Posts

Showing posts from November, 2025

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಕೋಲಾರದ ಇಬ್ಬರು ಮಕ್ಕಳು ಸೇರಿ 5 ಜನಸ್ಥಳದಲ್ಲೇ ಸಾವು..!

Image
ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಕೋಲಾರದ ಇಬ್ಬರು ಮಕ್ಕಳು ಸೇರಿ 5 ಜನಸ್ಥಳದಲ್ಲೇ  ಸಾವು..! ಕೋಲಾರ  :ಆಂಧ್ರಪ್ರದೇಶದಲ್ಲಿ ನಡೆದ ನಡೆದ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದ ಬಳಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಹಲವಾರು ಗಾಯಗೊಂಡಿದ್ದಾರೆ.   ಭೀಕರ ಅಪಘಾತದಲ್ಲಿ ಕರ್ನಾಟಕದ ಕೋಲಾರ ಜಿಲ್ಲೆಯ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಚಿಕ್ಕಹೊಸಹಳ್ಳಿ ನಿವಾಸಿಗಳಾದ ಸತೀಶ್, ಮೀನಾಕ್ಷಿ ಕುಟುಂಬದವರು ಮೃತಪಟ್ಟಿದ್ದಾರೆ ಎನ್ನುವುದು ಪತ್ತೆಯಾಗಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಯಮ್ಮಿಗನೂರು ಬಳಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರ ಮೂಲದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.  ಅಪಘಾತದ ವಿವರಗಳು ಸ್ಥಳ:  ಆಂಧ್ರಪ್ರದೇಶದ : ಕರ್ನೂಲ್ ಜಿಲ್ಲೆಯ ಕೋಟೆಕಲ್ ಗ್ರಾಮದ ಘಾಟಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಸಮಯ ಮತ್ತು ಕಾರಣ: ನವೆಂಬರ್ 29, 2025 ರ ಶನಿವಾರ ಮುಂಜಾನೆ 4 ಗಂಟೆ ಸುಮಾರಿಗೆ ದಟ್ಟ ಮಂಜು ಮತ್ತು ಕಳಪೆ ಗೋಚರತೆಯಿಂದಾಗಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಎರಡೂ ವಾಹನಗಳು ಅತಿ ವೇಗದಲ್ಲಿ ಚಲಿಸುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ...

ಮೂಡುಶೆಡ್ಡೆ,ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ಮಗಳು: ವೀಡಿಯೋ ವೈರಲ್..!

Image
ಮೂಡುಶೆಡ್ಡೆ,ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ಮಗಳು: ವೀಡಿಯೋ ವೈರಲ್..! ಮಂಗಳೂರು : ನ.28: ನಗರ ಹೊರವಲಯದ ಮೂಡುಶೆಡ್ಡೆ ಗ್ರಾ.ಪಂ. ಆವರಣದಲ್ಲಿ ಮಗಳು ತನ್ನ ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಡುಶೆಡ್ಡೆಯ ಶಿವನಗರ ಎಂಬಲ್ಲಿ ತಾಯಿ ಮತ್ತು ಮಗಳು ವಾಸಿಸುತ್ತಿದ್ದು, ಇವರ ಮಧ್ಯೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ತಾಯಿ ಕಾವೂರು ಠಾಣೆಗೆ ತೆರಳಿ ದೂರುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ತಾಯಿ ಮತ್ತು ಮಗಳಿಗೆ ಬುದ್ಧಿ ಹೇಳಿ ಕಳುಹಿಸಿಕೊಡುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ತಾಯಿಯು ಮೂಡುಶೆಡ್ಡೆ ಗ್ರಾ.ಪಂ.ಗೆ ತೆರಳಿ ಮಗಳ ವಿರುದ್ಧ ದೂರು ನೀಡತೊಡಗಿದ್ದಾರೆ. ಮೂರು ದಿನದ ಹಿಂದೆ ತಾಯಿ ಗ್ರಾ.ಪಂ. ಕಚೇರಿಗೆ ತೆರಳಿ ದೂರು ನೀಡುತ್ತಿದ್ದಾಗ ಮಗಳು ತಾಯಿಯನ್ನು ತಳ್ಳಿದ್ದಾಳೆ. ತಾಯಿ ಕೂಡ ಮಗಳಿಗೆ ತಿರುಗೇಟು ನೀಡಿದ್ದರೂ ಕೂಡ ಆಕ್ರೋಶಗೊಂಡ ಮಗಳು ಚಪ್ಪಲಿಯಿಂದ ತಾಯಿಯ ಮುಖಕ್ಕೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದು ವೀಡಿಯೋದಲ್ಲಿ ಕಂಡು ಬಂದಿದೆ. ಇದನ್ನು ಗ್ರಾ.ಪಂ. ಕಚೇರಿಯಲ್ಲಿದ್ದವರು ವೀಡಿಯೋ ಮಾಡಿದ್ದು, ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗಳ ಅಮಾನವೀಯ ಕೃತ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ವೀಡಿಯೋದಲ...

ರಾಮನಗರ,ಕನಕಪುರ, ಪ್ರವಾಸಿ ವಾಹನ ಚಾಲಕ ಸ್ನಾನಕ್ಕೆ ಹೋದಾಗ ಸೋಮಾವತಿ ನದಿಯಲ್ಲಿ ಮುಳುಗಿ ಸಾವು..!

Image
ರಾಮನಗರ,ಕನಕಪುರ, ಪ್ರವಾಸಿ ವಾಹನ ಚಾಲಕ ಸ್ನಾನಕ್ಕೆ ಹೋದಾಗ ಸೋಮಾವತಿ ನದಿಯಲ್ಲಿ ಮುಳುಗಿ ಸಾವು..! ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಸಂಸೆ ಗ್ರಾಮ ವ್ಯಾಪ್ತಿಗೆ ಬರುವ "ಬಾಲ್ಗಲ್ ಕಟ್ನೀರು ಕಲ್" ಬಳಿ "ಸೋಮಾವತಿ ನದಿ" ಗೆ ಸ್ನಾನಕೆಂದು ಹೋದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದ ಘಟನೆ ನಡೆದಿದೆ.            ಕೂಡಲೇ ಸ್ಥಳೀಯ ಮೆಸ್ಕಾಂ ಸಿಬ್ಬಂದಿ ಮತ್ತು ಸ್ಥಳೀಯರು ಸೇರಿ ನೀರಿನಿಂದ ಮೇಲೆ ತೆಗೆದುಹಾಕಿ ಕೂಡಲೇ ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ತರಲಾಯಿತು ದಾರಿ ಮಧ್ಯದಲ್ಲಿ ಚಾಲಕ ಪುಟ್ಟ ಮಾದಯ್ಯ(53 ) ವರ್ಷದ ಎಂಬುವವರು ಮೃತಪಟ್ಟಿದ್ದಾರೆ.            ಇವರು ಮೂಲತ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಜೋಗಮಾನಸ ಹಳ್ಳಿ ಇವರು ಕಳಸ - ಕುದುರೆಮುಖ ಪಿಕ್ ನೇತ್ರಾವತಿ ಪಿಕ್ ಪ್ರವಾಸಿಗರನ್ನು ಕರೆದುಕೊಂಡು ಬಂದಂತ ಸಂದರ್ಭದಲ್ಲಿ ಸ್ಥಾನಕ್ಕೆ ಎಂದು ಹೋಗಿದ ಚಾಲಕ ಎಂದು ತಿಳಿದುಬಂದಿದೆ.               ಈ ಪ್ರಕರಣ ಕುದುರೆಮುಖ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ ಹೆಚ್ಚಿನ ಮಾಹಿತಿ ಇನ್ನು ತಿಳಿದಿಲ್ಲ ಈ ಪ್ರಕರಣ ಕುದುರೆಮುಖ ಪೊಲೀಸ್ ನವರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು ದೇವಿಶ್ರೀ ಕೊಲೆ ಪ್ರಕರಣ-ಆರೋಪಿ ತಿರುಪತಿಯಲ್ಲಿ ಅರೆಸ್ಟ್

Image
ಬೆಂಗಳೂರು ದೇವಿಶ್ರೀ ಕೊಲೆ ಪ್ರಕರಣ-ಆರೋಪಿ ತಿರುಪತಿಯಲ್ಲಿ ಅರೆಸ್ಟ್ ಬೆಂಗಳೂರು  :ಬೆಂಗಳೂರಿನ ಮಾದನಾಯಕನಹಳ್ಳಿ ವ್ಯಾಪ್ತಿಯ ತಮ್ಮೇನಹಳ್ಳಿಯಲ್ಲಿ ಆಂಧ್ರ ಮೂಲದ ಬಿಬಿಎಂ ವಿದ್ಯಾರ್ಥಿನಿ ದೇವಿಶ್ರೀ (21) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಸ್ನೇಹಿತ ಪ್ರೇಮ್ ವರ್ಧನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ದೇವಿಶ್ರೀ ಬೇರೆ ಹುಡುಗನೊಂದಿಗೆ ಮಾತನಾಡುತ್ತಿದ್ದಾಳೆ ಎಂಬ ಕೋಪದಿಂದ ಪ್ರೇಮ್ ವರ್ಧನ್ ಗೆಳತಿಯ ರೂಮಿಗೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ. ಕೊಲೆ ಮಾಡಿದ ನಂತರ ಆರೋಪಿಯು ಮೆಟ್ರೋ ಮೂಲಕ ಮೆಜೆಸ್ಟಿಕ್‌ಗೆ ಹೋಗಿ, ಅಲ್ಲಿಂದ ತಿರುಪತಿಗೆ ಪರಾರಿಯಾಗಿದ್ದನು. ತನಿಖೆ ಕೈಗೊಂಡ ಪೊಲೀಸರು, ತಿರುಪತಿಯಲ್ಲಿ ಆತನ ಜಾಡು ಹಿಡಿದು ಯಶಸ್ವಿಯಾಗಿ ಬಂಧಿಸಿದ್ದಾರೆ.

ಅಲ್ಲಿ ತಂಗಿ ಮದ್ವೆ ಶಾಸ್ತ್ರ, ಇಲ್ಲಿ ಬಿತ್ತು ಅಣ್ಣನ ಹೆಣ! ಇಳಿ ಸಂಜೆ ಹೊತ್ತು, ಮನೆ ಬಿಟ್ಟವರಿಗೆ ಆಪತ್ತು..

Image
ಅಲ್ಲಿ ತಂಗಿ ಮದ್ವೆ ಶಾಸ್ತ್ರ, ಇಲ್ಲಿ ಬಿತ್ತು ಅಣ್ಣನ ಹೆಣ! ಇಳಿ ಸಂಜೆ ಹೊತ್ತು, ಮನೆ ಬಿಟ್ಟವರಿಗೆ ಆಪತ್ತು.. ಹಾಸನ: ಆ ಮನೆಯಲ್ಲಿ ನೆನ್ನೆಯಷ್ಟೇ ಮದುವೆಯ ಸಂಭ್ರಮ. ತಂಗಿ ಮದುವೆಯಲ್ಲಿ ಖುಷಿ ಖುಷಿಯಾಗಿ ಓಡಾಡಿದ್ದ ಅಣ್ಣ ಮತ್ತು ಭಾವ. ಇಂದು ಆರತಕ್ಷತೆ ಹಿನ್ನಲೆ ತಯಾರಿ ನಡೆಸಿಕೊಂಡಿದ್ದ ಕುಟುಂಬಸ್ಥರಿಗೆ ಆಘಾತ. ಮನೆಗೆ ಬೇಕಾದ ವಸ್ತುಗಳನ್ನು ತರಲು ಹೋದ ಇಬ್ಬರು ಯುವಕರು ಅಪಘಾತದಲ್ಲಿ ದಾರುಣ ಸಾವು. ಹಾಸನ: ಇವ್ರಿಬ್ಬರದ್ದು ಬರೀ ಸಾವಲ್ಲ, ವಿಧಿಯ ಮೋಸದ ಸಂಚು (Death). ಹೊಂಚು ಹಾಕಿ ಸಂಚು ರೂಪಿಸಿದ ಜವರಾಯನ ಮಾಯಾಜಾಲ. ಯಾಕಂದ್ರೆ, ಒಂದೇ ಒಂದು ದಿನ ಕಳೆದಿದ್ರೆ ತಂಗಿಯ (Sister Marriage) ಸಂತಸದ ಕ್ಷಣಗಳನ್ನ ಕಣ್ತುಂಬಿಕೊಳ್ತಿದ್ರು. ಅಣ್ಣನಾಗಿ (Brother) ನಿಂತು ಎಲ್ಲಾ ಜವಾಬ್ದಾರಿಯನ್ನ ಮಾಡಿ ಮುಗಿಸ್ತಿದ್ರು. ಆದ್ರೆ, ಅದ್ಯಾವುದಕ್ಕೂ ಈ ಘೋರ ವಿಧಿ ಅವಕಾಶ ಕೊಟ್ಟಿಲ್ಲ. ಒಂದೇ ಒಂದು ದಿನವೂ ಸಮಯಕೊಡದಂತೆ ಇಬ್ಬರ ಜೀವವನ್ನ (Life) ಕಿತ್ಕೊಂಡು ಹೋಗಿದ್ದಾನೆ. ಮದ್ವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸಾವಿನ ಸೂತಕ ಮೂಡುವಂತೆ ಮಾಡಿದ್ದಾನೆ. ತಂಗಿಯ ಮದ್ವೆ ಶಾಸ್ತ್ರದ ದಿನವೇ ಅಣ್ಣನ ಸಾವಿನ ಸಿಡಿಲು! ಸಾವು ಅನ್ನೋದೇ ಘೋರ. ಯಾಕಂದ್ರೆ, ಹುಟ್ಟಿದ ಪ್ರತಿಯೊಬ್ಬರಿಗೂ ಸಾವು ಅನ್ನೋದು ಕಟ್ಟಿಟ್ಟ ಬುತ್ತಿ. ಆದ್ರೆ, ಕೆಲವೊಬ್ರ ಸಾವು ತುಂಬಾನೇ ಕಾಡುತ್ತೆ. ಹೆತ್ತವರ ಪಾಲಿಗೆ ಸಾಯೋ ಕ್ಷಣದವರೆಗೂ ನೆನಪಿನ ಉರುಳಾಗಿ ಜೀವ ಹಿಂಡುತ್ತೆ. ಇವ್...

ಮಣಿಪಾಲದ “ಡೆಲ್ಲಿ ಡಾಬಾ”ದಲ್ಲಿ ಶಾರ್ಟ್ ಸರ್ಕ್ಯೂಟ್: ಪ್ರಾಣಾಪಾಯದಿಂದ ಪಾರು

Image
ಮಣಿಪಾಲದ “ಡೆಲ್ಲಿ ಡಾಬಾ”ದಲ್ಲಿ ಶಾರ್ಟ್ ಸರ್ಕ್ಯೂಟ್: ಪ್ರಾಣಾಪಾಯದಿಂದ ಪಾರು ಉಡುಪಿ: ನಗರದ ಮಣಿಪಾಲದ ಡೆಲ್ಲಿ ಡಾಬಾ ಉಪಹಾರ ಗೃಹದಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಹಿನ್ನೆಲೆ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ಘಟನೆ ಮಂಗಳವಾರ ಸಂಭವಿಸಿದೆ. ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಅನುಮಾನಾಸ್ಪದ ವಿಚಾರಗಳು ಕಂಡುಬಂದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಡಾಬಾದ ಒಳಭಾಗದಲ್ಲಿದ್ದ ಸಿಲಿಂಡರ್‌ಗಳು ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಸ್ಫೋಟಗೊಂಡಿದ್ದರೂ, ಅದೃಷ್ಟವಶಾತ್ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಸ್ಥಳದಲ್ಲಿ ಅಗ್ನಿ ನಂದಿಸುವ ಕಾರ್ಯ ಕೂಡ ತಕ್ಷಣ ಕೈಗೊಳ್ಳಲಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಹರಿರಾಂ ಶಂಕರ್, ಘಟನೆಯ ಬಗ್ಗೆ ಸುಳ್ಳು ಸುದ್ದಿ ಅಥವಾ ವದಂತಿ ಹರಡುವ ಅಗತ್ಯವಿಲ್ಲ. ಯಾವುದೇ ಅನುಮಾನಾಸ್ಪದ ಅಂಶ ಕಂಡುಬಂದಿಲ್ಲ. ಸಾರ್ವಜನಿಕರು ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಹೇಳಿದ್ದಾರೆ.

ಮಹಾಂತೇಶ್ ಬೀಳಗಿ ಸಾವು; ಚಾಲಕ ಆಂಥೋನಿ ರಾಜ ವಿರುದ್ಧ FIR ದಾಖಲು..!

Image
ಮಹಾಂತೇಶ್ ಬೀಳಗಿ ಸಾವು; ಚಾಲಕ ಆಂಥೋನಿ ರಾಜ ವಿರುದ್ಧ FIR ದಾಖಲು..! ಕಲಬುರಗಿಯಲ್ಲಿ ನಡೆದ ಭೀಕರ ಕಾರ್ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನರಾಗಿದ್ದಾರೆ. ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣವೆಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣ ಸಂಬಂಧ ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ದ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಹಾಂತೇಶ್ ಬೀಳಗಿ ಸಂಬಂಧಿ ಬಸವರಾಜ್ ಕಮರಟಗಿ ಎಂಬವರು ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಜೇವರ್ಗಿ ಠಾಣೆಯ ಪೊಲೀಸರು ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ದ 281 , 125(A)125(B)106 ಬಿಎನ್‌ಎಸ್‌ ಅಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಚಾಲಕನ ಅತಿವೇಗ ಅಜಾರೋಗತೆಕತೆಯಿಂದ ಅಪಘಾತ ಸಂಭವಿಸಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ. ರಸ್ತೆ ಬದಿಯ ಬ್ರಿಡ್ಜ್ ಗೆ ಕಾರು ಡಿಕ್ಕಿಯಾಗಿ ನಾಲ್ಕೈದು ಬಾರಿ ಕಾರ್ ಪಲ್ಟಿಯಾಗಿದೆ. ಕಾರ್ ಪಲ್ಟಿಯಾದ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ರೆ, ಆಸ್ಪತ್ರೆಯಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಾವನ್ನಪ್ಪಿದ್ದಾರೆ. ಕಾರ್ ಚಾಲಕ ಆಂಥೋನಿ ರಾಜ್ ಸಹ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಪಘಾತದಲ್ಲಿ ಮೃತರಾದ ಮಹಾಂತೇಶ್ ಬೀಳಗಿ ಮೃತದೇಹವನ್ನು ರಾಮದುರ್ಗಕ್ಕೆ ತೆಗೆದುಕೊಂಡು ಬರಲಾಗಿದೆ. ರಾಮದುರ್ಗದ ಪಂಚಗಟಿಮಠ ಶಾಲಾ ಮೈದಾನದಲ್ಲಿ...

ತರೀಕೆರೆ: ಹಿಟ್ ಅಂಡ್ ರನ್‌ - ಇಬ್ಬರು ಸ್ಥಳದಲ್ಲೇ ದುರ್ಮರಣ!

Image
ತರೀಕೆರೆ: ಹಿಟ್ ಅಂಡ್ ರನ್‌ - ಇಬ್ಬರು ಸ್ಥಳದಲ್ಲೇ ದುರ್ಮರಣ! ತರೀಕೆರೆ : ಅಪರಿಚಿತ ವಾಹನ ಹಿಟ್ ಅಂಡ್ ರನ್ ಮಾಡಿ ಎಸ್ಕೆಪ್ ಆಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ-ಬೆಂಗಳೂರು ರಾ.ಹೆ. 206ರಲ್ಲಿ ಅತಿವೇಗದಲ್ಲಿ ಬಂದ ಅಪರಿಚಿತ ವಾಹನವು ಕೆಎ 52 ವೈ 3860 ಸಂಖ್ಯೆಯ ಟಿವಿಎಸ್ ಜುಪಿಟರ್ ಬೈಕ್‌ಗೆ ಡಿಕ್ಕಿ ಹೊಡೆದು ನಿಲ್ಲಿಸದೇ ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದ ಬೈಕ್‌ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಮಾಹಿತಿ ಪಡೆದ ತರೀಕೆರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪರಾರಿಯಾದ ವಾಹನ ಪತ್ತೆಗೆ ಬಲೆ ಬೀಸಿದ್ದಾರೆ.

ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ರಕ್ತದ ಮಡುವಿನಲ್ಲಿ ಬಿದಿದ್ದ ಮಹಾಂತೇಶ್‌ ಬೀಳಗಿ! ಜತೆಗಿದ್ದ ಸಹೋದರರೂ ಉಳಿಯಲಿಲ್ಲ..!

Image
ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ರಕ್ತದ ಮಡುವಿನಲ್ಲಿ ಬಿದಿದ್ದ ಮಹಾಂತೇಶ್‌ ಬೀಳಗಿ! ಜತೆಗಿದ್ದ ಸಹೋದರರೂ ಉಳಿಯಲಿಲ್ಲ..! ಕಲಬುರಗಿ : ಕರ್ನಾಟಕದ ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಅವರು ಕಲಬುರಗಿ ಬಳಿಯ ಜೇವರ್ಗಿ ಹೆದ್ದಾರಿಯಲ್ಲಿ ಮೃತಪಟ್ಟಿದ್ದಾರೆ. ದಾರಿ ಮಧ್ಯೆ ಬಂದ ನಾಯಿಯೊಂದನ್ನು ಪಾರು ಮಾಡಲು ಹೋಗಿ ಕಾರು ಅಪಘಾತವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದ ಬೀಳಗಿ ಅವರು ಸಂಬಂಧಿಕರ ಮದುವೆಗೆಂದು ತಮ್ಮ ಸಹೋದರ ಶಂಕರ ಬೀಳಗಿ ಹಾಗೂ ಸೋದರ ಸಂಬಂಧಿ ಈರಣ್ಣ ಶಿರಸಂಗಿ ಜತೆಗೆ ಕಲಬುರಗಿ ನಗರಕ್ಕೆ ಹೊರಟಿದ್ದರು. ಕೆಎ 04, ಎನ್‌ 7982 ಸಂಖ್ಯೆ ಇನೋವಾ ಹೈಕ್ರಾಸ್‌ ಕಾರಿನಲ್ಲಿ ಹೊರಟಾಗ ವಿಜಯಪುರ ಜೇವರ್ಗಿ ಹೆದ್ದಾರಿಯ ಗೌನಹಳ್ಳಿ ಬಳಿಕ ಸಂಜೆ 5.30 ಕ್ಕೆ ಘಟನೆ ಅಪಘಾತವಾಗಿದೆ. ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಟ್ಟಿ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿಗೆ ಏಕಾಏಕಿ ನಾಯಿ ಅಡ್ಡಬಂದಿದೆ. ಅದನ್ನು ತಪ್ಪಿಸಲು ಹೋಗಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಒಮ್ಮೆಗೆ ಕಾರು ಪಲ್ಟಿಯಾಗಿ ರಸ್ತೆ ಪಕ್ಕದ ಇಳಿಜಾರಿಗೆ ಬಿದ್ದಿದೆ. ಪಲ್ಟಿಯಾದ ರಭಸಕ್ಕೆ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಲ್ಲರಿಗೂ ಭೀಕರ ಗಾಯಗಳಾಗಿವೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಾಂತೇಶ್‌ ಬೀಳಗಿ ಅಪಘಾತ ಕಂಡು ಸ್ಥಳೀಯರು ಕಾರ್‌ನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರ...

