"ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ: 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ..!"
"ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ: 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ..!" ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಹೋಬಳಿಯ ಗೌತಮಪುರ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 67 ವರ್ಷದ ವೃದ್ಧೆ ಹುಚ್ಚಮ್ಮ ಎಂಬಾಕೆಯನ್ನು ಕೇವಲ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ನಿಂದಿಸಿ, ಕಂಬಕ್ಕೆ ಕಟ್ಟಿ ದೈಹಿಕವಾಗಿ ತೀವ್ರವಾಗಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯವನ್ನು ಗ್ರಾಮದ ಪ್ರೇಮ, ಮಂಜುನಾಥ್ ಮತ್ತು ದರ್ಶನ್ ಎಂಬ ಮೂವರು ಎಸಗಿದ್ದಾರೆ ಎಂದು ತಿಳಿದುಬಂದಿದೆ. ಗೌತಮಪುರ ಗ್ರಾಮದ ಹುಚ್ಚಮ್ಮ ಅವರು ತಮ್ಮ ಮನೆಯ ಮುಂದೆ ಪ್ರೇಮ ಎಂಬ ಮಹಿಳೆ ಕಸ ತಂದು ಹಾಕಿದ್ದನ್ನು ಪ್ರಶ್ನಿಸಿದ್ದರು. ಈ ಸಣ್ಣ ವಿಷಯಕ್ಕೆ ಕೋಪಗೊಂಡ ಪ್ರೇಮ, ಜೊತೆಗೆ ಮಂಜುನಾಥ್ ಮತ್ತು ದರ್ಶನ್ ಎಂಬ ಇಬ್ಬರು ಯುವಕರು, ಹುಚ್ಚಮ್ಮ ಅವರನ್ನು ನಿಂದಿಸಿ, ಮನೆಯಿಂದ ಎಳೆದುಕೊಂಡು ಹೋಗಿ ಹಗ್ಗದಿಂದ ಕಂಬಕ್ಕೆ ಕಟ್ಟಿ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹುಚ್ಚಮ್ಮ ಅವರು ಆನಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ಪುತ್ರ ಕನ್ನಪ್ಪ, ತಾಯಿಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಆನಂದಪುರ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭ...