Posts

Showing posts from December, 2025

"ಕಿರು ವಿಮಾನ ನಿಲ್ದಾಣ ಭೂಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಪ್ರಕಟ..!"

Image
"ಕಿರು ವಿಮಾನ ನಿಲ್ದಾಣ ಭೂಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಪ್ರಕಟ..!" ಚಿಕ್ಕಮಗಳೂರು: ಕಾಫಿನಾಡಿನ ಬಹುದಿನಗಳ ಕನಸಾದ ಏರ್-ಸ್ಟ್ರಿಪ್ (ಕಿರು ವಿಮಾನ ನಿಲ್ದಾಣ) ಯೋಜನೆಗೆ ಪೂರಕವಾಗಿ ಭೂಸ್ವಾಧೀನ ಪ್ರಕ್ರಿಯೆಯು ಈಗ ಅಧಿಕೃತವಾಗಿ ಚಾಲನೆ ಪಡೆದುಕೊಂಡಿದೆ. ಚಿಕ್ಕಮಗಳೂರು ಮತ್ತು ಹಿರೇಮಗಳೂರು ವ್ಯಾಪ್ತಿಯಲ್ಲಿ ಜಮೀನು ಗುರುತಿಸಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದ್ದು, ಈ ಬಗ್ಗೆ ರಾಜ್ಯ ಪತ್ರದಲ್ಲಿ ಸಾರ್ವಜನಿಕ ಪ್ರಕಟಣೆಯೂ ಹೊರಬಿದ್ದಿದೆ. ಭೂಸ್ವಾಧೀನ ಕಾಯ್ದೆ 2013ರ ಕಲಂ 11(1)ರ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಯೋಜನೆಯ ಒಟ್ಟು ಅನುಷ್ಠಾನಕ್ಕಾಗಿ 31 ಎಕರೆಗೂ ಅಧಿಕ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶ ಹೊಂದಲಾಗಿದೆ. ಸದ್ಯ 16.31 ಎಕರೆ ಬಾಕಿ ಜಮೀನನ್ನು ಪ್ರಕ್ರಿಯೆಗೆ ಒಳಪಡಿಸಲು ನಿರ್ಧರಿಸಲಾಗಿದ್ದು, ಸಂತ್ರಸ್ತರಿಗೆ ಪಾರದರ್ಶಕವಾಗಿ ಸೂಕ್ತ ಪರಿಹಾರ ಮತ್ತು ಪುನರ್‌ ವಸತಿ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಗೆ ಚಿಕ್ಕಮಗಳೂರು ಮತ್ತು ಹಿರೇಮಗಳೂರು ನಡುವೆ ಒಟ್ಟು 137 ಎಕರೆ ಜಮೀನನ್ನು ಈಗಾಗಲೇ ಗುರುತಿಸಲಾಗಿದೆ. ಈ ಪೈಕಿ 120 ಎಕರೆ ಸರ್ಕಾರಿ ಜಮೀನಾಗಿದ್ದು, ಉಳಿದ 16.31 ಎಕರೆ ಖಾಸಗಿ ಜಮೀನಿನ ಸ್ವಾಧೀನ ಪ್ರಕ್ರಿಯೆ ಬಾಕಿ ಉಳಿದಿದೆ. ಆದರೆ, ಈ ಪ್ರದೇಶದಲ್ಲಿ ಜಮೀನು ಹೊಂದಿರುವ ಕೃಷಿಕರು ಭೂಮಿ ಬಿಟ್ಟುಕೊಡಲು ನಿರಾಸಕ್ತಿ ತ...

ಸರ್ಫ್- ಯೂರಿಯಾ ಬಳಸಿ ಮನೆಯಲ್ಲಿ ಹಾಲಿನ ಪ್ಯಾಕೆಟ್ ತಯಾರಿಕೆ : ಆಘಾತಕಾರಿ ವಿಡಿಯೋ ವೈರಲ್..!

Image
ಸರ್ಫ್- ಯೂರಿಯಾ ಬಳಸಿ ಮನೆಯಲ್ಲಿ ಹಾಲಿನ ಪ್ಯಾಕೆಟ್ ತಯಾರಿಕೆ : ಆಘಾತಕಾರಿ ವಿಡಿಯೋ ವೈರಲ್..! ಇತ್ತೀಚಿನ ದಿನಗಳಲ್ಲಿ ನಾವು ತಿನ್ನುವ ಮತ್ತು ಕುಡಿಯುವ ಪ್ರತಿಯೊಂದೂ ಕಲಬೆರಕೆಯಾಗುತ್ತಿದೆ. ನಾವು ಮುಟ್ಟುವ ಯಾವುದೇ ವಸ್ತುವನ್ನು ಕಲಬೆರಕೆ ಮಾಡಲಾಗುತ್ತದೆ, ಮೆಣಸಿನಕಾಯಿಗೆ ಇಟ್ಟಿಗೆ ಪುಡಿ, ಮಸಾಲೆಗಳಿಗೆ ಮರದ ಪುಡಿ, ಶುಂಠಿಗೆ ಬಾಳೆಹಣ್ಣಿನ ಸಿಪ್ಪೆಯನ್ನು ಸೇರಿಸುವಂತೆ. ನಾವು ಪ್ರತಿದಿನ ಕುಡಿಯುವ ಹಾಲು ಕೂಡ ಕಲಬೆರಕೆಯಾಗುತ್ತಿದೆ. ಇತ್ತೀಚೆಗೆ, ಇದಕ್ಕೆ ಸಂಬಂಧಿಸಿದ ಆಘಾತಕಾರಿ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಒಬ್ಬ ವ್ಯಕ್ತಿ ಮನೆಯಲ್ಲಿ ಸರ್ಫ್, ಯೂರಿಯಾ, ಸಂಸ್ಕರಿಸಿದ ಎಣ್ಣೆ ಮತ್ತು ಬಟ್ಟೆ ಒಗೆಯಲು ಬಳಸುವ ಸಂಶ್ಲೇಷಿತ ರಾಸಾಯನಿಕಗಳಿಂದ ಹಾಲು ತಯಾರಿಸುತ್ತಿದ್ದಾನೆ. ಅವನು ಮನೆಯಲ್ಲಿ ರಾಸಾಯನಿಕಗಳಿಂದ ಹಾಲನ್ನು ತಯಾರಿಸಿ ಪ್ಯಾಕೆಟ್ಗಳಲ್ಲಿ ತುಂಬಿಸುತ್ತಿದ್ದಾನೆ. ಈ ಬಗ್ಗೆ ಮಾಹಿತಿ ಪಡೆದ ನಂತರ, ಅಧಿಕಾರಿಗಳು ಅವನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಈ ಘಟನೆ ಮುಂಬೈನ ಅಂಧೇರಿ ಕಪಸ್ವಾಡಿಯಲ್ಲಿ ನಡೆದಿರುವಂತೆ ತೋರುತ್ತದೆ. ಈ ವಿಡಿಯೋವನ್ನು ನೆಟ್ಟಿಗರು ಒಬ್ಬರು ಹಂಚಿಕೊಂಡಿದ್ದು, ಅದು ವೈರಲ್ ಆಗುತ್ತಿದೆ. ಇದರೊಂದಿಗೆ, ಕಲಬೆರಕೆ ಹಾಲು ತಯಾರಿಸುತ್ತಿರುವ ವ್ಯಕ್ತಿಯ ಮೇಲೆ ನೆಟ್ಟಿಗರು ತೀವ್ರ ಕೋಪ ವ್ಯಕ್ತಪಡಿಸುತ್ತಿದ್ದಾರೆ. ಅವನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಮತ್ತು ಜೈಲಿಗೆ ಕಳುಹಿಸು...

ಮೂರ್ಕಣ್ಣು ಗುಡ್ಡ ವ್ಯಾಪ್ತಿಯಲ್ಲಿ ನೈಜ ಪರಿಸ್ಥಿತಿಯನ್ನು ಪರಿಶೀಲಿಸಿ ನ್ಯಾಯಾಲಯಕ್ಕೆ ವರದಿ ನೀಡಲಾಗುವುದು: ಜಿಲ್ಲಾಧಿಕಾರಿ ಲತಾ ಕುಮಾರಿ..!

Image
ಮೂರ್ಕಣ್ಣು ಗುಡ್ಡ ವ್ಯಾಪ್ತಿಯಲ್ಲಿ ನೈಜ ಪರಿಸ್ಥಿತಿಯನ್ನು ಪರಿಶೀಲಿಸಿ ನ್ಯಾಯಾಲಯಕ್ಕೆ ವರದಿ ನೀಡಲಾಗುವುದು: ಜಿಲ್ಲಾಧಿಕಾರಿ ಲತಾ ಕುಮಾರಿ..!  ಸಕಲೇಶಪುರ : ತಾಲೂಕಿನ ಮೂರ್ಕಣ್ಣು ಗುಡ್ಡ ಸೆಕ್ಷನ್ 4 ವ್ಯಾಪ್ತಿಯ ಕಾಡುಮನೆ,ಅಚ್ಚನಹಳ್ಳಿ, ಅಗ್ನಿ ಗ್ರಾಮ ಮುಂತಾದ ಕಡೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಗ್ರಾಮಸ್ತರು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಹಲವಾರು ದಶಕಗಳಿಂದ ನಾವು ಎಲ್ಲಿ ಬದುಕನ್ನು ಕಂಡುಕೊಂಡಿದ್ದೇವೆ. ಆದರೆ ಇದೀಗ ಅರಣ್ಯ ಇಲಾಖೆಯವರು ಈ ಜಾಗ ಅರಣ್ಯ ಪ್ರದೇಶವಾಗಿದೆ ಎಂದು ಹೇಳಿ ನಮ್ಮನ್ನು ಒಕ್ಕಲೆಬ್ಬಿಸಲು ಮುಂದಾಗಿದ್ದಾರೆ. ಸುಮಾರು ನೂರು ವರ್ಷಗಳ ಹಿಂದೆ ಮೈಸೂರು ಮಹಾರಾಜರು ಇದನ್ನು ಅರಣ್ಯ ಪ್ರದೇಶ ಎಂಬ ಅಧಿಸೂಚನೆ ಹೊರಡಿಸಿದ್ದಾರೆ ಎಂಬ ನೆಪವನ್ನು ಇಡ್ಕೊಂಡು ನಮಗೆ ತೊಂದರೆ ಕೊಡಲಾಗುತ್ತಿದೆ. ಸರ್ಕಾರ ಇಲ್ಲಿ ರಸ್ತೆಗಳನ್ನು ಮಾಡಿದೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ. ಬೀದಿ ದೀಪಗಳ ವ್ಯವಸ್ಥೆ ಮಾಡಿದೆ. ಶಾಲೆಗಳನ್ನು ತೆರೆಯಲಾಗಿದೆ. ಮನೆಗಳನ್ನು ಕಟ್ಟಲು ಅನುಮತಿ ನೀಡಲಾಗಿದೆ. ಸರ್ಕಾರವೇ ಹಲವಾರು ಬಡ ಕೃಷಿಕರಿಗೆ ಜಮೀನು ಮಂಜೂರು ಮಾಡಿದೆ. ನಮ್ಮನ್ನು ಎಲ್ಲಿಂದ ತರವು ಮಾಡಿದರೆ ನಾವು ಮುಂದೆ ಬದುಕನ್ನು ಯಾವ ರೀತಿ ಸಾಗಿಸುವುದು ಎಂದು ಜಿಲ್ಲಾಧಿಕಾರಿಗಳ ಮುಂದೆ ತಮ್ಮನೋವುಗಳನ್ನು ಹಂಚಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಕಳೆದ ಕೆಲವು ದಿನಗಳ ಹಿಂದೆ ಜಿಲ್...

ವನ್ಯಜೀವಿಗಳ ಮೇಲಿನ್ನು ಎಐ ಕ್ಯಾಮರಾ ನಿಗಾ..!

Image
ವನ್ಯಜೀವಿಗಳ ಮೇಲಿನ್ನು ಎಐ ಕ್ಯಾಮರಾ ನಿಗಾ..! ಖ್ಯಾತ ವನ್ಯಜೀವಿ ಛಾಯಾಗ್ರಾಹಕ ಕಲ್ಯಾಣ್ ವರ್ಮಾ ಅವರು ಅಭಿವೃದ್ಧಿಪಡಿಸಿದ 'ಕ್ಯಾಮ್3' (Cam3) ಎಂಬ ಕೃತಕ ಬುದ್ಧಿಮತ್ತೆ (AI) ಆಧಾರಿತ ಕ್ಯಾಮೆರಾ ವ್ಯವಸ್ಥೆಯು ಈಗ ವನ್ಯಜೀವಿಗಳ ಚಲನವಲನಗಳನ್ನು ಪತ್ತೆಹಚ್ಚಲು ಮತ್ತು ಮೇಲ್ವಿಚಾರಣೆ ಮಾಡಲು ನೆರವಾಗುತ್ತಿದೆ. ಈ ನವೀನ ವ್ಯವಸ್ಥೆಯ ಪ್ರಮುಖಾಂಶಗಳು ಇಲ್ಲಿವೆ: ಸ್ವಯಂಚಾಲಿತ ಪತ್ತೆಹಚ್ಚುವಿಕೆ: ಸಾಂಪ್ರದಾಯಿಕ ಕ್ಯಾಮೆರಾ ಟ್ರ್ಯಾಪ್‌ಗಳು ಚಲನೆಯನ್ನು ಪತ್ತೆಹಚ್ಚಿದಾಗ ಮಾತ್ರ ಚಿತ್ರಗಳನ್ನು ಸೆರೆಹಿಡಿಯುತ್ತವೆ, ಆದರೆ 'ಕ್ಯಾಮ್3' ವ್ಯವಸ್ಥೆಯು AI ಅನ್ನು ಬಳಸಿಕೊಂಡು ಪ್ರಾಣಿಗಳ ಚಲನೆಯನ್ನು ವಿಶ್ಲೇಷಿಸುತ್ತದೆ ಮತ್ತು ವನ್ಯಜೀವಿಗಳ ಉಪಸ್ಥಿತಿಯನ್ನು ದೃಢೀಕರಿಸಿದ ನಂತರವೇ ಡೇಟಾವನ್ನು ದಾಖಲಿಸುತ್ತದೆ. ದಕ್ಷತೆ ಮತ್ತು ನಿಖರತೆ: ಇದು ಸುಳ್ಳು ಧನಾತ್ಮಕ (false positives) ಫಲಿತಾಂಶಗಳನ್ನು (ಉದಾಹರಣೆಗೆ, ಗಾಳಿಯಿಂದ ಮರದ ರೆಂಬೆಗಳು ಅಲುಗಾಡುವುದು) ಕಡಿಮೆ ಮಾಡುತ್ತದೆ, ಇದರಿಂದಾಗಿ ಸಂಶೋಧಕರು ಅಮೂಲ್ಯವಾದ ಸಮಯ ಮತ್ತು ಶೇಖರಣಾ ಸ್ಥಳವನ್ನು ಉಳಿಸಬಹುದು . ತಕ್ಷಣದ ಎಚ್ಚರಿಕೆ: ಈ ವ್ಯವಸ್ಥೆಯು ನೈಜ-ಸಮಯದ ಡೇಟಾವನ್ನು ಒದಗಿಸುತ್ತದೆ, ಇದು ಅಳಿವಿನಂಚಿನಲ್ಲಿರುವ ಪ್ರಭೇದಗಳ ರಕ್ಷಣೆ ಮತ್ತು ಬೇಟೆಗಾರರ ಚಟುವಟಿಕೆಗಳನ್ನು ತಕ್ಷಣವೇ ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತದೆ . ಸಮುದಾಯದ ಪಾಲ್ಗೊಳ್ಳುವಿಕೆ:  ಕಲ್ಯಾಣ್ ವರ...

ಅಕ್ರಮವಾಗಿ ಕಾಡುಗಿಳಿ ಸಾಕಿದ ಆರೋಪ! ವ್ಯಕ್ತಿ ವಿರುದ್ಧ ಪ್ರಕರಣ ದಾಖಲು..!

Image
ಅಕ್ರಮವಾಗಿ ಕಾಡುಗಿಳಿ ಸಾಕಿದ ಆರೋಪ! ವ್ಯಕ್ತಿ ವಿರುದ್ಧ ಪ್ರಕರಣ ದಾಖಲು..! ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಕಾಡುಗಿಳಿಗಳನ್ನು ಸಾಕುತ್ತಿದ್ದ ಅಕ್ಟ‌ರ್ ಪಾಷಾ ಎಂಬುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಕ್ರಮವಾಗಿ ಕಾಡುಗಿಳಿಗಳನ್ನು ಸಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬರು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು, ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯ ನೆಹರುನಗರದ ವಲ್ಲಭ ಗಣಪತಿ ದೇವಸ್ಥಾನದ ಮುಂಭಾಗದ ನಿವಾಸಿ ಅಕ್ಬರ್ ಪಾಷಾ ಎಂಬುವವರು ತಮ್ಮ ಮನೆಯ ಆವರಣದಲ್ಲಿ ಎರಡು ಕಾಡುಗಿಳಿಗಳನ್ನು ಪಂಜರದಲ್ಲಿ ಇರಿಸಿಕೊಂಡು ಅಕ್ರಮವಾಗಿ ಸಾಕುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ರಾಜ್ಯ ಸಿಐಡಿ ಅರಣ್ಯ ಘಟಕದ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಎಸ್.ಕೆ ದಿವಾಕರ, ಕೆ.ಎಸ್ ದಿಲೀಪ್, ಹೆಚ್. ದೇವರಾಜ, ವೈ. ಹೇಮಾವತಿ ಹಾಗೂ ಕೆ.ಎಲ್. ತಿಮ್ಮಶೆಟ್ಟಿ ಪಾಲ್ಗೊಂಡಿದ್ದರು. ದಾಳಿಯ ವೇಳೆ ವಶಪಡಿಸಿಕೊಳ್ಳಲಾದ ಕಾಡುಗಿಳಿಗಳನ್ನು ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಸಂರಕ್ಷಣೆಗಾಗಿ ವಲಯ ಅರಣ್ಯಾಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ. ವನ್ಯಜೀವಿಗಳನ್ನು ಪಂಜರದಲ್ಲಿ ಬಂಧಿಸಿ ಸಾಕುವಂತಿಲ್ಲ ಎಂಬ ಕಾನೂನಿದ್ದರೂ ಅಕ್ರಮವಾಗಿ ಸಾಕುವವರ ವಿರುದ್ಧ ಅಧಿಕಾರಿಗಳು ಈಗ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.  ರಾಜ್ಯ ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಖಚ...

ಮನೆಗೆ ಬರ್ತಾನೆಂದು ಮಗನ ದಾರಿ ಕಾಯುತ್ತಿದ್ದ ತಾಯಿಗೆ ಬರಸಿಡಿಲು: 10 ದಿನದ ಬಳಿಕ ಪುತ್ರ ಶವವಾಗಿ ಪತ್ತೆ..!

Image
ಮನೆಗೆ ಬರ್ತಾನೆಂದು ಮಗನ ದಾರಿ ಕಾಯುತ್ತಿದ್ದ ತಾಯಿಗೆ ಬರಸಿಡಿಲು: 10 ದಿನದ ಬಳಿಕ ಪುತ್ರ ಶವವಾಗಿ ಪತ್ತೆ..! ಕಳೆದ 10 ದಿನಗಳಿಂದ ಕಾಣೆಯಾಗಿದ್ದ ಮಗ ಈಗ ಬರ್ತಾನೆ, ಆಗ ಬರ್ತಾನೆ ಅಂತ ಮನೆ ಬಾಗಿಲಲ್ಲೇ ಕಾದು ಕುಳಿತ್ತಿದ್ದ ತಾಯಿಗೆ ಇದೀಗ ನಿರಾಸೆ ಉಂಟಾಗಿದೆ. ಕಾಣೆಯಾಗಿದ್ದ ಪಿಯು ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದು, ಅತ್ತ ಮಗ ಸಾವನ್ನಪ್ಪಿರುವ ಸುದ್ದಿ ತಿಳಿದ ತಾಯಿಗೆ ಬರ ಸಿಡಿಲು ಬಡಿದಂತೆ ಆಗಿದೆ. ದೇವನಹಳ್ಳಿ, ಡಿಸೆಂಬರ್​ 26: ಆತನದು ಹದಿಹರಿಯದ ವಯಸ್ಸು. ಈಗಷ್ಟೇ ಕಾಲೇಜು ಮೆಟ್ಟಿಲೇರಿದ್ದ. ಪ್ರಥಮ ಪಿಯುಸಿ ಓದುತ್ತಾ, ಜಾಲಿಯಾಗೆ ಊರ ತುಂಬಾ ಓಡಾಡುತ್ತಿದ್ದ. ಡಿಸೆಂಬರ್​ 15ರಂದು ಮನೆಯಿಂದ ಸ್ನೇಹಿತನ ಬೈಕ್ ತೆಗೆದುಕೊಂಡು ಹೋದವನು 10 ದಿನಗಳ ಬಳಿಕ ರಸ್ತೆ ಮೋರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಪ್ರೀತಿ (Love) ವಿಚಾರಕ್ಕೆ ಯುವತಿ ಕಡೆಯವರಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದುಕೊಂಡಿದೆ. ನಡೆದದ್ದೇನು? ಅಂದಹಾಗೆ ರಸ್ತೆ ಬದಿಯ ಮೋರಿಯಲ್ಲಿ ಬಿದ್ದು ದುರಂತ ಅಂತ್ಯ ಕಂಡಿರುವ ದುರ್ದೈವಿಯ ಹೆಸರು ನಿಶಾಂಕ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿ ನಿವಾಸಿ ನಿಶಾಂಕ್, ಡಿ. 15ರಂದು ಪಕ್ಕದ ಮನೆಯವನ ಬಳಿ ಎನ್ಎಸ್ ಪಲ್ಸರ್ ಬೈಕ್ ಪಡೆದು ಒಂದು ರೌಂಡ್ ಅಂತ ಹೊರಟ್ಟಿದ್ದ. ಆದರೆ ಬೆಳಗ್ಗೆ ಮನೆಯಿಂದ ಹೊರಗಡೆ...

4.7 ಮಹಿಳಾ ಸ್ನೇಹಿ ರೇಟಿಂಗ್ ಹೊಂದಿದ್ದ ಕಂಪನಿ ಸಿ.ಇ.ಒ.ನಿಂದಲೇ ಉದ್ಯೋಗಿಯ ಗ್ಯಾಂಗ್‌ ರೇ*ಪ್ : ಮಹಿಳೆಯೂ ಆರೋಪಿ..!

Image
4.7 ಮಹಿಳಾ ಸ್ನೇಹಿ ರೇಟಿಂಗ್ ಹೊಂದಿದ್ದ ಕಂಪನಿ ಸಿ.ಇ.ಒ.ನಿಂದಲೇ ಉದ್ಯೋಗಿಯ ಗ್ಯಾಂಗ್‌ ರೇ*ಪ್ : ಮಹಿಳೆಯೂ ಆರೋಪಿ..! ರಾಜಸ್ಥಾನದ ಉದಯ್‌ಪುರದಲ್ಲಿ ಚಲಿಸುವ ಕಾರಿನಲ್ಲೇ ಡ್ರಾಪ್‌ ನೆಪದಲ್ಲಿ ಮಹಿಳಾ ಮ್ಯಾನೇಜರ್ ಮೇಲೆ ಕಂಪನಿ ಸಿಇಒ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಈಗ ಸಾಕಷ್ಟು ಸಂಚಲನ ಸೃಷ್ಟಿಸಿದ್ದು, ಪೊಲೀಸರ ತನಿಖೆಯಿಂದ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಆಘಾತಕಾರಿ ವಿಚಾರ ಎಂದರೆ ಹೀಗೆ ಗ್ಯಾಂಗ್ ರೇಪ್ ಮಾಡಿದ ವ್ಯಕ್ತಿ ಸಿಇಒ ಆಗಿರುವ ಜಿಕೆಎಂ ಕಂಪನಿಯೂ ಮಹಿಳಾ ಸ್ನೇಹಿ ಮಾನದಂಡದ ವಿಚಾರದಲ್ಲಿ 5ರಲ್ಲಿ 4.7 ರೇಟಿಂಗ್ ಅನ್ನು ಹೊಂದಿತ್ತು ಎಂಬ ವಿಚಾರ ಬಂದಿದೆ. ಮಹಿಳಾ ಸ್ನೇಹಿ ರೇಟಿಂಗ್ ಎಂದರೆ ಕಂಪನಿಯಲ್ಲಿ ಮಹಿಳೆಯರಿಗೆ ಇರುವ ಸವಲತ್ತು ವಾತಾವರಣ, ಅವರನ್ನು ನಡೆಸಿಕೊಳ್ಳುವ ರೀತಿ ಇವೆಲ್ಲವನ್ನು ಅವಲಂಬಿಸಿದೆ. ಹೀಗಿರುವಾಗ ಇಷ್ಟೊಂದು ಉತ್ತಮ ಮಹಿಳಾ ರೇಟಿಂಗ್ ಹೊಂದಿರುವ ಜಿಕೆಎಂ ಐಟಿ ಕಂಪನಿಯ ಸಿಇಒನೇ ಈಗ ತನ್ನದೇ ಕಂಪನಿಯ ಮಹಿಳಾ ಮ್ಯಾನೇಜರ್ ಮೇಲೆ ಕಂಪನಿಯ ಮತ್ತಿಬ್ಬರು ಉನ್ನತ ಮಟ್ಟದ ಉದ್ಯೋಗಿಗಳ ಜೊತೆ ಸೇರಿ ಗ್ಯಾಂಗ್‌ರೇಪ್ ಮಾಡಿರುವುದು ಆಘಾತ ಮೂಡಿಸಿದೆ. ಈ ತಿಂಗಳ ಆರಂಭದಲ್ಲಿ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ರಾಜಸ್ಥಾನದ ಉದಯ್‌ಪುರದ ಜಿಕೆಎಂ ಎಂಬ ಐಟಿ ಐಟಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಇಒ ಜಿತೇಶ್‌ ಸಿಸೋದಿಯಾ ಎಕ್ಸಿಕ್ಯೂಟಿವ್ ಹೆಡ್ ಶಿಲ್ಪಾ ಸಿರೋಹ...

"ಪೊಲೀಸ್ ಎಂಬ ಬೋರ್ಡ್ ದುರ್ಬಳಕೆ - ಸ್ವಂತ ಇಲಾಖೆ ಸಿಬ್ಬಂದಿಗೂ ದಂಡ ವಿಧಿಸಿದ ಪಿ.ಎಸ್‌.ಐ.!"

Image
"ಪೊಲೀಸ್ ಎಂಬ ಬೋರ್ಡ್ ದುರ್ಬಳಕೆ - ಸ್ವಂತ ಇಲಾಖೆ ಸಿಬ್ಬಂದಿಗೂ ದಂಡ ವಿಧಿಸಿದ ಪಿ.ಎಸ್‌.ಐ.!" ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಬಣಕಲ್‌ ಪೊಲೀಸ್‌ ಉಪನಿರೀಕ್ಷಕರು (PSI) ಒಬ್ಬರು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದನ್ನು ತಮ್ಮ ಕಾರ್ಯದ ಮೂಲಕ ಸಾಬೀತುಪಡಿಸಿದ್ದಾರೆ. ಧಾರವಾಡದಿಂದ ತಮ್ಮ ಕುಟುಂಬದೊಂದಿಗೆ ಧರ್ಮಸ್ಥಳಕ್ಕೆ ಪ್ರವಾಸ ಹೊರಟಿದ್ದ ಪೊಲೀಸ್‌ ಸಿಬ್ಬಂದಿಯೊಬ್ಬರು, ತಮ್ಮ ಖಾಸಗಿ ಕಾರಿಗೆ 'ಪೊಲೀಸ್‌' ಎಂಬ ಬೋರ್ಡ್ ಹಾಕಿಕೊಂಡಿದ್ದರು. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಚೆಕ್‌ ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಬಣಕಲ್‌ ಪಿಎಸ್‌ಐ ರೇಣುಕಾ ಅವರು ಈ ಕಾರನ್ನು ತಡೆದು ನಿಲ್ಲಿಸಿದರು. ಈ ಸಂದರ್ಭದಲ್ಲಿ ಕಾರಿನಲ್ಲಿದ್ದವರು ತಮ್ಮ ಇಲಾಖೆಯ ಗುರುತಿನ ಚೀಟಿ (ID Card) ತೋರಿಸಿದರೂ, ನಿಯಮ ಉಲ್ಲಂಘನೆಗಾಗಿ ಪಿಎಸ್‌ಐ ರೇಣುಕಾ ಅವರು ದಂಡ ವಿಧಿಸಿದರು. ಅಷ್ಟೇ ಅಲ್ಲದೆ, ಕಾರಿನಲ್ಲಿದ್ದ 'ಪೊಲೀಸ್‌' ಬೋರ್ಡ್ ಅನ್ನು ತಕ್ಷಣವೇ ತೆಗೆಸಿದರು. ನಂತರವೇ ಅವರಿಗೆ ಪ್ರಯಾಣ ಮುಂದುವರಿಸಲು ಅವಕಾಶ ನೀಡಲಾಯಿತು. ಈ ಮೂಲಕ, ನಿಯಮದ ಮುಂದೆ ಎಲ್ಲರೂ ಸಮಾನರು ಎಂಬುದನ್ನು ಬಣಕಲ್ ಪಿಎಸ್‌ಐ ರೇಣುಕಾ ಅವರು ಸಾಬೀತುಪಡಿಸಿದರು. ಇಲಾಖೆಯವರೇ ಆದರೂ ಯಾವುದೇ ಮುಲಾಜಿಲ್ಲದೆ ಕರ್ತವ್ಯ ನಿಷ್ಠೆ ಮೆರೆದ ಪಿಎಸ್‌ಐ ರೇಣುಕಾ ಅವರ ಈ ಕಾರ್ಯಕ್ಕೆ ಸ್ಥಳೀಯರಿಂದ ವ್ಯಾಪಕ ಪ್ರಶಂಸ...

" ತಾಯಿ ಸಾವಿನಿಂದ ಮನನೊಂದು ಮಗ ಆತ್ಮಹತ್ಯೆ..!"

Image
" ತಾಯಿ ಸಾವಿನಿಂದ ಮನನೊಂದು ಮಗ ಆತ್ಮಹತ್ಯೆ..!" ಕೋಲಾರ : ತಾಯಿ ಸಾವಿನಿಂದ ಮನನೊಂದ ಮಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮ್ಮರೆಡ್ಡಿಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಹೆಬ್ಬಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಮ್ಮರೆಡ್ಡಿಹಳ್ಳಿಯ ಅಭಿಷೇಕ್ (18) ಮೃತರು. ಅಭಿಷೇಕ್ ಮುಳಬಾಗಿಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ಓದಿತ್ತಿದ್ದರು. ತಾಯಿ ಎಂದರೆ ಬಹಳ ಪ್ರೀತಿ. 20 ದಿನಗಳ ಹಿಂದೆ ಅನಾರೋಗ್ಯದಿಂದ ಅಭಿಷೇಕ್ ತಾಯಿ ರಾಧ (39) ಮೃತಪಟ್ಟಿದ್ದರು. ಈ ನೋವಿನಿಂದ ಹೊರಬರಲಾಗದೆ ಅಭಿಷೇಕ್ ಸೋಮವಾರ ತೋಟಕ್ಕೆ ಸಿಂಪಡಿಸುವ ಔಷಧಿ ಕುಡಿದಿದ್ದಾನೆ. ಈ ವಿಚಾರ ತಿಳಿದ ಸ್ಥಳೀಯರು ಕೂಡಲೇ ಕೋಲಾರ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರಿಸ್ಥಿತಿ ಕೈ ಮೀರಿದ್ದು ಮೃತಪಟ್ಟಿದ್ದಾನೆ. ಮೃತರ ಅಂತ್ಯಕ್ರಿಯೆ ತಮ್ಮರೆಡ್ಡಿಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆಯಿತು.

ನೆಲಮಂಗಲ: ಮದುವೆಯಾಗಿ ತಿಂಗಳು ಕಳೆಯುವುದರೊಳಗೆ ನಿಗೂಢವಾಗಿ ನವ ವಿವಾಹಿತೆ ಸಾವು..!

Image
ನೆಲಮಂಗಲ: ಮದುವೆಯಾಗಿ ತಿಂಗಳು ಕಳೆಯುವುದರೊಳಗೆ ನಿಗೂಢವಾಗಿ ನವ ವಿವಾಹಿತೆ ಸಾವು..! ನವ ವಿವಾಹಿತೆಯೋರ್ವರು ನಿಗೂಢವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಪತಿಯೇ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಮದುವೆಯಾಗಿ ತಿಂಗಳು ಕಳೆಯುವದರ ಒಳಗೆಯೇ ಆತ ಆಕೆಗೆ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ರಾಜಿ ಪಂಚಾಯ್ತಿಯೂ ನಡೆದಿತ್ತು. ಹೀಗಿದ್ದರೂ ಆತ ಮತ್ತೆ ಆಕೆ ಮೇಲೆ ಹಲ್ಲೆ ನಡೆಸಿದ್ದ ಎಂದು ಯುವತಿಯ ಹೆತ್ತವರು ಆರೋಪಿಸಿದ್ದಾರೆ. ನೆಲಮಂಗಲ, ಡಿಸೆಂಬರ್​​ 25: ಮದುವೆಯಾಗಿ ಒಂದು ತಿಂಗಳು ಕಳೆಯುವ ಒಳಗೆ ನವ ವಿವಾಹಿತೆ ನಿಗೂಢವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಐಶ್ವರ್ಯ (26) ಮೃತ ಯುವತಿಯಾಗಿದ್ದು, ಗಂಡನೇ ಆಕೆಯನ್ನು ಕೊಲೆ ಮಾಡಿರೋದಾಗಿ ಪೋಷಕರು ಆರೋಪಿಸಿದ್ದಾರೆ. 27 ದಿನಗಳ ಹಿಂದೆಯಷ್ಟೇ ಲಿಖಿತ್ ಸಿಂಹ ಜೊತೆ ಐಶ್ವರ್ಯ ಮದುವೆ ನಡೆದಿತ್ತು. ಸುಂದರ ಸಂಸಾರದ ಕನಸು ಕಂಡಿದ್ದ ಐಶ್ವರ್ಯ, ಸಾಂಸಾರಿಕ ಬದುಕನ್ನು ಸರಿಯಾಗಿ ಆರಂಭಿಸುವ ಮುನ್ನವೇ ಪ್ರಾಣ ಕಳೆದುಕೊಂಡಿದ್ದಾರೆ. ಪತ್ನಿಗೆ ಕಿರುಕುಳ ಆರೋಪ ಮೂಲತಃ ನಾಗಮಂಗಲ ನಿವಾಸಿಗಳಾದ ಮಮತಾ ಹಾಗೂ ಕೃಷ್ಣಮೂರ್ತಿ ದಂಪತಿಯ ಹಿರಿ ಮಗಳು ಐಶ್ವರ್ಯಳನ್ನು ಬಾಗಲಗುಂಟೆ ಪೈಪ್ ಲೈನ್ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹ ಅವರಿಗೆ ಕೊಟ್ಟು ಮದುವೆ ಮಾಡಲಾಗಿತ್ತು. ಕುಟುಂಬಸ್ಥರ ಒಪ್ಪಿಗೆಯ ಮೇರೆಗೆ ಮದುವೆ ನಡೆದಿತ್ತಾದರೂ ತಿಂಗಳು ಕಳೆಯುವದರ ಒಳಗೆ ಐ...

ಚಲಿಸುತ್ತಿದ್ದ ಕಾರು ಆಯತಪ್ಪಿ ಗದ್ದೆಗೆ ಉರುಳಿದಪರಿಣಾಮ:ಓರ್ವ ಧಾರುಣ ಸಾವು..!

Image
ಚಲಿಸುತ್ತಿದ್ದ ಕಾರು ಆಯತಪ್ಪಿ ಗದ್ದೆಗೆ ಉರುಳಿದಪರಿಣಾಮ:ಓರ್ವ ಧಾರುಣ ಸಾವು..! ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಕಾರು ಉರುಳಿ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಚಿಕ್ಕಮಗಳೂರು ಮೂಲದ ವಿದ್ಯಾರ್ಥಿ ಮೋಹಿನ್ ಮೃತಪಟ್ಟಿದ್ದು ಕಾರಿನಲ್ಲಿದ್ದ ಇನ್ನುಳಿದ ಆರು ಮಂದಿಗೆ ಗಾಯ ವಾಗಿದೆ. ಅಪಘಾತದಲ್ಲಿ ರಿಹಾನ್, ಸತ್ಯಪಾಲ್, ಪೂರ್ಣ, ಶ್ರೇಯಸ್ ಹಾಗೂ ರಘು ಎಂಬ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಮೂಡಿಗೆರೆಯಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಎಂ ಇ  ಎಸ್‌ ಕಾಲೇಜಿನ ವಿದ್ಯಾರ್ಥಿಗಳು ಕ್ರಿಕೆಟ್ ಆಡಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.  ಚಿಕ್ಕಮಗಳೂರು ತಾಲೂಕಿನ ಮೂಕ್ತಿಹಳ್ಳಿ ಸಮೀಪ ಕೊಟ್ಟಿಗೆಹಾರದಿಂದ ಚಿಕ್ಕಮಗಳೂರಿಗೆ ಬರುವಾಗ ಘಟ‌ನೆ ನಡೆದಿದೆ. ಸ್ನೇಹಿತರೊಂದಿಗೆ ಕಾರಿನಲ್ಲಿ 7 ಮಂದಿ ಕೊಟ್ಟಿಗೆಹಾರ ಪ್ರವಾಸಕ್ಕೆ ತೆರಳಿದ್ದರು. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಭೀಕರ ಅಪಘಾತಕ್ಕೂ ಮುನ್ನ ಆ 10 ಸೆಕೆಂಡುಗಳ ಕಾಲ ಏನಾಯ್ತು? ಅಪಘಾತಕ್ಕೆ ಅದೇ ಕಾರಣ..!

Image
ಭೀಕರ ಅಪಘಾತಕ್ಕೂ ಮುನ್ನ ಆ 10 ಸೆಕೆಂಡುಗಳ ಕಾಲ ಏನಾಯ್ತು? ಅಪಘಾತಕ್ಕೆ ಅದೇ ಕಾರಣ..! ಚಿತ್ರದುರ್ಗ : ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಆ ಬಸ್‌ನಲ್ಲಿದ್ದವರಿಗೆ ಅದು ಕೊನೆಯ ಪ್ರಯಾಣ ಆಗುತ್ತೆ ಅಂತ ಯಾರೂ ಅನ್ಕೊಂಡಿರಲಿಲ್ಲ. 'ಸೀ ಬರ್ಡ್' (Sea Bird) ಕಂಪನಿಯ ಸ್ಲೀಪರ್ ಕೋಚ್ ಬಸ್ ರಾತ್ರಿ 12 ಗಂಟೆಗೆ ಬೆಂಗಳೂರು ಬಿಟ್ಟಿತ್ತು. ಎಲ್ಲರೂ ಆರಾಮಾಗಿ ನಿದ್ದೆಗೆ ಜಾರಿದ್ರು. ಆದ್ರೆ ಚಿತ್ರದುರ್ಗದ ಹತ್ತಿರ ಬರ್ತಿದ್ದಂಗೆ ವಿಧಿಯಾಟವೇ ಬದಲಾಗಿತ್ತು. ರಾತ್ರಿ 2:15ರ ಸುಮಾರಿಗೆ ಸಂಭವಿಸಿದ ಭೀಕರ 'ಅಪಘಾತ' (Accident) ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕೇವಲ ಹತ್ತೇ ಹತ್ತು ಸೆಕೆಂಡ್‌ನಲ್ಲಿ ಬಸ್ ಪೂರ್ತಿ 'ಫೈರ್' (Fire) ಆಗಿ, ನಿದ್ದೆಯಲ್ಲಿದ್ದವರು ಚಿರನಿದ್ರೆಗೆ ಜಾರಿದ್ದಾರೆ. ಹತ್ತೇ ಹತ್ತು ಸೆಕೆಂಡ್‌ನಲ್ಲಿ ಮುಗೀತು ಕಥೆ! ಈ ಘೋರ ದುರಂತ ನಡೆದಿದ್ದು ಕೇವಲ 10 ಸೆಕೆಂಡುಗಳಲ್ಲಿ! ವಿರುದ್ಧ ದಿಕ್ಕಿನಿಂದ ಬಂದ ಕಂಟೈನರ್ ಲಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದು, ರಸ್ತೆ ದಾಟಿ ಬಂದು ಬಸ್‌ಗೆ ಅಪ್ಪಳಿಸಿದೆ. ಕಣ್ಣು ಮುಚ್ಚಿ ತೆಗೆಯೋದ್ರೊಳಗೆ ಲಾರಿಯಿಂದ ಹಬ್ಬಿದ ಬೆಂಕಿ ಬಸ್‌ ಅನ್ನೂ ಆವರಿಸಿಕೊಂಡಿದೆ. ಪ್ರಯಾಣಿಕರು ಎಚ್ಚರಗೊಂಡು ಏನಾಗ್ತಿದೆ ಅಂತ ನೋಡೋ ಅಷ್ಟರಲ್ಲೇ ಬಸ್ ಅಗ್ನಿಗೋಳವಾಗಿತ್ತು. ಆ 10 ಸೆಕೆಂಡ್ ಯಮಪಾಶವಾಗಿ ಪರಿಣಮಿಸಿತ್ತು. ಡೀಸೆಲ್ ಟ್ಯಾಂಕ್‌ಗೆ ಗು...

ಭೀಕರ ರಸ್ತೆ ಅಪಘಾತ : ಮಗು ಸೇರಿ 5ಜನರ ದುರ್ಮರಣ..!

Image
ಭೀಕರ ರಸ್ತೆ ಅಪಘಾತ : ಮಗು ಸೇರಿ 5ಜನರ ದುರ್ಮರಣ..! ಚಿತ್ರದುರ್ಗದ: ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್‌ನಲ್ಲಿ ಗುರುವಾರ ಮಧ್ಯರಾತ್ರಿ ಸುಮಾರು 2:15am ಗೆ  ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ ಮಗು ಸೇರಿ 5 ಜನ ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದು ಪರಿಣಾಮ ಖಾಸಗಿ ಬಸ್ಸೆಂದು ಹೊತ್ತಿ ಉರಿದಿದೆ. ಖಾಸಗಿ ಸ್ವೀಪ‌ರ್ ಕೋಚ್ "ಸೀ ಬರ್ಡ್"  ಬಸ್‌ನಲ್ಲಿದ್ದ " ಮಗು ಹಾಗೂ ಲಾರಿ ಚಾಲಕ  ಸೇರಿ 5 ಸಜೀವ ದಹನ " ವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿತ್ರದುರ್ಗ ಬಸ್‌ ದುರಂತ: ಅಪಘಾತಗೊಂಡ ಬಸ್‌ನಲ್ಲಿದ್ದ ಪ್ರಯಾಣಿಕರ ಲಿಸ್ಟ್ ಚಿತ್ರದುರ್ಗದ ಗೊರ್ಲತ್ತು ಬಳಿ ಸೀಬರ್ಡ್ ಬಸ್ ಮತ್ತು ಲಾರಿ ಡಿಕ್ಕಿಯಾಗಿ ಮಗು ಹಾಗೂ ಲಾರಿ ಚಾಲಕ ಸೇರಿ  5ಮಂದಿ ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ 15 ಮಹಿಳೆಯರು ಹಾಗೂ 14 ಪುರುಷರು ಇದ್ದರು ಎನ್ನಲಾಗಿದೆ. ಮಂಜುನಾಥ್‌, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತಿಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್ ಕುಮಾ‌ರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್, ಹೆಚ್.ಕಿರಣ್ ಪಾಲ್, ಎಂ.ಕೀರ್ತನ್ ಎಂಬ ಹೆಸರುಗಳು ...

ರಿಮ್ಸ್’ ಆಸ್ಪತ್ರೆ ನರ್ಸಿಂಗ್ ಅಧಿಕಾರಿ ಅನುಮಾನಾಸ್ಪದ ಸಾವು : ರೋಡ್ ರೋಲರ್ ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.!

Image
`ರಿಮ್ಸ್’ ಆಸ್ಪತ್ರೆ ನರ್ಸಿಂಗ್ ಅಧಿಕಾರಿ ಅನುಮಾನಾಸ್ಪದ ಸಾವು : ರೋಡ್ ರೋಲರ್ ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.! ರಾಯಚೂರು : ರಾಯಚೂರಿನಲ್ಲಿ ರೋಡ್ ರೋಲರ್ ಗೆ ನೇಣು ಬಿಗಿದುಕೊಡು ರಿಮ್ಸ್ ಆಸ್ಪತ್ರೆ ನರ್ಸಿಂಗ್ ಅಧಿಕಾರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂಗೂರಿನ ಹಟ್ಟಿ ಪಟ್ಟಣದಲ್ಲಿ 32 ವರ್ಷದ ಜ್ಯೋತಿ ರೋಡ್ ರೋಲರ್ ಗೆ ನೇಣುಬಿಗಿದುಕೊಂಡ ಶವ ಪತ್ತೆಯಾಗಿದೆ. ಹಟ್ಟಿ-ಪಾಮನಕಲ್ಲೂರು ಗ್ರಾಮದ ರಸ್ತೆ ಕಾಮಗಾರಿ ಬಳಿ ಡಿ.22 ರಂದು ಶವ ಪತ್ತೆಯಾಗಿದೆ. ಜ್ಞಾನಮೂರ್ತಿ ಎಂಬುವರನ್ನು ಜ್ಯೋತಿ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕೆಲದಿನಗಳಿಂದ ಜ್ಯೋತಿಯನ್ನು ಜ್ಞಾನಮೂರ್ತಿ ಅವಾಯ್ಡ್ ಮಾಡಿದ್ದ. ಇದರಿಂದ ಮನನೊಂದು ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿರುಗುಪ್ಪ ಬಳಿ ಕಾರು ಪಲ್ಟಿಯಾಗಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು..!

Image
ಸಿರುಗುಪ್ಪ ಬಳಿ ಕಾರು ಪಲ್ಟಿಯಾಗಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು..! ತಮಿಳುನಾಡಿನ ದೇಗುಲಕ್ಕೆ ಹೋಗಿ ಬರುತ್ತಿದ್ದ ಒಂದೇ ಕುಟುಂಬದ ಮೂವರು ಸಾವು ತಮಿಳುನಾಡಿನ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ಒಂದೇ ಕುಟುಂಬದ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣ ಏನಿರಬಹುದೆಂಬ ತನಿಖೆ ನಡೆಯುತ್ತಿದೆ. ಬಳ್ಳಾರಿ, ಡಿಸೆಂಬರ್ 24: ಬಳ್ಳಾರಿ ( Ballari) ಜಿಲ್ಲೆ ಸಿರುಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್‌ಎಚ್-150)ಯಲ್ಲಿ ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಸೇರಿದಂತೆ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನು ತಕ್ಷಣ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಒಂದೇ...

"ಶೃಂಗೇರಿ ಪಟ್ಟಣದ ಸಂತೆಮಾರ್ಕೆಟ್ ಆಟೋ ನಿಲ್ದಾಣ ಉದ್ಘಾಟನೆ..!"

Image
"ಶೃಂಗೇರಿ ಪಟ್ಟಣದ ಸಂತೆಮಾರ್ಕೆಟ್ ಆಟೋ ನಿಲ್ದಾಣ ಉದ್ಘಾಟನೆ..!" ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಶಾಸಕರಾದ ಹಾಗೂ ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷರು ಆದ ಟಿ .ಡಿ ರಾಜೇಗೌಡರ "ಅಮೃತ್ ನಗರೋತ್ಥಾನ ಯೋಜನೆ " ಯಲ್ಲಿ ಶೃಂಗೇರಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಶಾರದ ನಗರ ಆಟೋ ನಿಲ್ದಾಣ ಕಾಮಗಾರಿಗಾಗಿ 6 ಲಕ್ಷ ಅನುದಾನವನ್ನು ನೀಡಿ ಆಟೋ ನಿಲ್ದಾಣವನ್ನು ನಿರ್ಮಿಸಿ ಈ ದಿನ ಉದ್ಘಾಟಿಸಲಾಯಿತು.           ಈ ಸಂದರ್ಭದಲ್ಲಿ ಸ್ಥಳೀಯ ಅಧಿಕಾರಿಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಲ್ಲಾ ಘಟಕದ ಅಧ್ಯಕ್ಷರು ಹಿರಿಯ ಮತ್ತು ಕಿರಿಯ ಕಾರ್ಯಕರ್ತರು ಹಾಗೂ ಆಟೋಚಾಲಕರು,ಸ್ಥಳೀಯರು,ಘಟಕದ ಸದಸ್ಯರು ಗಳು ಉಪಸ್ಥಿತರಿದ್ದರು.

