Posts

Showing posts from April, 2025

ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಸಚಿವ ಬೇಗಾನೆ ರಾಮಯ್ಯ ವಿಧಿವಶ..!

Image
ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಸಚಿವ ಬೇಗಾನೆ ರಾಮಯ್ಯ ವಿಧಿವಶ ಶೃಂಗೇರಿ : ಮಲೆನಾಡು ಭಾಗದ ಹಿರಿಯ ಕಾಂಗ್ರೆಸ್ ಧುರೀಣ, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ, ಸಚಿವ ಬೇಗಾನೆ ರಾಮಯ್ಯ ಅವರು ನಿಧನರಾಗಿದ್ದಾರೆ. ಬೇಗಾನೆ ರಾಮಯ್ಯ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಶಾಸಕ, ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಬೇಗಾನೆ ರಾಮಯ್ಯ ವಿಧಿವಶರಾಗಿದ್ದಾರೆ. ಅಂದಹಾಗೇ ಬೇಗಾನೆ ರಾಮಯ್ಯ ಅವರು 1978ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶೃಂಗೇರಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆ ಬಳಿಕ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣ ನೀರು ಪೂರೈಕೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಂತ ಅವರು, 1972ರಲ್ಲಿ ನರಸಿಂಹರಾಜಪುರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು. ಬೇಗಾನೆ ರಾಮಯ್ಯ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಸಂತಾಪ ಹಿರಿಯ ಕಾಂಗ್ರೆಸ್ ಧುರೀಣರಲ್ಲಿ ಒಬ್ಬರಾಗಿದ್ದ ಬೇಗಾನೆ ರಾಮಯ್ಯ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ,ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. 1978 ರಲ್ಲಿ ಶೃಂಗೇ...

ಶಿವಮೊಗ್ಗ: ಹೋಗ್ಬೇಡಿ ಅಂತಾ ಹೇಳಿದ್ದೆ, ಆದ್ರೂ ಕಾಶ್ಮೀರಕ್ಕೆ ಹೋದ್ರು! ಮೃತ ಮಂಜುನಾಥ್ ತಾಯಿಯ ಆಕ್ರಂದನ!

Image
ಶಿವಮೊಗ್ಗ: ಹೋಗ್ಬೇಡಿ ಅಂತಾ ಹೇಳಿದ್ದೆ, ಆದ್ರೂ ಕಾಶ್ಮೀರಕ್ಕೆ ಹೋದ್ರು! ಮೃತ ಮಂಜುನಾಥ್ ತಾಯಿಯ ಆಕ್ರಂದನ! ಶಿವಮೊಗ್ಗ: ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ. ಕುಟುಂಬಸ್ಥರು, ಸ್ನೇಹಿತರು, ವಿವಿಧ ಪಕ್ಷಗಳ ಮುಖಂಡರು ಮನೆಗೆ ಆಗಮಿಸುತ್ತಿದ್ದು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುತ್ತಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮೃತ ಮಂಜುನಾಥ್ ಅವರ ತಾಯಿ, ನಿನ್ನೆ ಟಿವಿ ವೀಕ್ಷಿಸುತ್ತಿರುವಾಗ ಈ ಸುದ್ದಿ ಸಿಕ್ಕಿತು. ಅನೇಕ ಮುಖಂಡರು ನಮ್ಮನ್ನು ಭೇಟಿಯಾಗಿದ್ದಾರೆ. ಮಂಜುನಾಥ್ ಹಾಗೂ ಅವರ ಪತ್ನಿ ಶುಕ್ರವಾರ ಕಾಶ್ಮೀರಕ್ಕೆ ತೆರಳಿದ್ದರು. ಅಲ್ಲಿಗೆ ಹೋಗಬೇಡಿ ಅಂತಾ ಹೇಳಿದ್ದೆ. ಆದರೆ ನನ್ನ ಮನವೊಲಿಸಿ ಕಾಶ್ಮೀರಕ್ಕೆ ತೆರಳಿದ್ದರು ಎಂದು ತಿಳಿಸಿದರು. ಮೊನ್ನೆ ಕಾಲ್ ಮಾಡಿದ್ದ ಮಂಜುನಾಥ್, ರಿಮೋಟ್ ಪ್ರದೇಶದಲ್ಲಿ ವಿಹಾರ ನಡೆಸುತ್ತಿರುವುದಾಗಿ ಹೇಳಿದ್ದರು. ಆದರೆ. ಕಳೆದ ಎರಡು ದಿನಗಳಿಂದ ನಮಗೆ ಕರೆ ಮಾಡಿಲ್ಲ ಎಂದು ಹೇಳುವ ಮೂಲಕ ಗದ್ಗದಿತರಾದರು.

ಪತ್ನಿ, ಮಗನ ಕಣ್ಣೆದುರೇ ಶಿವಮೊಗ್ಗ ಉದ್ಯಮಿ ಕೊಲೆ; ಹೋಗಿ ಮೋದಿಗೆ ಹೇಳಿ ಎಂದ ಉಗ್ರರು!

Image
ಪತ್ನಿ, ಮಗನ ಕಣ್ಣೆದುರೇ ಶಿವಮೊಗ್ಗ ಉದ್ಯಮಿ ಕೊಲೆ; ಹೋಗಿ ಮೋದಿಗೆ ಹೇಳಿ ಎಂದ ಉಗ್ರರು! ಬೆಂಗಳೂರು : ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿಯೊಬ್ಬರು ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಮಗನ ಕಣ್ಣೆದುರೇ ಉದ್ಯಮಿ ಮಂಜುನಾಥ್‌ ಅವರನ್ನು ಉಗ್ರರು ಕೊಂದಿದ್ದಾರೆ. ಈ ವೇಳೆ ನನ್ನ ಹಾಗೂ ಮಗನನ್ನೂ ಕೊಂದುಬಿಡಿ ಎಂದು ಮಂಜುನಾಥ್‌ ಪತ್ನಿ ಪಲ್ಲವಿ ಹೇಳಿದಾಗ, ನಿಮ್ಮನ್ನು ಕೊಲ್ಲಲ್ಲ, ಹೋಗಿ ಮೋದಿಗೆ ಹೇಳಿ ಎಂದು ಉಗ್ರರು ಹೇಳಿರುವುದಾಗಿ ತಿಳಿದುಬಂದಿದೆ. ಹೌದು, ಈ ಬಗ್ಗೆ ಉದ್ಯಮಿ ಮಂಜುನಾಥ್‌ ಅವರ ಪತ್ನಿ ಪಲ್ಲವಿ ಮಾಹಿತಿ ಹಂಚಿಕೊಂಡಿದ್ದಾರೆ. ಏ.19ರಂದು ಪ್ರವಾಸಕ್ಕೆ ಹೋಗಿದ್ದೆವು. ನಮ್ಮ ಕಣ್ಣೆದುರಿಗೇ ಪತಿಯನ್ನು ಉಗ್ರರು ಕೊಂದರು. ಪತಿಯನ್ನು ಕೊಲ್ಲುವಾಗ ನನ್ನ ಹಾಗೂ ಮಗನನ್ನು ಕೊಂದುಬಿಡಿ ಎಂದು ನಾವು ಉಗ್ರರಿಗೆ ಹೇಳಿದೆವು. ಆಗ ಅವರು ನಿಮ್ಮನ್ನು ಕೊಲ್ಲಲ್ಲ, ಹೋಗಿ ಮೋದಿಗೆ ಹೇಳಿ ಎಂದರು. ನನ್ನ ಪತಿ ಮೃತದೇಹವನ್ನು ಶಿವಮೊಗ್ಗಕ್ಕೆ ಸಾಗಿಸಲು ರಾಜ್ಯ ಸರ್ಕಾರ ಫ್ಲೈಟ್‌ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಇನ್ನು ರಾಜ್ಯದ ಪ್ರವಾಸಿಗರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿರುವ ಅಧಿಕಾರಿಗಳ ತಂಡವನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಲು ರಾಜ್ಯ ಸರ್ಕಾರ ಸೂಚಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ತೀರ...

ಮಾಜಿ ಡಿಜಿ-ಐಜಿಪಿ ಹತ್ಯೆ: ಕೊಲೆ ಬಳಿಕ ಬಾರ್‌ ನಲ್ಲಿ ಕುಡಿತಾ ಕುಳಿತಿದ್ದ ಮಗಳು!