" ಎನ್ ಆರ್ ಪುರ ತಾಲೂಕಿನಲ್ಲಿ ನಡೆದ ಕಳ್ಳತನದ ಕಳ್ಳರ ಬಂಧನ "

Image
" ಎನ್ ಆರ್ ಪುರ ತಾಲೂಕಿನಲ್ಲಿ ನಡೆದ ಕಳ್ಳತನದ ಕಳ್ಳರ ಬಂಧನ " ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ಪಟ್ಟಣದ ಶಿವಮೊಗ್ಗ ಹೋಗುವ ರಸ್ತೆಯಲ್ಲಿರುವ ಹಳೇಪೇಟೆ ಟಿನು ಥಾಮಸ್ ಎಂಬುವವರ  ರಬ್ಬರ್ ವ್ಯಾಪಾರಿಯೊಬ್ಬರ ಅಂಗಡಿಯಲ್ಲಿ ಕೆಲವು ದಿನಗಳ ಹಿಂದೆ ಮಧ್ಯಾಹ್ನ ಸಮಯದಲ್ಲಿ ಮಾಲೀಕ ಊಟ ಮಾಡಲು ಹೊರಹೋದ ಸಮಯದಲ್ಲಿ ,ಕ್ಯಾಶ್ ಡ್ರಾ ಹೊಡೆದು 2.50.000 ನಗದು ಹಣವನ್ನು ಕಳ್ಳತನ ಮಾಡಿರುವುದಾಗಿ ಮಾಲಿಕ ಪೊಲೀಸ್ ಠಾಣೆಗೆ 19 11 2025 ರಂದು ದೂರು ನೀಡಿದ್ದರು.      ಇದರ ಪ್ರಕಾರ 94/2025 ಕಲಂ 305(3) ಬಿ ಎನ್ ಎಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ಅಪರಾಧಿಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕ ರಾದ ಡಾ: ವಿಕ್ರಂ ಅಮಟೆ ಐಪಿಎಸ್ ,  ಚಿಕ್ಕಮಗಳೂರು ಜಿಲ್ಲಾ ಸಿಟಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಯಕುಮಾರ್ , ಕೊಪ್ಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಬಾಲಾಜಿ ಸಿಂಗ್ ನಿರ್ದೇಶನದಂತೆ ಎನ್ ಆರ್ ಪುರ ವೃತ್ತ ನಿರೀಕ್ಷಕರಾದ ಗುರುದತ್ ಕಾಮತ್ ನೇತೃತ್ವದಲ್ಲಿ ಠಾಣೆಯ ಪಿಎಸ್ಐ ಬಿ .ಸ್ ನಿರಂಜನ್ ಗೌಡ ಅವರನ್ನೋಳಗೊಂಡ ತನಿಖಾ ತಂಡ ರಚಿಸಲಾಯಿತು. ಈ ತಂಡದಲ್ಲಿ ಅಪರಾದ ವಿಭಾಗದ ಶ್ರೀಮತಿ ಎನ್. ಎ ಜ್ಯೋತಿ, ಸಿಬ್ಬಂದಿಗಳಾದ ಮಧು, ಎಸ್ ಜಿ. ಯುಗಾಂದರ, ಪರಮೇಶ್, ಬಿನು ಪಿ. ಎ, ಅಮಿತ್ ಚೌಕುಲೆ, ದೇವರಾಜ , ರೇವೇಗೌಡ ನಿರಾಧರ , ಕೌಶಿಕ್, ಸ್ವರ...

ವ್ಯಾಪಾರಿ ಬಳಿ ಚಿನ್ನ ದರೋಡೆ – ಇಬ್ಬರು ಪಿಎಸ್‍ಐ ಸೇರಿ ನಾಲ್ವರು ಅರೆಸ್ಟ್25/11/2025

Image
ವ್ಯಾಪಾರಿ ಬಳಿ ಚಿನ್ನ ದರೋಡೆ – ಇಬ್ಬರು ಪಿಎಸ್‍ಐ ಸೇರಿ ನಾಲ್ವರು ಅರೆಸ್ಟ್ 25/11/2025 ದಾವಣಗೆರೆ, ನವೆಂಬರ್ 25: ಚಿನ್ನದ ವ್ಯಾಪಾರಿ ಬಳಿ ದರೋಡೆ ಮಾಡಿದ್ದ ಇಬ್ಬರು ಪಿಎಸ್‍ಐ ಸೇರಿ ನಾಲ್ವರನ್ನು ದಾವಣಗೆರೆಯ ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪಿಎಸ್‍ಐಗಳನ್ನು ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಇಬ್ಬರಿಗೆ ಸಹಕರಿಸಿದ್ದ ಚಿನ್ನದಂಗಡಿಯ ಕೆಲಸಗಾರರಾದ ಸತೀಶ್ ರೇವಣಕರ್, ನಾಗರಾಜ್ ರೇವಣಕರ್ ಎಂಬವರನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಆರೋಪಿಗಳು ಪಿಎಸ್‍ಐಗಳಿಗೆ ವ್ಯಾಪಾರಿ ಬಳಿ ಚಿನ್ನ ಇರುವುದರ ಬಗ್ಗೆ ಮಾಹಿತಿ ನೀಡಿದ್ದರು ಎಂದು ತಿಳಿದುಬಂದಿದೆ. ಇಬ್ಪಿಬರು ಎಸ್‌ಐಗಳು ವರ್ಗಾವಣೆ ಆಗಿ ಐಜಿ ಅಫೀಸ್‌ನಲ್ಲಿ ರಿಪೋರ್ಟ್ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಕಾರವಾರ ಮೂಲದ ವ್ಯಾಪಾರಿ ವಿಶ್ವನಾಥ್ ಅರ್ಕಸಾಲಿ ಎಂಬವರು 80 ಗ್ರಾಂ ಬಂಗಾರದ ಒಡವೆಗಳನ್ನು ತೆಗೆದುಕೊಂಡು ದಾವಣಗೆರೆಯ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಸೇರಿ ವ್ಯಾಪಾರಿಗೆ ನಾವು ಐಜಿ ಸ್ಕ್ವಾಡ್ ಎಂದು ಹೇಳಿ ಹೆದರಿಸಿದ್ದರು. ಪೊಲೀಸ್ ಐಡಿ ಕಾರ್ಡ್, ನಕಲಿ ಗನ್ ತೋರಿಸಿ ಕೆಟಿಜೆ ನಗರ ಪೊಲೀಸ್ ಠಾಣೆಗೆ ಕಾರಿನಲ್ಲಿ ಕರೆದೊಯ್ದು, ಒಳಗೆ ಹೋಗದೆ ವಾಪಸ್ ಕರೆತಂದಿದ್ದರು. ಬಳಿಕ ವ್ಯಾಪಾರಿಯ ಬಳಿ ಇದ್ದ ಬಂಗಾರವನ್ನು ಕಸಿದುಕೊಂಡು ಬಸ್ ನಿಲ್ದಾ...