ಪತ್ನಿಯ ಮನೆಗೆ ಬಂದಾಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ..!

Image
ಪತ್ನಿಯ ಮನೆಗೆ ಬಂದಾಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ..! ಧಾರವಾಡ : ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ವಿಠಲ ಕೊರಾಡೆ (29) ಎಂಬುವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾರೆ.           ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪದ ನಿವಾಸಿಯಾದ ವಿಠಲ , ತನ್ನ ಪತ್ನಿಯ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಸಂಧರ್ಭವನ್ನು ಅರಿತ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ಡಿವೋರ್ಸ್ ಕೊಟ್ಟ ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದ ಪಾಪಿಪತಿ.!

Image
ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ಡಿವೋರ್ಸ್ ಕೊಟ್ಟ ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದ ಪಾಪಿಪತಿ.! ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಗುಂಡು ಹಾರಿಸಿ ಪತ್ನಿಯನ್ನೇ ಪತಿಯೊಬ್ಬ ಹತ್ಯೆಗೈದ ಘಟನೆ ನಡೆದಿದೆ. ಬೆಂಗಳೂರಿನ ಬಸವೇಶ್ವರ ನಗರದ ವೆಸ್ಟಿನ್ ಹೋಟೆಲ್ ಬಳಿಯಲ್ಲಿ ಈ ದುಷ್ಕೃತ್ಯವನ್ನು ನಡೆಸಲಾಗಿದೆ. ಏಕಾಏಕಿ ಗನ್ ತೆಗೆದು ಪತ್ನಿ ಮೇಲೆ ಪತಿ ಫೈರಿಂಗ್ ಮಾಡಿದ್ದಾನೆ. ನಡು ರಸ್ತೆಯಲ್ಲೇ ಗುಂಡು ಹಾರಿಸಿ ಪತ್ನಿಯನ್ನು ಬಾಲಮುರುಗನ್ ಎಂಬಾತ ಹತ್ಯೆಗೈದಿದ್ದಾನೆ. ಅಂದಹಾಗೇ ಕೋರ್ಟ್ ನಲ್ಲಿ ದಂಪತಿಗಳ ವಿವಾಹ ವಿಚ್ಚೇಧನ ಅರ್ಜಿ ವಿಚಾರಣೆ ನಡೆಯುತ್ತಿದೆ. ಇಂದು ಇಬ್ಬರೂ ವಿಚಾರಣೆ ಮುಗಿಸಿಕೊಂಡು ಬಂದಿದ್ದರು. ಈ ವೇಳೆಯಲ್ಲಿ ಬಾಲಮುರುಗನ್ ಹಾಗೂ ಪತ್ನಿ ನಡುವೆ ಜಗಳ ಉಂಟಾಗಿದೆ. ಜಗಳ ತಾರಕಕ್ಕೇರಿದಂತ ಸಂದರ್ಭದಲ್ಲಿ ಬಾಲಮುರುಗನ್ ತನ್ನ ಬಳಿಯಿದ್ದಂತ ಗನ್ ತೆಗೆದು ಪತ್ನಿಗೆ ಹೊಡೆದಿದ್ದಾರೆ. ಇದರಿಂದಾಗಿ ಬಾಲಮುರುಗನ್ ಪತ್ನಿ ತೀವ್ರ ರಕ್ತಸ್ತ್ರಾವದಿಂದ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಾಗಡಿರೋಡ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅತಿಯಾಗಿ 'ಫಾಸ್ಟ್ ಫುಡ್' ತಿನ್ನುವವರೇ ಎಚ್ಚರ : ಗಂಭೀರ ಸೋಂಕಿನಿಂದ 11ನೇ ತರಗತಿ ವಿದ್ಯಾರ್ಥಿನಿ ಸಾವು.!

Image
  ಅತಿಯಾಗಿ 'ಫಾಸ್ಟ್ ಫುಡ್' ತಿನ್ನುವವರೇ ಎಚ್ಚರ : ಗಂಭೀರ ಸೋಂಕಿನಿಂದ 11ನೇ ತರಗತಿ ವಿದ್ಯಾರ್ಥಿನಿ ಸಾವು.!            (AI ಆಧಾರಿತ ಕಾಲ್ಪನಿಕ ಚಿತ್ರ) ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಿಂದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, 11ನೇ ತರಗತಿಯ ವಿದ್ಯಾರ್ಥಿನಿಯ ಸಾವಿಗೆ ಅತಿಯಾದ ಫಾಸ್ಟ್ ಫುಡ್ ಸೇವನೆಯೇ ಕಾರಣ ಎಂದು ಹೇಳಲಾಗಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ವೈದ್ಯರ ಪ್ರಕಾರ, ಜಂಕ್ ಫುಡ್ ದೀರ್ಘಕಾಲದವರೆಗೆ ಸೇವಿಸುವುದರಿಂದ ಆಕೆಯ ಕರುಳು ತೀವ್ರವಾಗಿ ಹಾನಿಗೊಳಗಾಗಿದೆ. ವರದಿಗಳ ಪ್ರಕಾರ , ವಿದ್ಯಾರ್ಥಿನಿ ಅಮ್ರೋಹಾದ ನಗರ್ ಕೊಟ್ವಾಲಿ ಪ್ರದೇಶದ ಅಫ್ಘಾನ್ ಮೊಹಲ್ಲಾ ನಿವಾಸಿಯಾಗಿದ್ದಳು. ಆಕೆಗೆ ಚೌಮಿನ್, ಮ್ಯಾಗಿ, ಪಿಜ್ಜಾ ಮತ್ತು ಬರ್ಗರ್‌'ಗಳಂತಹ ಫಾಸ್ಟ್ ಫುಡ್ ತಿನ್ನುವ ಅಭ್ಯಾಸವಿತ್ತು ಎಂದು ಕುಟುಂಬ ಸದಸ್ಯರು ಹೇಳುತ್ತಾರೆ. ಸ್ವಲ್ಪ ಸಮಯದಿಂದ ಆಕೆಯ ಆರೋಗ್ಯ ಹದಗೆಡುತ್ತಿತ್ತು, ನಂತರ ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ನಂತರ ಆಕೆಯ ಸ್ಥಿತಿ ಗಂಭೀರವಾದಾಗ ದೆಹಲಿಯ ಏಮ್ಸ್‌'ಗೆ ಉಲ್ಲೇಖಿಸಲಾಯಿತು. ವೈದ್ಯರ ಪ್ರಕಾರ, ಫಾಸ್ಟ್ ಫುಡ್'ನ ಅತಿಯಾದ ಸೇವನೆಯು ವಿದ್ಯಾರ್ಥಿಯಲ್ಲಿ ಗಂಭೀರ ಕರುಳಿನ ಸಮಸ್ಯೆಯನ್ನ ಉಂಟು ಮಾಡಿತು. ಕರುಳನ್ನ ಸ್ವಚ್ಛಗೊಳಿಸಲು ಶಸ್ತ್ರಚಿಕಿತ್ಸೆಯನ್ನ ಸಹ ನ...

ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳ ಜತೆ ಕದ್ದುಮುಚ್ಚಿ ಮದ್ವೆ: ಪ್ರಿಯಕರನ್ನ ಜೈಲಿಗಟ್ಟಿದ ಯುವತಿ..!

