ಬೆಂಗಳೂರು ದೇವಿಶ್ರೀ ಕೊಲೆ ಪ್ರಕರಣ-ಆರೋಪಿ ತಿರುಪತಿಯಲ್ಲಿ ಅರೆಸ್ಟ್

ಬೆಂಗಳೂರು ದೇವಿಶ್ರೀ ಕೊಲೆ ಪ್ರಕರಣ-ಆರೋಪಿ ತಿರುಪತಿಯಲ್ಲಿ ಅರೆಸ್ಟ್
ಬೆಂಗಳೂರು :ಬೆಂಗಳೂರಿನ ಮಾದನಾಯಕನಹಳ್ಳಿ ವ್ಯಾಪ್ತಿಯ ತಮ್ಮೇನಹಳ್ಳಿಯಲ್ಲಿ ಆಂಧ್ರ ಮೂಲದ ಬಿಬಿಎಂ ವಿದ್ಯಾರ್ಥಿನಿ ದೇವಿಶ್ರೀ (21) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಸ್ನೇಹಿತ ಪ್ರೇಮ್ ವರ್ಧನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ದೇವಿಶ್ರೀ ಬೇರೆ ಹುಡುಗನೊಂದಿಗೆ ಮಾತನಾಡುತ್ತಿದ್ದಾಳೆ ಎಂಬ ಕೋಪದಿಂದ ಪ್ರೇಮ್ ವರ್ಧನ್ ಗೆಳತಿಯ ರೂಮಿಗೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ. ಕೊಲೆ ಮಾಡಿದ ನಂತರ ಆರೋಪಿಯು ಮೆಟ್ರೋ ಮೂಲಕ ಮೆಜೆಸ್ಟಿಕ್‌ಗೆ ಹೋಗಿ, ಅಲ್ಲಿಂದ ತಿರುಪತಿಗೆ ಪರಾರಿಯಾಗಿದ್ದನು. ತನಿಖೆ ಕೈಗೊಂಡ ಪೊಲೀಸರು, ತಿರುಪತಿಯಲ್ಲಿ ಆತನ ಜಾಡು ಹಿಡಿದು ಯಶಸ್ವಿಯಾಗಿ ಬಂಧಿಸಿದ್ದಾರೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "