್ದ 2 ವರ್ಷದ ಮಗುವಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಮಗುವನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಆರು ಜನರ ಕುಟುಂಬ ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ಧಾರ್ಮಿಕ ಪ್ರವಾಸ ಹೊರಟಿದ್ದರು. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಆರಂಭದಲ್ಲೇ ಮಲಯ ಮಾರುತ ಬಳಿ ಕಾರು, ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಸಮಾಜ ಸೇವಕ ಆರೀಫ್ ಕೂಡಲೇ ಸ್ಥಳಕ್ಕೆ ತೆರಳಿ ಎಲ್ಲರನ್ನೂ ಮೇಲೆತ್ತಿ ಆಂಬುಲೆನ್ಸ್‌ನಲ್ಲಿ ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿದರು. ಈ ಜಾಗದಲ್ಲಿ ತಡೆಗೋಡೆ ಅಳವಡಿಸದೇ ಇರುವುದೇ ಅಪಾಯಕ್ಕೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. Charmadi Ghat: Car falls into 100-foot-deep gorge; six people miraculously escape A car ...

"ಮುದ್ದಾದ ಹೆಂಡತಿ ಕೊಂದು, ಸೂಟ್‌ಕೇಸ್‌ಗೆ ತುಂಬಿದ ಪತಿರಾಯ!"

Image
"ಮುದ್ದಾದ ಹೆಂಡತಿ ಕೊಂದು, ಸೂಟ್‌ಕೇಸ್‌ಗೆ ತುಂಬಿದ ಪತಿರಾಯ!" ಬೆಂಗಳೂರು/ ಆನೇಕಲ್ (ಮಾ.27): ಮಹರಾಷ್ಟ್ರದಿಂದ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದು ವಾಸವಾಗಿದ್ದ ದಂಪತಿ ಹಲವು ವರ್ಷಗಳಿಂದ ಇಲ್ಲಿ ಅನ್ಯೋನ್ಯವಾಗಿದ್ದರು. ಆದರೆ, ಇದ್ದಕ್ಕಿದ್ದಂತೆ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಗಂಡನೇ ತನ್ನ ಹೆಂಡತಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ್ದಾನೆ. ನಂತರ, ಹೆಂಡತಿ ಮನೆಯವರಿಗೆ ಕರೆ ಮಾಡಿ ಮಾಹಿತಿ ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ಜೋಡಿಯೊಂದ ಉದ್ಯೋಗ ನಿಮಿತ್ತ ಬೆಂಗಳೂರಿನ ಹೊರವಲಯ ಹುಳಿಮಾವು ಸಮೀಪದ ದೊಡ್ಡ ಕಮ್ಮನಹಳ್ಳಿಯ ಮನೆಯೊಂದರಲ್ಲಿ ವಾಸವಾಗಿದ್ದರು. ರಾಕೇಶ್ ರಾಜೇಂದ್ರ ಹಾಗೂ ಗೌರಿ ಅನಿಲ್ ಸಾಂಬೆಕರ್ ಕೆಲ ವರ್ಷಗಳಿಂದ ಇಲ್ಲಿ ಅನ್ಯೋನ್ಯವಾಗಿದ್ದರು. ಆಗಾಗ್ಗೆ ಮಹಾರಾಷ್ಟ್ರಕ್ಕೂ ಹೋಗಿ ಬರುತ್ತಿದ್ದರು. ಆದರೆ, ಕೆಲ ದಿನಗಳಿಂದ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ತಡರಾತ್ರಿ ವೇಳೆಯೂ ಇಬ್ಬರ ಜಗಳ ಪಕ್ಕದ ಮನೆಯವರಿಗೂ ಕೇಳಿಸುತ್ತಿತ್ತು. ಆದರೆ, ಇದೀಗ ಗಂಡ ರಾಕೇಶ್‌ನೇ ತನ್ನ ಹೆಂಡತಿ ಗೌರಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ್ದಾನೆ. ಈ ಮೃತದೇಹವನ್ನು ಬೀಸಾಡಬೇಕು ಎಂದುಕೊಂಡಾಗ ಕೊಲೆ ಮಾಡಿದ ನಂತರ ಪಶ್ಚಾತ್ತಾಪ ಉಂಟಾಗ...

ಎನ್. ಆರ್. ಪುರ: ತುಂಗಾ ನದಿಗೆ ಹಾರಿ ರೈತ ಆತ್ಮಹತ್ಯೆ

Image
ಎನ್. ಆರ್. ಪುರ: ತುಂಗಾ ನದಿಗೆ ಹಾರಿ ರೈತ ಆತ್ಮಹತ್ಯೆ ತುಂಗಾ ನದಿಗೆ ಹಾರಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.‌ ಆರ್.‌ ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಮುತ್ತಿನಕೊಪ್ಪ ಗ್ರಾಪಂನ ಜಯಂತಿ ಕಾಲನಿ ಗ್ರಾಮದ ಕೆ.ಕಣಬೂರು ದೇವು (57) ಆತ್ಮಹತ್ಯೆ ಮಾಡಿಕೊಂಡ ರೈತ. ದೇವು ಭಾನುವಾರ ಮಧ್ಯಾಹ್ನ ಮನೆ ಬಿಟ್ಟು ಹೋದವರು ಮರಳಿ ಬಂದಿರಲಿಲ್ಲ. ಸಂಜೆ ವೇಳೆಗೆ ತುಂಗಾ ನದಿ ದಡದಲ್ಲಿ ಅವರ ಚಪ್ಪಲಿ ಕಂಡುಬಂದಿತ್ತು. ಸಂಜೆ 6.45ರ ಸುಮಾರಿಗೆ ನದಿಯಲ್ಲಿ ಶವ ಪತ್ತೆಯಾಗಿದೆ. ದೇವು ನಾಲ್ಕು ಎಕರೆ ಜಮೀನು ಹೊಂದಿದ್ದರು. ಜಮೀನು ಅಭಿವೃದ್ಧಿಗಾಗಿ ಬ್ಯಾಂಕ್‌ ನಲ್ಲಿ ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರ ನಿರಂಜನ ಪೊಲೀಸರಿಗೆ ದೂರು ನೀಡಿದ್ದಾರೆ. N.R. Pura: Farmer commits suicide by jumping into Thunga River A farmer committed suicide by jumping into the Thunga River in Muthinakoppa Gram Panchayat limits of N.R. Pura taluk in Chikkamagaluru district. The deceased farmer is K. Kanabooru Devu (57), a resident of Jayanthi Colony in Muthinakoppa village. Devu left his house on Wednesday afternoon and did not retur...

"ಕೊನೆಯ ಅಡುಗೆ ಮಾಡಿದ್ದೇನೆ, ಊಟ ಮಾಡಿ, ಜೀವನ ಸಾಕಾಗಿದೆ' ಎಂದು ಪತಿಗೆ ಹೇಳಿ ಜೀವಕ್ಕೆ ವಿದಾಯ ಹೇಳಿದ ಶಿಕ್ಷಕಿ!"

Image
'ಕೊನೆಯ ಅಡುಗೆ ಮಾಡಿದ್ದೇನೆ, ಊಟ ಮಾಡಿ, ಜೀವನ ಸಾಕಾಗಿದೆ' ಎಂದು ಪತಿಗೆ ಹೇಳಿ ಜೀವಕ್ಕೆ ವಿದಾಯ ಹೇಳಿದ ಶಿಕ್ಷಕಿ! ದೆಹಲಿ :ಯ ಕೇಂದ್ರೀಯ ವಿದ್ಯಾಲಯ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 29 ವರ್ಷದ ಶಿಕ್ಷಕಿಯೊಬ್ಬರು ತಮ್ಮ ಪತಿ ಮತ್ತು ಅತ್ತೆ-ಮಾವನ ಕೈಯಲ್ಲಿ ಐದು ವರ್ಷಗಳ ಕಾಲ ನರಳಿದ ನಂತರ ತಮ್ಮ ಜೀವನವನ್ನು ಕೊನೆಗೊಳಿಸಿಕೊಂಡಿದ್ದಾರೆ. ಶಿಕ್ಷಕಿ ಅನ್ವಿತಾ ಶರ್ಮಾ ತಮ್ಮ ಹೆತ್ತವರಿಗೆ ಕೊನೆಯ ವಾಟ್ಸ್​ಆಯಪ್​ ಸಂದೇಶವನ್ನು ಕಳುಹಿಸಿ ಅದರಲ್ಲಿ ತಾವು ಅನುಭವಿಸಿರುವ ನೋವನ್ನು ತೆರೆದಿಟ್ಟಿದ್ದಾರೆ. "ಅವರು ಮದುವೆಯಾಗಿದ್ದು ನನ್ನನ್ನಲ್ಲ, ನನ್ನ ಕೆಲಸವನ್ನು. ನನ್ನ ಗಂಡನಿಗೆ ಕೆಲಸವೂ ಇದ್ದ ಸುಂದರ, ಶ್ರಮಶೀಲ ಹೆಂಡತಿ ಬೇಕಾಗಿದ್ದಳು. ನಾನು ನನ್ನ ಕೈಲಾದಷ್ಟು ಮಾಡಿದ್ದೇನೆ, ಆದರೆ ಅದು ಎಂದಿಗೂ ಅವರಿಗೆ ತೃಪ್ತಿ ಆಗಲೇ ಇಲ್ಲ. ಅವರು ಅತ್ತೆ-ಮಾವನ ಮೇಲೆ ಮಾತ್ರ ಗಮನಹರಿಸುವ ವ್ಯಕ್ತಿಯನ್ನು ಬಯಸಿದ್ದರು, ಆದರೆ ನನ್ನ ಪೋಷಕರು ಮತ್ತು ಸಹೋದರ ನನಗೆ ಅಷ್ಟೇ ಮುಖ್ಯವಾಗಿದ್ದರು. ಕಳೆದ ಐದು ವರ್ಷಗಳಲ್ಲಿ ನನ್ನ ಪತಿ ಮತ್ತು ಅತ್ತೆ ಕೊಟ್ಟ ನೋವು ಯಾರೂ ಅನುಭವಿಸಿರಲು ಸಾಧ್ಯವಿಲ್ಲ. ನಾನು ಮಾಡಿದ ಎಲ್ಲದರಲ್ಲೂ ಅವರಿಗೆ ತಪ್ಪುಗಳೇ ಕಂಡುಬರುತ್ತಿದ್ದವು' ಎಂದು ಬರೆದಿದ್ದಾರೆ. "ನನ್ನ ಗಂಡನಿಗೆ ನನ್ನ ಬ್ಯಾಂಕ್ ಖಾತೆಗಳು, ಚೆಕ್‌ಬುಕ್ ಮತ್ತು ಎಲ್ಲದರಲ್ಲೂ ಪ್ರವೇಶವಿದೆ' ಎಂದಿರುವ ಅನ್ವಿತಾ ಶರ್ಮಾ ಅವರ...

ಆ ಒಂದು ಸಣ್ಣ ಸಂಶಯ. ಗರ್ಲ್​ಫ್ರೆಂಡ್​ ಮತ್ತು ಆಕೆಯ ತಾಯಿಯನ್ನು ಬರ್ಬರವಾಗಿ ಕೊಂದ ಬಾಯ್​ಫ್ರೆಂಡ್​!

Image
ಆ ಒಂದು ಸಣ್ಣ ಸಂಶಯ. ಗರ್ಲ್​ಫ್ರೆಂಡ್​ ಮತ್ತು ಆಕೆಯ ತಾಯಿಯನ್ನು ಬರ್ಬರವಾಗಿ ಕೊಂದ ಬಾಯ್​ಫ್ರೆಂಡ್​! ಗರ್ಲ್ ಫ್ರೆಂಡ್ :ಆಕೆಗೆ ಕೇವಲ 16 ವರ್ಷ, ಆತನಿಗೆ 20 ವರ್ಷ… ಇಬ್ಬರೂ ಕಳೆದ ಆರು ತಿಂಗಳಿನಿಂದ ಗಾಢವಾಗಿ ಪ್ರೀತಿಸುತ್ತಿದ್ದರು. ಈ ಮಧ್ಯೆ, ಗೆಳತಿ ಕೆಲವು ದಿನಗಳಿಂದ ಬೇರೊಬ್ಬರ ಜೊತೆ ಚಾಟ್ ಮಾಡುತ್ತಿದ್ದಾಳೆಂಬ ಅನುಮಾನದಿಂದ ಇಬ್ಬರ ನಡುವೆ ಜಗಳ ಶುರುವಾಯಿತು. ಇದೇ ಸಂಶಯದಲ್ಲಿ ಚಾಕುವಿನಿಂದ ಗೆಳತಿ ಮತ್ತು ಆಕೆಯ ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿದ ಬಾಯ್​ಫ್ರೆಂಡ್​ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆ. ಆಂಧ್ರ ಪ್ರದೇಶದ ರಾಜಮಹೇಂದ್ರವರಂನಲ್ಲಿ ಭಾನುವಾರ (ಮಾರ್ಚ್​ 23) ಮುಂಜಾನೆ ಈ ಘಟನೆ ನಡೆದಿದೆ. ಪೊಲೀಸರು ಮತ್ತು ಸ್ಥಳೀಯರ ಹೇಳಿಕೆ ಪ್ರಕಾರ, ಎಲೂರಿನ ಎಎಸ್‌ಆರ್ ಕ್ರೀಡಾಂಗಣ ಪ್ರದೇಶದ ಮೊಹಮ್ಮದ್ ಸಲ್ಮಾ (38) ಮತ್ತು ಅವರ ಮಗಳು ಮೊಹಮ್ಮದ್ ಸಾನಿಯಾ ಅಲಿಯಾಸ್ ಸನಾ (16) ಕಳೆದ ಮೂರು ತಿಂಗಳಿನಿಂದ ರಾಜಮಹೇಂದ್ರವರಂನ ಹುಕುಂಪೇಟೆಯಲ್ಲಿ ವಾಸಿಸುತ್ತಿದ್ದರು. ಸಲ್ಮಾ, ಜಾಂಪೆಟ್ ಪ್ರದೇಶದ ಮೊಹಮ್ಮದ್ ಅಬ್ದುಲ್ ಮಜೀದ್ ಅವರ ಎರಡನೇ ಪತ್ನಿ. ತನ್ನ ಪತಿ ಮೂರು ವರ್ಷಗಳ ಹಿಂದೆ ನಿಧನರಾದರು. ಮೊದಲ ಪತ್ನಿಗೆ ಮೂವರು ಗಂಡು ಮಕ್ಕಳಿದ್ದಾರೆ. ಅವರು ಜಾಂಪೆಟ್‌ನಲ್ಲಿ ವಾಸಿಸುತ್ತಿದ್ದಾರೆ. ಮೊಹಮ್ಮದ್ ಸಾನಿಯಾ ಕಾರ್ಯಕ್ರಮಗಳಿಗೆ ನಿರೂಪಕಿಯಾಗಿ ಕೆಲಸ ಮಾಡುತ್ತಾರೆ. ಸಲ್ಮಾ ಮತ್ತು ಸಾನಿಯಾ ಜೊತೆಗೆ, ಮಜೀದ್ ಅವರ ಮೊದಲ ಪತ್ನಿಯ ಕಿರಿಯ...

ಉಡುಪಿ ಅಂಬಾಗಿಲು ಬಳಿ ಲಾರಿ ಪಲ್ಟಿ : ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ವಿಶು ಶೆಟ್ಟಿಯವರು

Image
ಉಡುಪಿ ಅಂಬಾಗಿಲು ಬಳಿ ಲಾರಿ ಪಲ್ಟಿ : ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ವಿಶು ಶೆಟ್ಟಿಯವರು   ಉಡುಪಿ : ಉಡುಪಿ ಅಂಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಜರಿ ಸಾಮಾನುಗಳನ್ನು ಕೊಂಡೊಯ್ಯುತ್ತಿದ್ದ ಲಾರಿ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದರಲ್ಲಿದ್ದ ಕಾರ್ಮಿಕರು ಸೇರಿ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ದುರ್ಘಟನೆ ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಲಾರಿ ಚಾಲಕ, ನಾಲ್ಕು ಮಂದಿ ಕಾರ್ಮಿಕರು ಹಾಗೂ ಬೈಕ್ ಸವಾರನನ್ನು ತಮ್ಮ ವಾಹನದಲ್ಲಿಯೇ ಕರೆದೊಯ್ದು ಅಂಬಲಪಾಡಿ ಜಂಕ್ಷನ್ ಬಳಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ, ಮಾನವೀಯತೆ ಮೆರೆದಿದ್ದಾರೆ. ಈ ದುರ್ಘಟನೆ ಸಂಭವಿಸುವ ಮುಂಚೆ ಅದೇ ಸ್ಥಳದಲ್ಲಿ ಬೈಕ್ ಸವಾರನೊಬ್ಬ ತನ್ನ ಬೈಕ್ ನಿಲ್ಲಿಸಿ ಪಕ್ಕದಲ್ಲಿ ನಿಂತಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾನೆ.ಆದರೆ ಈತನ ಬೈಕ್ ಮಾತ್ರ ಲಾರಿಯ ಅಡಿಗೆ ಬಿದ್ದು ನಜ್ಜುಗುಜ್ಜಾಗಿದೆ. ಪ್ರಕರಣದ ಬಗ್ಗೆ ಉಡುಪಿ ಸಂಚಾರಿ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ. A lorry carrying goods overturned near Ambagilu in Udupi, injuring six people, including the driver and four laborers. A bike rider who stopped his bike and stood aside narrowly escaped disaste...

"ಶಾರದಾ ನರ್ಸಿಂಗ್ ಇನ್ಸ್ಟಿಟ್ಯೂಟ್" ಪ್ರವೇಶಾತಿ ಪ್ರಾರಂಭ 2025-2026

Image
"ಶಾರದಾ ನರ್ಸಿಂಗ್ ಇನ್ಸ್ಟಿಟ್ಯೂಟ್" ಪ್ರವೇಶಾತಿ ಪ್ರಾರಂಭ  2025-2026                    ಶೃಂಗೇರಿ : ಶಾರದಾ ನರ್ಸಿಂಗ್ ಇನ್ಸ್ಟಿಟ್ಯೂಟ್  ಭಾತದ ಕರ್ನಾಟಕದ ಶೃಂಗೇರಿಯಲ್ಲಿದೆ. ಇದು ಜನರಲ್ ನರ್ಸಿಂಗ್ ಮತ್ತು ಮಿಡ್‌ವೈಫರಿ (GNM) ಮತ್ತು ನರ್ಸಿಂಗ್‌ನಲ್ಲಿ ಬ್ಯಾಚುಲರ್ ಆಫ್ ಸೈನ್ಸ್ (BSc ನರ್ಸಿಂಗ್) ಸೇರಿದಂತೆ ನರ್ಸಿಂಗ್ ಶಿಕ್ಷಣ ಕಾರ್ಯಕ್ರಮಗಳನ್ನು ನೀಡುತ್ತದೆ. ಈ ಸಂಸ್ಥೆಯು ಕರ್ನಾಟಕ ರಾಜ್ಯ ಡಿಪ್ಲೊಮಾ ಇನ್ ನರ್ಸಿಂಗ್ ಪರೀಕ್ಷಾ ಮಂಡಳಿ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದೊಂದಿಗೆ ಸಂಯೋಜಿತವಾಗಿದೆ.    ಅಷ್ಟೇ ಅಲ್ಲದೆ ಈ ಒಂದು ಸಂಸ್ಥೆ 2004ರಲ್ಲಿ ಸ್ಥಾಪನೆಯಾಗಿದ್ದು ಪ್ರತಿ ವರ್ಷ ವು ಜಿಎನ್ಎಂ ಮತ್ತು ಬಿಎಸ್‌ಸಿ ಸೇರಿದಂತೆ ಸುಮಾರು 120 ವಿದ್ಯಾರ್ಥಿಗಳು ಶೇಕಡ 100% ಉತ್ತಮ ಫಲಿತಾಂಶ ದಿಂದ ತೇರ್ಗಡೆಯಾಗಿದ್ದು ನಮ್ಮ ದೇಶದ ಒಳಭಾಗದಲ್ಲಿ ಸೇವೆಯನ್ನ ಸಲ್ಲಿಸುವುದರಲ್ಲದೇ ಅಂತರಾಷ್ಟ್ರೀಯ ಮಟ್ಟದಲ್ಲಿ ಸೇವೆಯನ್ನ ಸಲ್ಲಿಸುತ್ತಿರುವುದು ನಮ್ಮ " ಶಾರದಾ ನರ್ಸಿಂಗ್ ಇನ್ಸ್ಟಿಟ್ಯೂಟ್ ಶೃಂಗೇರಿ " ಸಂಸ್ಥೆ ನೀಡುತ್ತಿರುವುದು ಒಂದು ಹೆಮ್ಮೆಯ ವಿಚಾರವಾಗಿದೆ. ಹಾಗಾಗಿ ಮಕ್ಕಳ ಭವಿಷ್ಯವನ್ನು ರೂಪಿಸೂದರಲ್ಲದೇ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ವಿದ್ಯಾರ್ಥಿಗಳು ದೇಶ ವಿದ...