ಬೆಂಗಳೂರಲ್ಲಿ ಮಹಿಳೆ ಜೊತೆ ಅಕ್ರಮ ಸಂಬಂಧ ಆರೋಪ : ಯುವಕನನ್ನು ಥಳಿಸಿ ಹತ್ಯೆಗೈದ ಕುಟುಂಬಸ್ಥರು.!

Image
ಬೆಂಗಳೂರಲ್ಲಿ ಮಹಿಳೆ ಜೊತೆ ಅಕ್ರಮ ಸಂಬಂಧ ಆರೋಪ : ಯುವಕನನ್ನು ಥಳಿಸಿ ಹತ್ಯೆಗೈದ ಕುಟುಂಬಸ್ಥರು.! ಬೆಂಗಳೂರು : ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಯುವಕನನ್ನು ಮಹಿಳೆಯ ಕುಟುಂಬಸ್ಥರು ಥಳಿಸಿ ಹತ್ಯೆಗೈದ ಘಟನೆ ಬೆಂಗಳೂರಿನ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನ ನರಸಿಂಹರಾಜು (32) ಎಂದು ಗುರುತಿಸಲಾಗಿದೆ. ಈತ ಮದುವೆಯಾಗಿದ್ದ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎಂದು ಶಂಕಿಸಲಾಗಿದೆ. ಆಗಾಗ ಯುವಕನ ಮನೆಗೆ ಮಹಿಳೆ ಕೂಡ ಬರುತ್ತಿದ್ದಳು. ಒಂದು ದಿನ ನರಸಿಂಹರಾಜು ಜೊತೆ ಮನೆಯಲ್ಲಿ ಮಹಿಳೆ ಇರುವುದನ್ನು ನೋಡಿದ ಮಹಿಳೆ ಕುಟುಂಬಸ್ಥರು ಆತನನ್ನು ಮನೆಯಿಂದ ಹೊರಗಡೆ ಎಳೆದುಕೊಂಡು ಬಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಯುವಕನನ್ನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕ ಮೃತಪಟ್ಟಿದ್ದಾನೆ. ಈ ಕುರಿತು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

"ತೀರ್ಥಹಳ್ಳಿ ಬಾಳೆಬೈಲಿನಲ್ಲಿ ಭೀಕರ ಅಪಘಾತ ಇಬ್ಬರು ಬೈಕ್ ಸವಾರರ ದುರ್ಮರಣ..!"

Image
"ತೀರ್ಥಹಳ್ಳಿ ಬಾಳೆಬೈಲಿನಲ್ಲಿ ಭೀಕರ ಅಪಘಾತ ಇಬ್ಬರು ಬೈಕ್ ಸವಾರರ ದುರ್ಮರಣ..!" ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ  ಪಟ್ಟಣದ ಬಾಳೆಬೈಲು  ಸಮೀಪ ಗ್ಯಾಸ್ ಲಾರಿ ಹಾಗೂ ಬೈಕ್ ನಡುವೆ ಮಧ್ಯ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.  ತೀರ್ಥಹಳ್ಳಿ ಪಟ್ಟಣದ ಬಾಳೆಬೈಲಿನ "ಆರ್ ಎಂ ಸಿ ಯಾರ್ಡ್" ಬಳಿ ಮಧ್ಯರಾತ್ರಿ 1:30 ರ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಬೈಕ್ ನಲ್ಲಿದ್ದ ಇಬ್ಬರು ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಸುದೀಪ್ (25) ಮತ್ತು ಸುಧೀಶ್ (30) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಹೆಲ್ಮಟ್ ಇಲ್ಲದೆ ಬೈಕ್ ಚಲಾಯಿಸಿದ್ದೆ ಸಾವಿಗೆ ಕಾರಣವಾಗಿದೆ ಎನ್ನಲಾಗಿದೆ. ಇಬ್ಬರು ಇಂದಿರಾನಗರ ಹಾಗೂ ಯಡೆಹಳ್ಳಿಕೆರೆ ಯವರು ಎಂದು ತಿಳಿದುಬಂದಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬಾಡಿಗೆ ರೂಂನಲ್ಲಿ ಬಿಬಿಎ ವಿದ್ಯಾರ್ಥಿನಿ ಮೃತದೇಹ ಪತ್ತೆ; ಪ್ರಿಯಕರನೇ ಕೊಂದಿರುವ ಶಂಕೆ..!

Image
ಬಾಡಿಗೆ ರೂಂನಲ್ಲಿ ಬಿಬಿಎ ವಿದ್ಯಾರ್ಥಿನಿ ಮೃತದೇಹ ಪತ್ತೆ; ಪ್ರಿಯಕರನೇ ಕೊಂದಿರುವ ಶಂಕೆ..! ಬೆಂಗಳೂರು:  ನೆಲಮಂಗಲದ ಸಮೀಪದ ತಮ್ಮೇನಹಳ್ಳಿಯಲ್ಲಿ 21 ವರ್ಷದ ಬಿಬಿಎ ವಿದ್ಯಾರ್ಥಿನಿ ದೇವಿಶ್ರೀ ಎಂಬುವವರ ಮೃತದೇಹ ಪತ್ತೆಯಾಗಿದೆ. ಆಕೆಯ ಪ್ರಿಯಕರ ಪ್ರೇಮವರ್ಧನ್ ಎಂಬಾತ ಆಕೆಯನ್ನು ಸ್ನೇಹಿತನ ಮನೆಗೆ ಕರೆಸಿಕೊಂಡಿದ್ದ. ಅಲ್ಲಿ ಕತ್ತು ಹಿಸುಕಿ ಕೊಲೆ ಮಾಡಿ, ಕೋಣೆಯ ಹೊರಗಿನಿಂದ ಬೀಗ ಹಾಕಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸರು ಆರೋಪಿ ಪ್ರಿಯತಮನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.               ಬೆಂಗಳೂರಿನ ನೆಲಮಂಗಲದ ತಮ್ಮೇನಹಳ್ಳಿ ಯಲ್ಲಿ 21 ವರ್ಷದ ವಿದ್ಯಾರ್ಥಿನಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮಾದನಾಯಕನಹಳ್ಳಿ ಪೊಲೀಸರು ಇದು ಕೊಲೆ ಎಂದು ಶಂಕಿಸಿದ್ದು, ನಾಪತ್ತೆಯಾಗಿರುವ ಆರೋಪಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಅನುಮಾನಸ್ಪದವಾಗಿ ಮೃತಪಟ್ಟ ಯುವತಿಯನ್ನು ದೇವಿಶ್ರೀ   (21) ಎಂದು ಗುರುತಿಸಲಾಗಿದೆ. ಮೂಲತಃ ಆಂಧ್ರಪ್ರದೇಶದವರಾದ ದೇವಿಶ್ರೀ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ದೇವಿಶ್ರೀ ಭಾನುವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಈ ಬಗ್ಗೆ ಮನೆಯ ಮಾಲೀಕ ಸ...