Image
ಮಾಜಿ ಡಿಜಿ-ಐಜಿಪಿ ಹತ್ಯೆ: ಕೊಲೆ ಬಳಿಕ ಬಾರ್‌ ನಲ್ಲಿ ಕುಡಿತಾ ಕುಳಿತಿದ್ದ ಮಗಳು! ಬೆಂಗಳೂರು (ಏ.21): ಪತ್ನಿ ಮತ್ತು ಮಗಳಿಂದ ಹತ್ಯೆಯಾದ ಕರ್ನಾಟಕದ ಮಾಜಿ ಡಿಜಿ ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಪುತ್ರಿ ಕೃತಿ ತಲೆನೋವಾಗಿದ್ದಾಳೆ. ತಮ್ಮ ತಂದೆಯ ಹತ್ಯೆ ಬಳಿಕ ಮಗಳು ಕೃತಿ ಸ್ಥಳದಿಂದ ಓಡಿ ಹೋಗಿದ್ದಳು. ಪೊಲೀಸರು ಬಂದಾಗ ಪತ್ನಿ ಪಲ್ಲವಿ ಮಗಳು ಕಾಣಿಸುತ್ತಿಲ್ಲ ಎಂದಿದ್ದರು. ಹೀಗಾಗಿ ಪೊಲೀಸರು ಮಗಳ ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದರು. ಆಗ HSR ಲೇಔಟ್ ನ ಬಾರ್ ಒಂದರಲ್ಲಿರುವುದು ತಿಳಿಯಿತು. ಮದ್ಯಪಾನ ಮಾಡುತ್ತಾ ಕುಳಿತಿದ್ದ ಕೃತಿಯನ್ನು ಕರೆತಂದ ಪೊಲೀಸರು ಬಳಿಕ ಸೈಂಟ್ ಜಾನ್ಸ್ ಆಸ್ಪತ್ರೆಗೆ ಮೆಡಿಕಲ್ ಚೆಕ್ ಅಪ್ ಗೆ ಕರೆದುಕೊಂಡು ಹೋದರು. ಈ ವೇಳೆ ಮಹಿಳಾ ಕಾನ್ಸ್ಟೇಬಲ್ ಮೇಲೆ ಕೃತಿ ಹಲ್ಲೆ ಮಾಡಿದ್ದು, ಉಗುರಿನಿಂದ ಪರಚಿದ್ದಳು. ಬಳಿಕ ಮೆಡಿಕಲ್ ಚೆಕ್ ಅಪ್ ಗೂ ಸರಿಯಾಗಿ ಸ್ಪಂದಿಸಲಿಲ್ಲ. ಮತ್ತಿನಲ್ಲಿ ಇದ್ದುದರಿಂದ ಪೊಲೀಸರ ಮೇಲೆ ರೇಗಾಡಿದ್ದಳು. ಇದರಿಂದಾಗಿ ಕೃತಿಯನ್ನು ಸೈಂಟ್ ಜಾನ್ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ಪೊಲೀಸರು ಬಿಟ್ಟು ಬಂದಿದ್ದರು. ಇಂದು ಬೆಳಗ್ಗೆ HSR ಲೇಔಟ್ ಪೊಲೀಸ್ ಠಾಣೆಗೆ ಕರೆತಂದಾಗಲೂ ವ್ಯಾನ್ ನಿಂದ ಇಳಿಯಲು ನಕಾರ ಮಾಡಿದ್ದಾಳೆ. ಇನ್ನು ಕೃತ್ಯದಿಂದ ಮಗಳನ್ನು ಪಾರು ಮಾಡಲು ಯತ್ನಿಸುತ್ತಿರುವ ತಾಯಿ ಪಲ್ಲವಿ ಮಗಳು ಯಾವುದೇ ತಪ್ಪು ಮಾಡಿಲ್ಲ, ಅವಳನ್ನು ಬಿಟ್ಟು ಬಿಡಿ ಎನ್ನುತ್ತಿದ್ದಾ...

ನಿವೃತ್ತ ಡಿಜಿಪಿ ‌ಓಂಪ್ರಕಾಶ್ ಕೊಲೆ ಪ್ರಕರಣ‌: ಪೊಲೀಸರ ಮುಂದೆ ಸ್ಪೋಟಕ ವಿಚಾರ ಬಾಯ್ಬಿಟ್ಟ ಪತ್ನಿ ಪಲ್ಲವಿ!

Image
ನಿವೃತ್ತ ಡಿಜಿಪಿ ‌ಓಂಪ್ರಕಾಶ್ ಕೊಲೆ ಪ್ರಕರಣ‌: ಪೊಲೀಸರ ಮುಂದೆ ಸ್ಪೋಟಕ ವಿಚಾರ ಬಾಯ್ಬಿಟ್ಟ ಪತ್ನಿ ಪಲ್ಲವಿ! ಬೆಂಗಳೂರು :- ನಿವೃತ್ತ ಡಿಜಿಪಿ ‌ಓಂಪ್ರಕಾಶ್ ಕೊಲೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ‌‌ ಬಯಲಾಗುತ್ತಿದೆ. ಪೊಲೀಸರ ಮುಂದೆ ಕೊಲೆ ಆರೋಪಿ ಪಲ್ಲವಿ ಹೇಳಿಕೆ ನೀಡಿದ್ದು, ಕಳೆದ ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಪದೇ ಪದೇ ಗನ್ ತಂದು ನನಗೆ ಮತ್ತು ನನ್ನ ಮಗಳಿಗೆ ಶೂಟ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ರು. ಬೆಳಗ್ಗೆಯಿಂದ ಬೇರೆ ಬೇರೆ ವಿಚಾರಕ್ಕೆ ‌ಮನೆಯಲ್ಲಿ ಜಗಳ ಶುರುವಾಗಿತ್ತು. ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋದಾಗ ನಮ್ಮನ್ನೇ ಕೊಲೆ ಮಾಡಲು ಓಂಪ್ರಕಾಶ್ ‌ಯತ್ನ ನಡೆಸಿದ್ರು. ಈ ವೇಳೆ ನಮ್ಮನ್ನು ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದ್ವೀ. ನಂತರ ಓಂಪ್ರಕಾಶ್ ‌ಮೇಲೆ ಖಾರದ ಪುಡಿ ಹಾಗು ಅಡುಗೆ ಆಯಿಲ್ ಸುರಿದಿದ್ದರು. ನಂತರ ಓಂಪ್ರಕಾಶ್ ‌ಕೈಕಾಲು‌ ಕಟ್ಟಿ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಪಲ್ಲವಿ ಚುಚ್ಚಿದ್ದಾರೆ. ನಂತರ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಸಂಜೆ ಸ್ಥಳೀಯ ‌ಪೊಲೀಸರಿಗೆ ಪಲ್ಲವಿ ಮಾಹಿತಿ ನೀಡಿದ್ದಾರೆ. ಪ್ರಕರಣದಲ್ಲಿ ಪತ್ನಿ ಪಲ್ಲವಿ A-1 ಆರೋಪಿ ಆಗಿದ್ದಾರೆ. ಪ್ರಕರಣ ದಾಖಲಾದ ಕೂಡಲೇ ಪೊಲೀಸರು, ಅರೆಸ್ಟ್ ಪ್ರೋಸೆಸ್ ಮಾಡಲಿದ್ದಾರೆ. ಪ್ರಕರಣದಲ್ಲಿ ಓಂಪ್ರಕಾಶ್ ಮಗಳ ಪಾತ್ರದ ಬಗ್ಗೆ ವಿಚಾರಣೆ ಮಾಡಲಾಗುತ್ತಿದೆ. ಪ್ರಕರಣ ಸಂಬಂಧ...

ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ ಕೊಲೆ; ವಾಟ್ಸಪ್‌ ಗ್ರೂಪ್‌ನಲ್ಲಿ 2 ದಿನದ ಹಿಂದೆ ಪತ್ನಿ ಹಾಕಿದ್ದ ಸಂದೇಶ ಹುಟ್ಟುಹಾಕಿತು ಅನುಮಾನ!

Image
ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ ಕೊಲೆ; ವಾಟ್ಸಪ್‌ ಗ್ರೂಪ್‌ನಲ್ಲಿ 2 ದಿನದ ಹಿಂದೆ ಪತ್ನಿ ಹಾಕಿದ್ದ ಸಂದೇಶ ಹುಟ್ಟುಹಾಕಿತು ಅನುಮಾನ! ಬೆಂಗಳೂರು : 2015ರಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದ ಓಂ ಪ್ರಕಾಶ್‌ ಅವರ ಮೃತದೇಹ ಬೆಂಗಳೂರಿನ ಅವರ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿನ ನಿವಾಸದಲ್ಲಿ ಪತ್ತೆಯಾಗಿದೆ. ಇನ್ನು ಓಂ ಪ್ರಕಾಶ್‌ ಅವರ ಕೊಲೆಯಾಗಿದೆ ಎಂಬ ವಿಚಾರವನ್ನು ಅವರ ಪತ್ನಿಯೇ ಕರೆ ಮಾಡಿ ಪೊಲೀಸರಿಗೆ ತಿಳಿಸಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಸೈಂಟ್‌ ಜಾನ್ಸ್ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಕ್ಕಪಕ್ಕದ ನಿವಾಸದ ಜನರು ಗಂಡ ಹಾಗೂ ಹೆಂಡತಿ ನಡುವೆ ಅಷ್ಟೇನೂ ಹೊಂದಾಣಿಕೆ ಇಲ್ಲ ಎಂಬ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು, ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದೂ ಸಹ ಹೇಳಿದ್ದಾರೆ. ಹೀಗಾಗಿ ಪ್ರಾಥಮಿಕವಾಗಿ ಪತ್ನಿ ಹಾಗೂ ಕೊಲೆ ಮನೆಯಲ್ಲೇ ನಡೆದಿರುವ ಕಾರಣ ಕುಟುಂಬದವರೇ ಕೊಲೆ ಮಾಡಿರಬಹುದು ಎಂಬ ಅನುಮಾನಗಳು ಮೂಡಿದ್ದವು. ಅದರಂತೆ ಪತ್ನಿಯೇ ಕೊಲೆ ಮಾಡಿರುವ ವಿಷಯ ಇದೀಗ ಬೆಳಕಿಗೆ ಬಂದಿದೆ. ಓಂ ಪ್ರಕಾಶ್‌ ಅವರು 1981ರ ಐಪಿಎಸ್‌ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದರು. ಸದ್ಯ ಕೊಲೆಯ ಸುದ್ದಿ ಹೊರಬರುತ್ತಿದ್ದಂತೆ ಇಬ್ಬರ ನಡುವಿನ ಜಗಳದ ಕುರಿತು ವಾಟ್ಸಪ್‌ ಗ್ರೂಪ್‌ನಲ್ಲಿ ಅವರ ಪತ್ನಿಯೇ ಸಂದೇಶ ಕ...

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್‌; ಕೂದಲೆಳೆ ಅಂತರದಲ್ಲಿ ಪಾರು; ಹತ್ಯೆಗೆ ಸಂಚು ನಡೆಸಿದ್ದು ಯಾರು? ಇಲ್ಲಿದೆ ವಿವರ

Image
ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್‌; ಕೂದಲೆಳೆ ಅಂತರದಲ್ಲಿ ಪಾರು; ಹತ್ಯೆಗೆ ಸಂಚು ನಡೆಸಿದ್ದು ಯಾರು? ಇಲ್ಲಿದೆ ವಿವರ ಬೆಂಗಳೂರು : ದಶಕಗಳ ಹಿಂದಿನ ಭೂಗತ ಲೋಕದ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡುರಾತ್ರಿಯಲ್ಲಿ ಗುಂಡಿನ ದಾಳಿ ನಡೆದಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ರಾಮನಗರ ತಾಲೂಕಿನ ಬಿಡದಿಯ ಅವರ ಭವ್ಯ ಏಳು ಸುತ್ತಿನ ಕೋಟೆಯಂತಹ ಬಂಗಲೆಯ ಸಮೀಪವೇ ಈ ದಾಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ರಿಕ್ಕಿ ರೈಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ರಿಕ್ಕಿ ಕಾರು ಚಾಲಕ ಬಸವರಾಜು ಬಿಡದಿ ಠಾಣೆಗೆ ದೂರು ನೀಡಿದ್ದಾರೆ. ರಿಕ್ಕಿ ರೈ ಮೊದಲ ಪತ್ನಿ ಅನ್ನಪೂರ್ಣ, ರಾಕೇಶ್ ಮಲ್ಲಿ ಹಾಗೂ ನಿತೇಶ್ ರಿಯಲ್‌ ಎಸ್ಟೇಟ್ ಕಂಪನಿ ವಿರುದ್ಧ ದೂರು ದಾಖಲಿಸಲಾಗಿದೆ. ಘಟನೆಯ ವಿವರ: ಸಾಮಾನ್ಯವಾಗಿ ಯಾವತ್ತೂ ರಿಕ್ಕಿ ಕಾರು ಚಾಲನೆ ಮಾಡುತ್ತಿದ್ದರು. ಆದರೆ ಇಂದು ಮಾತ್ರ ಕಾರು ಚಾಲಕ ಬಸವರಾಜು ಡ್ರೈವಿಂಗ್‌ ಮಾಡುತ್ತಿದ್ದರು. ಗೇಟ್‌ ನಿಂದ ಹೊರಬರುತ್ತಿದ್ದಂತೆ ಏಕಾಏಕಿ ಗುಂಡು ಹಾರಿಸಲಾಗಿದೆ. ಆಗ ಬಸವರಾಜು ಮುಂದೆ ಬಾಗಿ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ಗುಂಡು ಪಕ್ಕದಲ್ಲಿ ಕುಳಿತಿದ್ದ ರಿಕ್ಕಿಗೆ ತಗುಲಿದ್ದು, ಅವರ ಕೈ ಮತ್ತು ಮೂಗಿಗೆ ಗಂಭೀರ ಗಾಯಗಳಾಗಿವೆ. ರೈ ಕುಟುಂಬದ ವಕೀಲ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ ರಿಕ್ಕಿ ರೈಗೆ ಬೆದರಿಕೆ ಇತ್ತು, ...

ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ಅಕ್ಕನ ಮೇಲೆ ಗ್ಯಾಂಗ್ ರೇಪ್, ತಮ್ಮನ ಕೊಲೆ, ತಂಗಿಯ ಕಿಡ್ನ್ಯಾಪ್.!

Image
ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ಅಕ್ಕನ ಮೇಲೆ ಗ್ಯಾಂಗ್ ರೇಪ್, ತಮ್ಮನ ಕೊಲೆ, ತಂಗಿಯ ಕಿಡ್ನ್ಯಾಪ್.! ಉತ್ತರ ಪ್ರದೇಶ : ಆಗ್ರಾದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕುಟುಂಬವೊಂದು ನಡೆದ ಆಘಾತಕಾರಿ ಘಟನೆ ಬಗ್ಗೆ ವಿವರಿಸಿದ್ದು, ಎಲ್ಲರನ್ನು ಬೆಚ್ಚು ಬೀಳಿಸಿದೆ. ಹಿರಿಯ ಮಗಳ ಮೇಲೆ ಗ್ರಾಮದ ಮುಖ್ಯಸ್ಥರು ಮತ್ತು ಅವರ ಸಂಬಂಧಿಕರು ಅತ್ಯಾಚಾರ ಎಸಗಿದ್ದಾರೆ ಮತ್ತು ಅಪರಾಧಕ್ಕೆ ಸಾಕ್ಷಿ ಹೇಳುವ ನಾಲ್ಕು ದಿನಗಳ ಮೊದಲು ಅವಳ ಸಹೋದರನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಆರೋಪಿಸಿದ್ದಾರೆ. ಇದಲ್ಲದೆ, ತನ್ನ ಸಹೋದರನ ಸಾವಿಗೆ ಸಾಕ್ಷಿಯಾಗಿದ್ದ ಸಂತ್ರಸ್ತೆಯ ಕಿರಿಯ ಸಹೋದರಿಯನ್ನು ಗ್ರಾಮದ ಮುಖ್ಯಸ್ಥರಿಗಾಗಿ ಕೆಲಸ ಮಾಡುವ ಗೂಂಡಾಗಳು ಅಪಹರಿಸಿ ಕಳ್ಳಸಾಗಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಉತ್ತರ ಪ್ರದೇಶ ಮಹಿಳಾ ಆಯೋಗದ ಅಧ್ಯಕ್ಷೆ ಬಬಿತಾ ಸಿಂಗ್ ಚೌಹಾಣ್ ಅವರಿಗೆ ಭಾವನಾತ್ಮಕ ಹೇಳಿಕೆ ನೀಡಿದ ಪೋಷಕರು, ತಮ್ಮ ಮಗಳನ್ನು ಹಿಂದಿರುಗಿಸಲು ದುಷ್ಕರ್ಮಿಗಳು 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಿದ್ದರು. ಗ್ರಾಮದ ಮುಖ್ಯಸ್ಥರು ಕುಟುಂಬದ ಒಡೆತನದ ಭೂಮಿಯ ಮೇಲೆ ಕಣ್ಣಿಟ್ಟಿದ್ದಾರೆ ಮತ್ತು ಅವರು ತಮ್ಮ ಸಂಬಂಧಿಕರೊಂದಿಗೆ ಸೇರಿ ಅಪ್ರಾಪ್ತ ವಯಸ್ಸಿನ ತನ್ನ ಹಿರಿಯ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದುಃಖಿತ ತಾಯಿ ಆರೋಪಿಸಿದ್ದಾರೆ. 7 ನೇ ತರಗತಿಯಲ್ಲಿ ಓದುತ್ತಿದ್ದ ಮಹಿಳೆಯ ಮಗ ಅಪರಾಧಕ್ಕೆ ಸಾಕ್ಷಿ...

ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಮಿಡ್ ನೈಟ್ ಫೈರಿಂಗ್!

Image
ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಮಿಡ್ ನೈಟ್ ಫೈರಿಂಗ್! ಬೆಂಗಳೂರು (ಏ.19): ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಇಂದು (ಏಪ್ರಿಲ್ 19, 2025) ಮಧ್ಯರಾತ್ರಿ 1:30ರ ಸುಮಾರಿಗೆ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ಅವರ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಈ ದಾಳಿ ನಡೆದಿದ್ದು, ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಮೂರು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ. ಘಟನೆಯ ವಿವರ: ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪೊಲೀಸ್ ತನಿಖೆ: ಘಟನೆಯ ಸ್ಥಳಕ್ಕೆ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ...

ಇಬ್ಬರು ಗಂಡು ಮಕ್ಕಳನ್ನು ಕತ್ತಿಯಿಂದ ಕಡಿದು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ..!