"ವಾಮಾಚಾರದ ಆತಂಕದಲ್ಲಿ ಮಹಿಳೆ ಆತ್ಮಹತ್ಯೆ.!"

Image
"ವಾಮಾಚಾರದ ಆತಂಕದಲ್ಲಿ ಮಹಿಳೆ ಆತ್ಮಹತ್ಯೆ.!"   ಚಿಕ್ಕಮಗಳೂರು: ದಶಕದ ಹಿಂದೆ ಭಕ್ತರಹಳ್ಳಿಯ ಮಂಜು ಎಂಬುವವರ ಜೊತೆ ವಿವಾಹವಾಗಿದ್ದ ಜಯಂತಿ, ಮೂಲತಃ ಬೇಲೂರು ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದ ಬೋವಿ ಕಾಲೋನಿಯವರು. ಇವರು ತಮ್ಮ ಮೇಲೆ ಯಾರೋ ವಾಮಾಚಾರ ಮಾಡಿಸಿದ್ದಾರೆ ಎಮದು ಭಯಗೊಂಡು ಮಾಡಿದ್ದು ಏನು ಅಂತ ಗೊತ್ತಾದ್ರೆ ನೀವು ಶಾಕ್ ಆಗ್ತೀರಿ. ಜಿಲ್ಲೆಯ ಭಕ್ತರಹಳ್ಳಿ ಜಯಂತಿ ತನ್ನ ಮೇಲೆ ವಾಮಾಚಾರದ ಪ್ರಯೋಗ ನಡೆದಿದೆ ಎಂದು ಆತಂಕದಿಂದ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.      ಚಿಕ್ಕಮಗಳೂರಿನ ಭತ್ತರಹಳ್ಳಿ ಗ್ರಾಮದ ಮೃತ ದುರ್ದೈವಿ ಜಯಂತಿ(29) ಆಗಿದ್ದು. ಇದೇ ಗ್ರಾಮದ ಇಬ್ಬರು ವಾಮಾಚಾರದ ಪ್ರಯೋಗ ಮಾಡಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳಿಗೆ ಸೂಕ್ತ ಹಾಗೂ ಕಠಿಣ ಶಿಕ್ಷೆಗೆ ಒಳ ಪಡಿಸಬೇಕೆಂದು ಮೃತ ಜಯಂತಿಯ ಪತಿ ಮಂಜು ಆಗ್ರಹಿಸಿದ್ದಾರೆ. Chickamagalore: 29-year-old woman, Jayanthi, from Bhaktharahalli village in Chikkamagaluru district, allegedly committed suicide by consuming poison after being terrified by black magic performed on her. The deceased, Jayanthi, was a res...

" ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಯುವಕ ಆತ್ಮಹತ್ಯೆ"

Image
" ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಯುವಕ ಆತ್ಮಹತ್ಯೆ"          ಕೊಪ್ಪ :ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಸಮೀಪದ ಸಾಲುಮರ ಗ್ರಾಮದಲ್ಲಿ ನಡೆದಿದೆ. ವಿಘ್ನೇಶ್ (18) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೃತ ಬಾಲಕ ಕೊಪ್ಪ ಪಟ್ಟಣದ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷದ ಐಟಿಐ ಓದುತ್ತಿದ್ದ. ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.                ಕಳೆದ ಸುಮಾರು ನಾಲ್ಕು ವರ್ಷದ ಹಿಂದೆ ವಿಘ್ನೇಶ್‌ಗೆ ಅಪಘಾತವಾಗಿತ್ತು. ಆಗ ಅಪಘಾತದಲ್ಲಿ ತನ್ನ 17 ಹಲ್ಲುಗಳನ್ನ ಕಳೆದುಕೊಂಡಿದ್ದ. ಹಾಗಾಗಿ ಆಗಾಗ ಆಸ್ಪತ್ರೆಗೆ ಹೋಗಿ ಬರುತ್ತಿದ್ದ. ಸದಾ ಆಸ್ಪತ್ರೆಗೆ ಹೋಗಬೇಕು ಎಂದು ಬೇಜಾರಾಗಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. chickamagalore: young man in Salumarada village of Koppa taluk in Chikkamagaluru district committed suicide by hanging himself after being depressed about losing 17 teeth in an accident four years ag...

ಬ್ಯಾಂಕ್ ಮುಷ್ಕರ : 24 ಮತ್ತು 25 ರಂದು ಬ್ಯಾಂಕ್ ಬಂದ್.

Image
ಬ್ಯಾಂಕ್ ಮುಷ್ಕರ : 24 ಮತ್ತು 25 ರಂದು ಬ್ಯಾಂಕ್ ಬಂದ್.   ವಾರಕ್ಕೆ ಐದು ದಿನ ಮಾತ್ರ ಕೆಲಸ ನೇಮಕಾತಿ ತಾತ್ಕಾಲಿಕ ನೌಕರರ ಕೆಲಸ ಕಾಯಂಗೊಳಿಸುವಿಕೆ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಷ್ಟ್ರದಾದ್ಯಂತ  ಮಾರ್ಚ್ 24 ಮತ್ತು 25 ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ.  ಈ ಕುರಿತು  ಯುನೈಟೆಡ್ ಪೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯು ಎಫ್ ಬಿ ಯು) ನಿನ್ನೆ ಮಾಹಿತಿ ನೀಡಿದೆ.  ಭಾರತೀಯ ಬ್ಯಾಂಕುಗಳ ಸಂಘದೊಂದಿಗೆ ನಡೆದ ಮಾತು ಕಥೆಗಳು ವಿಫಲವಾದ ಹಿನ್ನೆಲೆಯಲ್ಲಿ 9 ಬ್ಯಾಂಕ್ ನೌಕರರ ಸಂಘಟನೆಯಾದ  ಯುನೈಟೆಡ್ ಪೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಅನಿವಾರ್ಯವಾಗಿ ಮುಷ್ಕರದ ನಿರ್ಧಾರಕ್ಕೆ ಬಂದಿದೆ. Bank strike : Bank bandh on March 24, 25. The United Forum of Bank Unions (UFBU) has given a call for a two-day nationwide bank strike on March 24 and 25. The strike has been called to press for various demands, including revision of wages, five-day banking, and regularization of temporary employees. The decision to go on strike was taken after talks between UFBU and the Indian Banks' Association (IBA) failed. Nine bank employee unions, under the aegis of UFBU...

ಪತಿಯನ್ನು ಕತ್ತರಿಸಿದ್ದ ಪಾಪಿ ಪತ್ನಿಯ ಮತ್ತೊಂದು ಕರಾಳ ಮುಖ ಬಯಲು ; ಹತ್ಯೆ ಬಳಿಕ ಪ್ರಿಯಕರನಿಗೆ ಚುಂಬಿಸಿದ ವಿಡಿಯೋ ವೈರಲ್

Image
ಪತಿಯನ್ನು ಕತ್ತರಿಸಿದ್ದ ಪಾಪಿ ಪತ್ನಿಯ ಮತ್ತೊಂದು ಕರಾಳ ಮುಖ ಬಯಲು ; ಹತ್ಯೆ ಬಳಿಕ ಪ್ರಿಯಕರನಿಗೆ ಚುಂಬಿಸಿದ ವಿಡಿಯೋ ವೈರಲ್ ಸೌರಭ್ ರಜಪೂತ್ ಅವರ ಹತ್ಯೆ ಪ್ರಕರಣದಲ್ಲಿ ಆಘಾತಕಾರಿ ವಿಡಿಯೋಗಳು ಒಂದೊಂದಾಗಿ ಹೊರಬರುತ್ತಿವೆ. ಇತ್ತೀಚಿನ ವಿಡಿಯೋದಲ್ಲಿ, ಸೌರಭ್‌ನ ಹಂತಕರಾದ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಭೀಕರವಾಗಿ ಹತ್ಯೆ ಮಾಡಿದ ನಂತರ ಸಂಭ್ರಮಿಸುತ್ತಿರುವುದು ಮತ್ತು ಪರಸ್ಪರ ಚುಂಬಿಸುತ್ತಿರುವುದು ಕಂಡುಬಂದಿದೆ. 12 ಸೆಕೆಂಡ್‌ಗಳ ಕ್ಲಿಪ್‌ನಲ್ಲಿ ಸಾಹಿಲ್, ಮುಸ್ಕಾನ್ ಕೈಯಿಂದ ಕೇಕ್ ತುಂಡನ್ನು ತಿನ್ನುತ್ತಾಳೆ ಮತ್ತು ಆಕೆಗೆ ಮುತ್ತಿಡುತ್ತಾನೆ. ಈ ಹಿಂದೆ, ಮಾರ್ಚ್ 11 ರಂದು ಸಾಹಿಲ್ ಶುಕ್ಲಾ ಹುಟ್ಟುಹಬ್ಬಕ್ಕೆ ಕೇಕ್ ಆರ್ಡರ್ ಮಾಡಲು ತನ್ನ ಕ್ಯಾಬ್ ಡ್ರೈವರ್‌ಗೆ ಮುಸ್ಕಾನ್ ಸೂಚಿಸಿದ್ದಳು ಎಂದು ತಿಳಿದುಬಂದಿದೆ. ವರದಿಗಳ ಪ್ರಕಾರ, ಕೇಕ್ ಆರ್ಡರ್ ಮಾಡಿದ ರಾತ್ರಿ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಕ್ಯಾಬ್ ಡ್ರೈವರ್, ಮುಸ್ಕಾನ್ ಮತ್ತು ಸಾಹಿಲ್ ಪರಸ್ಪರ ಪಾರ್ವತಿ ಮತ್ತು ಶಂಕರ ಎಂದು ಕರೆದುಕೊಳ್ಳುತ್ತಿದ್ದರು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾನೆ. ಶುಕ್ರವಾರ ಹೊರಬಂದ ಮತ್ತೊಂದು ವಿಡಿಯೋದಲ್ಲಿ ಮುಸ್ಕಾನ್ ಮತ್ತು ಸಾಹಿಲ್ ಹೋಳಿ ಬಣ್ಣಗಳಲ್ಲಿ ಮುಳುಗಿ ನಗುತ್ತಿರುವುದು ಕಂಡುಬಂದಿದೆ. ತನ್ನ ಪತಿಯನ್ನು ಕೊಂದ ನಂತರ, ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್, ಸೌರಭ್‌ನ ದೇಹವನ್ನು 15 ತುಂಡುಗಳಾಗಿ...

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆ: ಆಂತರಿಕ ತನಿಖೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್; ವರದಿ

Image
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆ: ಆಂತರಿಕ ತನಿಖೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್; ವರದಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾಗಿದ್ದು, ದೇಶದಾದ್ಯಂತ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಸುಪ್ರೀಂ ಕೋರ್ಟ್ ಈ ಬಗ್ಗೆ ಆಂತರಿಕ ತನಿಖೆ ಪ್ರಾರಂಭಿಸಿದೆ ಎಂದು Bar & Bench ವರದಿ ಮಾಡಿದೆ. ನ್ಯಾಯಮೂರ್ತಿ ಯಶವಂತ್ ವರ್ಮಾ ಊರಲ್ಲಿ ಇಲ್ಲದ ವೇಳೆ, ಮಾರ್ಚ್ 14 ರಂದು ಬೆಳಿಗ್ಗೆ 11.30ಕ್ಕೆ ದೆಹಲಿಯ ನ್ಯಾಯಾಂಗ ಬಡಾವಣೆಯ ಅವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಕುಟುಂಬಸ್ಥರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಂತರ ಮನೆಯ ಒಂದು ಕೋಣೆಯಲ್ಲಿ ಪೊಲೀಸರಿಗೆ ಭಾರೀ ಪ್ರಮಾಣದ ಹಣ ಕಂಡು ಬಂದಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ಅವರ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅವರು ಹಿರಿಯ ಸರ್ಕಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಮಾಹಿತಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ತಲುಪಿತ್ತು. ಅವರು ಗುರುವಾರ (ಮಾ.20) ಸಂಜೆ ತುರ್ತು ಕೊಲಿಜಿಯಂ ಸಭೆ ಕರೆದಿದ್ದರು. ಕೊಲಿಜಿಯಂ, ನ್ಯಾಯಮೂರ್ತಿ ವರ್ಮಾ ಅವರನ್ನು ಅವರ ಮಾತೃ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಸರ್ವಾನುಮತದಿಂದ ನಿರ್...