ಬೆಂಗಳೂರಲ್ಲಿ 'ವಂದೇ ಭಾರತ್' ರೈಲು ಡಿಕ್ಕಿ : ಸ್ಥಳದಲ್ಲೇ ನರ್ಸಿಂಗ್ ವಿದ್ಯಾರ್ಥಿಗಳ ಸಾವು..!

Image
ಬೆಂಗಳೂರಲ್ಲಿ 'ವಂದೇ ಭಾರತ್' ರೈಲು ಡಿಕ್ಕಿ : ಸ್ಥಳದಲ್ಲೇ ನರ್ಸಿಂಗ್ ವಿದ್ಯಾರ್ಥಿಗಳ ಸಾವು..! ಬೆಂಗಳೂರು : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಸಂಭವಿಸಿದೆ. ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ ಸ್ಟೆರಿನ್ ಎಲ್ಜಾ ಸಜಿ (19) ಎಂಬವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಬಾಣಾವರ ಠಾಣೆ ಪೊಲೀಸರು ಮೃತರ ಪೋಷಕರಿಗೆ ಮಾಹಿತಿ ರವಾನಿಸಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೇರಳದ ಪಟ್ಟನಂತಿಟ್ಟ ಮೂಲದವರಾದ ಇಬ್ಬರೂ ಬೆಂಗಳೂರಿನ ಸಪ್ತಗಿರಿ ನರ್ಸಿಂಗ್ ​ ಕಾಲೇಜಿನಲ್ಲಿ ಬಿಎಸ್‌ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್ ​ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಹಳಿ ದಾಟುವಾಗ ಸೂಪರ್ ಫಾಸ್ಟ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿದೆ. ಪರಿಣಾಮ ಇಬ್ಬರೂ ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮದ್ಯದ ಪಾರ್ಟಿಯಲ್ಲಿ ಹುಟ್ಟಿತ್ತು 7 ಕೋಟಿ ದರೋಡೆ ಪ್ಲಾನ್: ಖಾಕಿ ಹಾಕಿಕೊಂಡೆ ಸ್ಕೆಚ್​ ಹಾಕಿದ್ದ ಪೊಲೀಸ್​​..!

Image
ಮದ್ಯದ ಪಾರ್ಟಿಯಲ್ಲಿ ಹುಟ್ಟಿತ್ತು 7 ಕೋಟಿ ದರೋಡೆ ಪ್ಲಾನ್: ಖಾಕಿ ಹಾಕಿಕೊಂಡೆ ಸ್ಕೆಚ್​ ಹಾಕಿದ್ದ ಪೊಲೀಸ್​​..! ಬೆಂದಕಾಳೂರು: ಬೆಂಗಳೂರಿನಲ್ಲಿ ಹಾಡಹಗಲೇ ನಡೆದಿದ್ದ ಮತ್ತು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ 7.11 ಕೋಟಿ ರೂ. ಮೌಲ್ಯದ ನಗದು ವಾಹನ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ನಡೆದ ಕೇವಲ 60 ಗಂಟೆಗಳ ಒಳಗೆ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿರುವ ವಿಶೇಷ ತನಿಖಾ ತಂಡ, ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ. ಬಂಧಿತರಿಂದ 5.76 ಕೋಟಿ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಅಚ್ಚರಿಯ ಸಂಗತಿಯೆಂದರೆ, ಈ ಹೈಟೆಕ್ ದರೋಡೆಯ ಹಿಂದಿನ ಮಾಸ್ಟರ್ ಮೈಂಡ್ ಬೇರಾರೂ ಅಲ್ಲ, ಗೋವಿಂದಪುರ ಪೊಲೀಸ್ ಠಾಣೆಯ ಸಿಬ್ಬಂದಿ ಅಣ್ಣಪ್ಪ ನಾಯಕ್ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಬಂಧಿತರು ಯಾರು? ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಠಾಣೆಯ ಕ್ರೈಂ ಸಿಬ್ಬಂದಿ ಅಣ್ಣಪ್ಪ ನಾಯಕ್, ಹಣ ಸಾಗಣೆ ಸಂಸ್ಥೆಯಾದ 'ಸಿಎಂಎಸ್' (CMS) ನ ವಾಹನ ಉಸ್ತುವಾರಿ ಗೋಪಾಲಕೃಷ್ಣ ಅಲಿಯಾಸ್ ಗೋಪಿ ಮತ್ತು ಇದೇ ಸಂಸ್ಥೆಯ ಮಾಜಿ ಉದ್ಯೋಗಿ ಝೇವಿಯರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಜಾಲದ ಪ್ರಮುಖ ಆರೋಪಿ ರವಿ ಮತ್ತು ಆತನ ಐವರು ಸಹಚರರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಘಟನೆಯ ಹಿನ್ನೆಲೆ ನವೆಂಬರ್ 19 ರಂದು ಮಧ್ಯಾಹ್ನ 12:48ರ ಸುಮ...

ಸುಲಿಗೆ ಪ್ರಕರಣ: ಇಬ್ಬರು ಆಪರಾಧಿಗಳಿಗೆ 5 ವರ್ಷ ಕಠಿಣ ಸಜೆ

Image
ಸುಲಿಗೆ ಪ್ರಕರಣ: ಇಬ್ಬರು ಆಪರಾಧಿಗಳಿಗೆ 5 ವರ್ಷ ಕಠಿಣ ಸಜೆ   ನವೆಂಬರ್ 21, 2025  ಚಿಕ್ಕಮಗಳೂರು : ಮೋಟಾ‌ರ್ ಬೈಕ್‌ನಲ್ಲಿ ತೆರಳುತ್ತಿದ್ದವರನ್ನು ದೂಡಿ ಬೀಳಿಸಿ ಚಿನ್ನಾಭರಣ ಕಸಿದು ಸುಲಿಗೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಠಿಣ ಸಜೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.      ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಠಿಣ ಸಜೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಕಡೂರು ತಾಲೂಕು ಬುಕ್ಕಸಾಗರ ಕೊರಚರಹಟ್ಟಿಯ ಸಂತೋಷ್ ಹಾಗೂ ಹಾಲೇಶ ಎಂಬುವವರೇ ಶಿಕ್ಷೆಗೆ ಒಳಗಾದವರು. ಈ ಘಟನೆ ನಡೆದಿರುವುದು 2012ರ ಜೂನ್.4 ರಂದು ಕಡೂರು ತಾಲೂಕು ಸಖರಾಯಪಟ್ಟಣ ಸಮೀಪದ ಸ್ವಾಮಿಕಟ್ಟೆ ನಿವಾಸಿ ಸುಧಾ ಎಂಬುವವರು ತಮ್ಮ ಪತಿ ಶೇಖ‌ರ್ ಅವರೊಂದಿಗೆ ಕರಡಿಗವಿ ಮಠಕ್ಕೆ ತೆರಳಿ ತಮ್ಮ ಮಗುವಿನ ಮುಡಿ (ತಲೆಕೂಡಲು) ತೆಗೆಸಿಕೊಂಡು ತೆಗೆಸಿಕೊಂಡು ಅಂದು ಮಧ್ಯಾಹ್ನ 2.30ರ ಸುಮಾರಿಗೆ ಮಗುವಿನೊಂದಿಗೆ ಬೈಕ್‌ನಲ್ಲಿ ಮರಳುತ್ತಿದ್ದಾಗ ಶೇಖ‌ರ್ ಅವರನ್ನು ತಳ್ಳಿ ಬೈಕ್ ಅನ್ನು ದೂಡಿ ರಸ್ತೆಯ ಮೇಲೆ ಬೀಳಿಸಿದ್ದು, ಆರೋಪಿ ಸಂತೋಷ್ ಮಗುವನ್ನೆತ್ತಿಕೊಂಡು ಚಾಕು ತೋರಿಸಿ ಹೆದರಿಸಿದ್ದ ಎನ್ನಲಾಗಿದೆ. ಈ ಸಂದರ್ಭದಲ್ಲಿ ಹಾಲೇಶನು ಸುಧಾ ಅವರ ಕೊರಳಿನಲ್ಲಿದ್ದ ಬಂಗಾರದ ಮಾಂಗಲ್ಯ ಸರ, ಒಂದು ಬಂಗಾರದ ನೆಕ್ಲೀಸ್, ಮೊಬೈಲ್ ಹಾಗೂ ಬೈಕ್‌ನ ಕೀ...

ಶೃಂಗೇರಿ ತಾಲೂಕಿನಾದ್ಯಂತ ಗುರುವಾರ ದಿನವಿಡೀ ವಿದ್ಯುತ್‌ ವ್ಯತ್ಯಯ!

Image
ಶೃಂಗೇರಿ ತಾಲೂಕಿನಾದ್ಯಂತ ಗುರುವಾರ ದಿನವಿಡೀ ವಿದ್ಯುತ್‌ ವ್ಯತ್ಯಯ! ಶೃಂಗೇರಿ : ಬಾಳೆಹೊನ್ನೂರು-ಶೃಂಗೇರಿ ಮಾರ್ಗದ ನಿರ್ವಹಣೆ ಹಾಗೂ ಜಯಪುರ ಮಾರ್ಗದಲ್ಲಿ ಪ್ರತ್ಯೇಕ ಬ್ರೇಕರ್ ಅಳವಡಿಕೆ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ (ಗುರುವಾರ, ನವೆಂಬರ್ 20 ರಂದು ) ಶೃಂಗೇರಿ ತಾಲೂಕಿನ ಬಹುಪಾಲು ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ವಿದ್ಯುತ್ ಮೆಸ್ಕಾಂ ಮನವಿ ಮಾಡಿದೆ. ಬಾಳೆಹೊನ್ನೂರು - ಶೃಂಗೇರಿ 33/11ಕೆವಿ ಮಾರ್ಗದ ಪ್ರಮುಖ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಶೃಂಗೇರಿ 33/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಫೀಡರ್‌ಗಳಲ್ಲಿ ವಿದ್ಯುತ್‌ ನಿಲುಗಡೆ ಇರಲಿದೆ. ಜಯಪುರ 33ಕೆ.ವಿ ಮಾರ್ಗದಲ್ಲಿ ಆಗುವ ಅಡಚಣೆಯನ್ನು ತಪ್ಪಿಸುವುದಕ್ಕಾಗಿ ಶೃಂಗೇರಿ ಮಾರ್ಗಕ್ಕೆ ಪ್ರತ್ಯೇಕ ಬ್ರೇಕರ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ, ಬೆಳಿಗ್ಗೆ 11ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮೇಗುಂದ ಹೋಬಳಿ, ಜಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿ, ಅತ್ತಿಕುಡುಗೆ ಗ್ರಾಮ ಪಂಚಾಯಿತಿ ವ್ಯಾಪ್ತಿ, ಗುಡ್ಡೆ ತೋಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಹಕರು ಮತ್ತು ಸಾರ್ವಜನಿಕರು ಈ ವ್ಯತ್ಯಯಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮೆಸ್ಕಾಂ ಮನವಿ ಮಾಡಿದೆ.

“ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಬಸ್ ಪಲ್ಟಿ: ತಪ್ಪಿದ ದೊಡ್ಡ ದುರಂತ.!"

Image
“ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಬಸ್ ಪಲ್ಟಿ: ತಪ್ಪಿದ ದೊಡ್ಡ ದುರಂತ.!" ಮಂಡ್ಯ :- ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲಿನಿಂದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಕೂದಲೆಳೆ ಅಂತರದಲ್ಲಿ ಭಾರೀ ದುರಂತದಿಂದ ಪಾರಾದ ಘಟನೆ ಕೇರಳದ ಏರಿಮಲೈ ಸಮೀಪ ನಡೆದಿದೆ. ಯಾಲದಹಳ್ಳಿ ಕೊಪ್ಪಲು ಗ್ರಾಮದ ಒಟ್ಟು 33 ಮಂದಿ ಭಕ್ತರು ಮಾಲೆ ಧರಿಸಿ ಸ್ವಾಮಿ ದರ್ಶನಕ್ಕಾಗಿ ವಿಶೇಷ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದರೂ, ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲರೂ ಜೀವಂತವಾಗಿ ಪಾರಾಗಿದ್ದಾರೆ. ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಮತ್ತು ಪೊಲೀಸರು ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಒದಗಿಸಿದ್ದಾರೆ. ಘಟನಾ ಸ್ಥಳಕ್ಕೆ ಏರಿಮಲೈ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಅನಾಹುತವಾಗದಿರುವುದು ಭಕ್ತರಿಗೆ ದೊಡ್ಡ ಸಮಾಧಾನ ತಂದಿದೆ. ಶಬರಿಮಲೆ ಯಾತ್ರೆಯ ಮೊದಲ ಹಂತದಲ್ಲೇ ಸಂಭವಿಸಿದ ಈ ಅಪಘಾತ ಕ್ಷಣ ಮಾತ್ರದಲ್ಲಿ ದೊಡ್ಡ ದುರಂತವಾಗಬಹುದಿತ್ತು ಎಂಬ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

"ಪ್ರೀತಿಗೆ ಅಡ್ಡಿಯಾದ ಎಂಬ ಕಾರಣಕ್ಕೆ ಪ್ರಿಯತಮೆಯ ಬಾವನನ್ನ ಮುಗಿಸಿದ ಪ್ರಿಯಕರ.."