Image
  ಇಬ್ಬರು ಗಂಡು ಮಕ್ಕಳನ್ನು ಕತ್ತಿಯಿಂದ ಕಡಿದು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ..! ಇಬ್ಬರು ಗಂಡು ಮಕ್ಕಳನ್ನು ಕತ್ತಿಯಿಂದ ಕಡಿದು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ..! ಹೈದರಾಬಾದ್ : ಎಪ್ರಿಲ್ 18: ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಗುರುವಾರ ತನ್ನ ಇಬ್ಬರು ಗಂಡು ಮಕ್ಕಳನ್ನು ಕೊಂದು ನಂತರ ತಾನೂ ಐದನೆ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಜುಲರಾಮರಂನ ಬಾಲಾಜಿ ಲೇಔಟ್ ಸಂಭವಿಸಿದೆ. 33 ವರ್ಷದ ತೇಜಸ್ವಿನಿ ತನ್ನ ಇಬ್ಬರು ಮಕ್ಕಳಾದ ಆಶಿಶ್ ರೆಡ್ಡಿ (7) ಮತ್ತು ಹರ್ಷಿತ್ ರೆಡ್ಡಿ (4) ಅವರನ್ನು ಕತ್ತಿಯಿಂದ ಕಡಿದುಕೊಂದು, ಬಳಿಕ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಾಲೆಯ ಕೊನೆಯ ದಿನವಾದ ಹಿನ್ನಲೆ ಮನೆಯಲ್ಲಿ ಮಕ್ಕಳು ಇದ್ದರು. ಕಿರುಚಾಟದ ಶಬ್ದ ಕೇಳಿ ನೆರೆಹೊರೆಯವರು ಓಡಿಬಂದಾಗ ಆಶಿಶ್ ರಕ್ತದ ಮಡುವಿನಲ್ಲಿ ಸಾವನಪ್ಪಿದ್ದರೆ, ಮತ್ತೊಬ್ಬ ಮಗು ಹರ್ಷಿತ್ ಗಂಭೀರ ಸ್ಥಿತಿಯಲ್ಲಿರುವುದನ್ನು ಕಂಡುಕೊಂಡರು. ಅವರು ಅವರನ್ನು ಆಸ್ಪತ್ರೆಗೆ ಸಾಗಿಸಿದರು ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು" ಎಂದು ಪೊಲೀಸರು ತಿಳಿಸಿದ್ದಾರೆ. 7 ಪುಟಗಳ ಡೆತ್‌ನೋಟ್ (Suicide Note) ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ತೇಜಸ್ವಿನಿ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಗ್ಗೆ ಉಲ್ಲೇಖಿಸಿದ್ದಾರೆ. ಪುತ್ರರಿಬ್ಬರ ಉಸಿರಾಟದ ತೊಂದರೆ ಹಾಗೂ ಪತಿಯ...

“ಕೊಲೆ ಪ್ರಕರಣದಲ್ಲಿ ಸತ್ಯಾಂಶವನ್ನು ಮರೆಮಾಚಿದ್ದಾರೆ”: ಡಿಐಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಮಧ್ಯ ಪ್ರದೇಶ ಹೈಕೋರ್ಟ್..!

Image
  “ಕೊಲೆ ಪ್ರಕರಣದಲ್ಲಿ ಸತ್ಯಾಂಶವನ್ನು ಮರೆಮಾಚಿದ್ದಾರೆ”: ಡಿಐಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಮಧ್ಯ ಪ್ರದೇಶ ಹೈಕೋರ್ಟ್..! ಮಧ್ಯಪ್ರದೇಶ: ಕೊಲೆ ಪ್ರಕರಣವೊಂದರಲ್ಲಿ ಸತ್ಯಾಂಶಗಳನ್ನು ಮರೆಮಾಚಿದ ಆರೋಪದ ಮೇಲೆ ಮಧ್ಯಪ್ರದೇಶ ಹೈಕೋರ್ಟ್ ಭೋಪಾಲ್ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಮಾಯಾಂಕ್ ಅವಸ್ಥಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಅವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಡಿಐಜಿ ಅವಸ್ಥಿ ಅವರಿಗೆ “ನೆಲದ ಕಾನೂನಿನ ಬಗ್ಗೆ ಯಾವುದೇ ಗೌರವವಿಲ್ಲ. ಅವರು ತಮ್ಮ ಸ್ವಇಚ್ಛೆಯಂತೆ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುವ ಅಭ್ಯಾಸ ಹೊಂದಿದ್ದಾರೆ” ಎಂದು ನ್ಯಾಯಮೂರ್ತಿ ಜಿ.ಎಸ್ ಅಹ್ಲುವಾಲಿಯಾ ಆದೇಶ ನೀಡುವ ವೇಳೆ ಹೇಳಿದ್ದಾರೆ. ದಾತಿಯಾ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿರುವ ಅರ್ಜಿದಾರರಾದ ಮನ್ವೇಂದ್ರ ಸಿಂಗ್ ಗುರ್ಜರ್, ಘಟನೆಯ ದಿನಾಂಕ ಮತ್ತು ಸ್ಥಳದ ಬಗ್ಗೆ ಪ್ರಾಸಿಕ್ಯೂಷನ್‌ನ ಹೇಳಿಕೆಗಳನ್ನು ಪ್ರಶ್ನಿಸಿ 2018ರಲ್ಲಿ ಅರ್ಜಿ ಸಲ್ಲಿಸಿದ್ದರು. ಘಟನೆ ನಡೆದ ಸ್ಥಳದಲ್ಲಿ ಹತ್ಯೆಗೀಡಾಗಿದ್ದ ವ್ಯಕ್ತಿ ಹಾಗೂ ಸಾಕ್ಷಿದಾರರು ಉಪಸ್ಥಿತರಿರಲಿಲ್ಲ ಎಂಬುದನ್ನು ನಿರೂಪಿಸುವ ಪ್ರಯತ್ನದ ಭಾಗವಾಗಿ ಕರೆ ವಿವರ ದಾಖಲೆಗಳನ್ನು ಸಂರಕ್ಷಿಸಿಡಬೇಕು ಎಂದು ಅರ್ಜಿದಾರ ಮನ್ವೇಂದರ್ ಸಿಂಗ್ ಗುರ್ಜರ್ ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು. ಈ ಕುರಿತು ಪ್ರತಿವಾದ ಮಂಡಿಸಿದ ಅವಸ್ಥಿ, ಈ ಅರ್ಜಿ ತೀರ್ಮಾನವಾಗುವ ಹೊತ್ತ...

" ಭೀಕರ ರಸ್ತೆ ಅಪಘಾತ : ರಸ್ತೆ ತಡೆಗೋಡೆಗೆ ಪಿಕ್ ಅಪ್ ವಾಹನ ಡಿಕ್ಕಿಯಾಗಿ ನಾಲ್ವರು ಸಾವು!"

Image
" ಭೀಕರ ರಸ್ತೆ ಅಪಘಾತ : ರಸ್ತೆ ತಡೆಗೋಡೆಗೆ ಪಿಕ್ ಅಪ್ ವಾಹನ ಡಿಕ್ಕಿಯಾಗಿ ನಾಲ್ವರು ಸಾವು!" ರಾಯಚೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಗೂಡ್ಸ್ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರನ್ನು ನಾಗರಾಜ್ (28) ಸೋಮು (38) ನಾಗಭೂಷಣ್ (36) ಹಾಗೂ ಮುರಳಿ (38) ಎಂದು ತಿಳಿದುಬಂದಿದೆ. ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಇನ್ನು ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್ ಗೆ ಗಂಭೀರವಾದ ಗಾಯಗಳಾಗಿವೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಕುರಿತು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Here's the translation of the text from Kannada to English: A devastating accident occurred in the early hours of the morning in Raichur, Karnataka, resulting i...

"ಕಾಣೆಯಾದ ನಾಸಿರ್ ಪತ್ತೆಯಾಗಿದ್ದಾರೆ"

Image
"ಕಾಣೆಯಾದ ನಾಸಿರ್ ಪತ್ತೆಯಾಗಿದ್ದಾರೆ" ಕೊಪ್ಪ : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ವ್ಯಾಪ್ತಿಯ ನಾಸೀರ್ ಅಹ್ಮದ್ ಬಿನ್ ಮಹಮ್ಮದ್ ಗೌಸ್ 29 ವರ್ಷ ಮುಸ್ಲಿಂ ಜನಾಂಗ ಗ್ಯಾರೇಜ್ ನಲ್ಲಿ ಕೆಲಸ ವಾಸ ಅಬ್ಬಿಗದ್ದೆ ಬಿಂತ್ರವಳ್ಳಿ ಗ್ರಾಮ ಕೊಪ್ಪ ತಾ.ಚಿಕ್ಕಮಗಳೂರು ಜಿಲ್ಲೆ ಸದರಿ ವ್ಯಕ್ತಿಯು ದಿನಾಂಕ 09/04/2025 ರಂದು ಕಾಣೆಯಾಗಿದ್ದು ನಂತರ ಈ ದಿನ 11/04/2025 ರಂದು ಸದರಿ ವ್ಯಕ್ತಿಯು ಪತ್ತೆಯಾಗಿರುತ್ತಾರೆ.

"ಕೊಪ್ಪ ತಾಲ್ಲೂಕಿನಿಂದ ಇಬ್ಬರು ವ್ಯಕ್ತಿಗಳು ಕಾಣೆ ಯಾಗಿದ್ದಾರೆ "

Image
"ಕೊಪ್ಪ ತಾಲ್ಲೂಕಿನಿಂದ ಇಬ್ಬರು ವ್ಯಕ್ತಿಗಳು ಕಾಣೆ ಯಾಗಿದ್ದಾರೆ "