Image
"ಪ್ರೀತಿಗೆ ಅಡ್ಡಿಯಾದ ಎಂಬ ಕಾರಣಕ್ಕೆ ಪ್ರಿಯತಮೆಯ ಬಾವನನ್ನ ಮುಗಿಸಿದ ಪ್ರಿಯಕರ.."   ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕು ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಕಲ್ಕೆರೆ ಗ್ರಾಮದ ತೆಂಗಿನ ಮನೆ ಎಂಬಲ್ಲಿ ಘಟನೆ ನಡೆದಿದೆ. ಪ್ರೀತಿಗೆ ಅಡ್ಡಿ ಅರೋಪ ವ್ಯಕ್ತಿಯ ಕೊಲೆ ರಾಜೇಶ್(27) ಕೊಲೆಯಾದ ವ್ಯಕ್ತಿ  ಜಯಪುರ ಸಮೀಪದ ತೆಂಗಿನಮನೆಯ ಕಲ್ಕೆರೆ ಗ್ರಾಮದಲ್ಲಿ ಘಟನೆ:   ವರುಣ್ ಪೂಜಾರಿ ಎಂಬಾತನಿಂದ ರಾಜೇಶ್ ಕೊಲೆ. ರಾಜೇಶ್ ಪತ್ನಿಯ ಸಹೋದರಿಯನ್ನ(ನಾದನಿ)ಯನ್ನು ವರುಣ್ ಪ್ರೀತಿಸುತ್ತಿದ್ದ.ವರುಣ್ ಪೂಜಾರಿ ಹಾಗೂ ರಾಜೇಶ್ ಇಬ್ಬರ ನಡುವೆ ಫೋನ್ ಮುಖಾಂತರ ಆಗಾಗ್ಗೆ ಇಬ್ಬರ ನಡುವೇ ಜಗಳ ನಡೆಯುತ್ತಲೇ ಇರುತ್ತಿದ್ದು ಭಾನುವಾರ ದಿನ ಇದು ಅತಿರೇಕಕ್ಕೆ ಹೋಗಿ ಇದು ಸೋಮವಾರ ಕೊಲೆಯಲ್ಲಿ ಅಂತ್ಯವಾಗಿದೆ.  ರಾಜೇಶ್ ಮೂಲತಃ ಬಾಳೆಹೊನ್ನೂರು ಸಮೀಪದ ಬಾಸಪುರ. ವರುಣ್ ಪೂಜಾರಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮಂಡಗದ್ದೆ ಯಾವನಾಗಿದ್ದು.ವರುಣ್ ರಾಜೇಶ್ ನನ್ನು ತೆಂಗಿನ ಮನೆಯ ಕಲ್ಕೆರೆಯ ಪತ್ನಿ ಮನೆಗೆ ಬರಲು ರಾಜೇಶ್ನನ್ನು ಪ್ರೆರೇಪಿಸಿದ್ದ ಎಂದು ಹೇಳಲಾಗಿದೆ.         ಸೋಮವಾರ ದಿನ ಬೆಳಿಗ್ಗೆ ಅರುಣ್ ಪೂಜಾರಿ ರಾಜೇಶನ ಅತ್ತೆ ಮನೆಯಾದ ತೆಂಗಿನ ಮನೆಯಲ್ಲಿ ಇಬ್ಬರಿಗೂ ಜಗಳ ವಾಗಿ ಅರುಣಪೂಜಾರಿ ರಾಜೇಶನನ್ನು ಚಾಕುವಿನಿಂದ ಇರಿದು ಕೊಲೆಮಾಡಿ ಪರಾರಿ ಯಾಗಿದ್ದ...

ಸೌದಿಯಲ್ಲಿ ಭೀಕರ ಬಸ್‌ ಅಪಘಾತ – ದುರಂತದಲ್ಲಿ ಓರ್ವ ಕನ್ನಡಿಗ ಸಾವು..!

Image
ಸೌದಿಯಲ್ಲಿ ಭೀಕರ ಬಸ್‌ ಅಪಘಾತ – ದುರಂತದಲ್ಲಿ ಓರ್ವ ಕನ್ನಡಿಗ ಸಾವು..! ಹುಬ್ಬಳ್ಳಿ : ಸೌದಿ ಅರೇಬಿಯಾದಲ್ಲಿ (Saudi Arabia) ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಓರ್ವ ಕನ್ನಡಿಗ (Kannadiga) ಕೂಡ ಸಾವನ್ನಪ್ಪಿದ್ದಾರೆ. ಬಸ್‌ ದುರಂತದಲ್ಲಿ 45 ಮಂದಿ ಭಾರತೀಯರು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಅಬ್ದುಲ್ ಘಣಿ ಶಿರಹಟ್ಟಿ (55) ಸಾವಿಗೀಡಾಗಿರುವ ಕನ್ನಡಿಗ. ಇವರು ಹುಬ್ಬಳ್ಳಿ (Hubballi) ನಗರದ ಗಣೇಶಪೇಟ್ ನಿವಾಸಿ. ದುಬೈನಲ್ಲಿ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ದುಬೈನಿಂದ ಸೌದಿಗೆ ಉಮ್ರಾಗೆ ಹೋಗಿದ್ದರು. ಎರಡು ತಿಂಗಳ ಅಬ್ದುಲ್‌ ಘಣಿ ಹಿಂದೆ ದುಬೈಗೆ ಹೋಗಿದ್ದರು. ನ.9 ರಂದು ದುಬೈನಿಂದ ಸೌದಿಗೆ ಹೋಗಿದ್ದರು. ಅಬುದಾಬಿ ಇಂಟರ್‌ನ್ಯಾಷನಲ್ ಹೋಟೆಲ್‌ನಲ್ಲಿ ಡ್ರೈವರ್ ಕೂಡ ಆಗಿದ್ದರು. ಈಗ ಸೌದಿಯಲ್ಲಿ ಹುಬ್ಬಳ್ಳಿ ನಿವಾಸಿ ಅಬ್ದುಲ್ ಅವರ ಮೃತದೇಹ ಇದೆ. ಹೀಗಾಗಿ, ತಮ್ಮನ್ನು ಸೌದಿಗೆ ಕಳುಹಿಸುವಂತೆ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಅಬ್ದುಲ್‌ ಅವರ ಮಕ್ಕಳಾದ ಅಂಜುಮ್, ಮೌಲಾಲಿ, ನಫಿಸಾ, ರೇಷ್ಮಾ, ಹೆಂಡತಿ ಜಬಿನಾ ಅಳಲು ತೋಡಿಕೊಂಡಿದ್ದಾರೆ. ಹುಬ್ಬಳ್ಳಿ ಗಣೇಶ ಪೇಟೆಯ ಶೆಟ್ಟರ್ ಓಣಿಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಂದೆ ಮುಖ ನೋಡಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ. ‘ಪಬ್ಲಿಕ್ ಟಿವಿ’ ಎದುರು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಮೃತ ಅಬ್ದುಲ್ ಮನೆಗೆ ಮುಸ್ಲಿಂ ಮುಖ...

ಮದೀನಾ ಬಳಿ ಬಸ್-ಡೀಸೆಲ್ ಟ್ಯಾಂಕರ್ ನಡುವೆ ಭೀಕರ ಅಪಘಾತ: 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವು..!

Image
ಮದೀನಾ ಬಳಿ ಬಸ್-ಡೀಸೆಲ್ ಟ್ಯಾಂಕರ್ ನಡುವೆ ಭೀಕರ ಅಪಘಾತ: 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವು..! ಮದೀನಾ : ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮುಫ್ರಿಹತ್ ಎಂದು ಗುರುತಿಸಲಾದ ಸ್ಥಳದಲ್ಲಿ ಮುಂಜಾನೆ 1.30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಂತ್ರಸ್ತರು ಹೈದರಾಬಾದ್ ಮೂಲದವರು. ದುರಂತದ ಸಮಯದಲ್ಲಿ ಸುಮಾರು 20 ಮಹಿಳೆಯರು ಮತ್ತು 11 ಮಕ್ಕಳು ಬಸ್ಸಿನಲ್ಲಿದ್ದರು ಎಂದು ಆರಂಭಿಕ ಮಾಹಿತಿ ಸೂಚಿಸುತ್ತದೆ. ಮೆಕ್ಕಾದಲ್ಲಿ ತಮ್ಮ ಧಾರ್ಮಿಕ ವಿಧಿಗಳನ್ನು ಪೂರ್ಣಗೊಳಿಸಿದ ನಂತರ ಯಾತ್ರಿಕರು ಮದೀನಾಕ್ಕೆ ತೆರಳುತ್ತಿದ್ದರು. ಡಿಕ್ಕಿ ಸಂಭವಿಸಿದಾಗ ಅನೇಕ ಪ್ರಯಾಣಿಕರು ನಿದ್ರಿಸುತ್ತಿದ್ದರು ಎಂದು ವರದಿಯಾಗಿದೆ.