Image
ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳ ಜತೆ ಕದ್ದುಮುಚ್ಚಿ ಮದ್ವೆ: ಪ್ರಿಯಕರನ್ನ ಜೈಲಿಗಟ್ಟಿದ ಯುವತಿ..! ಚಿಕ್ಕಮಗಳೂರು, ಡಿಸೆಂಬರ್​​ 23: ಚಿಕ್ಕಮಗಳೂರು   ನಿವಾಸಿ   ಶರತ್ ಹಾಗೂ ಬೇಲೂರು ನಿವಾಸಿ ಅಶ್ವಿನಿ   ಅವರಿಬ್ಬರೂ 10 ವರ್ಷಗಳಿಂದ ಪ್ರೀತಿಸುತ್ತಿದ್ದರು . ಮದುವೆಯಾಗುವುದಾಗಿ ನಂಬಿಸಿದ್ದ ಯುವಕ ಬಳಿಕ ಪ್ರೇಯಸಿಗೆ ಕೈ ಕೊಟ್ಟು ಮತ್ತೊಬ್ಬಳ ಜೊತೆ ಮದುವೆಯಾಗಿದ್ದ. ಬೇರೆಯವರನ್ನ ಮದುವೆಯಾಗುತ್ತಿದ್ದಂತೆ ಇತ್ತ ಪ್ರೇಯಸಿ ಹುಡುಗನ ಮನೆ, ಕಲ್ಯಾಣ ಮಂಟಪಕ್ಕೆ ಹೋಗಿ ನನ್ನನ್ನು ಮದುವೆಯಾಗುವಂತೆ ಪಟ್ಟು ಹಿಡಿದು ರಂಪಾಟ ಮಾಡಿರುವಂತಹ ಘಟನೆ ಚಿಕ್ಕಮಗಳೂರಿನ " ದೊಡ್ಡೇಗೌಡ ಕಲ್ಯಾಣ ಮಂಟಪ" ದಲ್ಲಿ ನಡೆದಿದೆ. ಕಾನೂನು ಹೋರಾಟದ ಶಪತ ಮಾಡಿದ್ದ ನೊಂದ ಯುವತಿ, ಮೋಸ ಮಾಡಿದ್ದ ಲವರ್​​ನನ್ನು ಜೈಲಿಗೆ ಕಳುಹಿಸಿದ್ದಾಳೆ. ಚಿಕ್ಕಮಗಳೂರು ನಗರದ ಕಲ್ಯಾಣ ನಗರದ ನಿವಾಸಿ ಶರತ್​​​ ಮತ್ತು ಬೇಲೂರು ಮೂಲದ ಅಶ್ವಿನಿ ಇಬ್ಬರು ಕಳೆದ ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದರು. ನಿನ್ನನ್ನೇ ಮದುವೆ ಮಾಡಿಕೊಳ್ಳುತ್ತೇನೆ ಎಂದು ಶರತ್​ ಭರವಸೆ ಕೂಡ ಕೊಟ್ಟಿದ್ದ. ಅಷ್ಟೇ ಅಲ್ಲದೆ ಅಶ್ವಿನಿಗೆ ಬಂದಿದ್ದ ಐದಾರು ಒಳ್ಳೆಯ ಸಂಬಂಧಗಳನ್ನು ಸಹ ತಪ್ಪಿಸಿದ್ದ. ಆದರೆ ಅಶ್ವಿನಿಗೆ ಗೊತ್ತಾಗದಂತೆ ಗುಪ್ತವಾಗಿ ಬೇರೊಬ್ಬ ಯುವತಿಯ ಜೊತೆ ಹಸೆಮಣೆ ಏರಲು ಸಿದ್ಧನಾಗಿದ್ದ. ಇತ್ತ ಶರತ್ ನನಗೆ ಕೈಕೊಟ್ಟು ಬೇರೆಯವಳನ್ನ ಮದುವೆಯಾಗುತ್ತಾನೆ ಅನ್ನೋದು ಗೊತ್ತಾಗ್ತ...

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

Image
"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ " ಹರಿಹರಪುರ   :ಡಿ.23/2025 (ಕ.ಸಿ.ನ್ಯೂಸ್ ವರದಿ) ಚಿಕ್ಕಮಗಳೂರು  ಜಿಲ್ಲೆಯ ಕೊಪ್ಪ ತಾಲ್ಲೂಕು ಹರಿಹರಪುರ,  ಅಸಗೋಡು(ದಾಸನಕೊಡಿಗೆ)  ಎಂಬಲ್ಲಿ ನರಸಿಂಹಾಚಾರಿ ಎಂಬುವರ ಪುತ್ರಿ ದಿಶಾ ಯಾನಿ ನವ್ಯತಾ (17) ವರ್ಷ ವಯಸ್ಸಿನ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಮಾರು 12:30pm  ರ ಸುಮಾರಿಗೆ ನಡೆದಿದೆ.                     ಅಸಗೋಡು ನರಸಿಂಹಾಚಾರಿ ಎಂಬುವವರು ಇಬ್ಬರು ಪುತ್ರಿಯರನ್ನು ಹೊಂದಿದ್ದು ದಿಶಾ ಯಾನಿ ನವ್ಯತಾ ಹಿರಿಯ ಮಗಳಾಗಿದ್ದು ಈಕೆ ಹರಿಹರಪುರದ ಎ.ಆರ್.ಎಸ್.ಪಿ.ಯು . ಕಾಲೇಜಿನ ವಿದ್ಯಾರ್ಥಿನಿಯಾಗಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಹಾಗೂ ಉತ್ತಮ ಕ್ರೀಡಾಪಟು ಆಗಿದ್ದಳು ಎಂದು ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ.  ನರಸಿಂಹಾಚಾರ್ಯರ ಎರಡನೇ ಪುತ್ರಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.   ಘಟನೆ ವಿವರ :  ದಿನಾಂಕ 23 ಮಂಗಳವಾರ ಕಾಲೇಜಿಗೆ ಜ್ವರ ಇರುವ ಕಾರಣ ದಿಶಾ/ ನವ್ಯತಾ ರಜೆಯನ್ನು ಹಾಕಿದ್ದು ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ತಾಯಿ ಮನೆಯ ಹೊರಭಾಗದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಧ್ಯಾಹ್ನ 12:30ರ ಸುಮಾರಿಗೆ ನೇ...

ಚಾಕೋಲೇಟ್ ಆಸೆ ತೋರಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..!

Image
ಚಾಕೋಲೇಟ್ ಆಸೆ ತೋರಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..! ಹಾಸನ: ಜಿಲ್ಲೆಯಲ್ಲಿ ಖಾಸಗಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅದೇ ಶಾಲೆಯ ವಾಹನ ಚಾಲಕ ರಂಜಿತ್ 8 ತಿಂಗಳಿನಿಂದ ಚಾಕೋಲೆಟ್ ಆಸೆ ತೋರಿಸಿ ಪ್ರತಿನಿತ್ಯ ಲೈಂಗಿಕ ದೌರ್ಜನ್ಯ ನಡೆಸಿದ್ದು, ಇದರಿಂದ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.        ಆರೋಪಿ ರಂಜಿತ್‌ನನ್ನು ಪೊಲೀಸರು ಇಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹಾಸನ ಡಿ.ಹೆಚ್‌.ಒ ಅನಿಲ್‌ ರವರ ಪ್ರಕಾರ, ಬಾಲಕಿ ಮತ್ತು ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

"ಕೊಪ್ಪ ತಾಲ್ಲೂಕು ಹರಿಹರಪುರ ನೂತನ ನಾಡ ಕಚೇರಿಗೆ ಭೂಮಿಪೂಜೆ..!"

Image
"ಕೊಪ್ಪ ತಾಲ್ಲೂಕು ಹರಿಹರಪುರ ನೂತನ ನಾಡ ಕಚೇರಿಗೆ ಭೂಮಿಪೂಜೆ..!" ಕೊಪ್ಪ : 'ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಒಂದೊಂದು ಸಾಧನೆ ಮಾಡಿದೆ. ಕೃಷ್ಣಬೈರೇಗೌಡ ಅವರು ಕಂದಾಯ ಸಚಿವರಾಗಿ, ಕಟಾರಿಯಾ ಅವರು ಇಲಾಖೆ ಕಾರ್ಯದರ್ಶಿಯಾದ ಮೇಲೆ ಬಹುದೊಡ್ಡ ಬದಲಾವಣೆ ತಂದಿದ್ದಾರೆ. ಭೂಗಳ್ಳರನ್ನು ಮಟ್ಟ ಹಾಕುವ ಮೂಲಕ ನ್ಯಾಯಯುತವಾಗಿ ಹಕ್ಕುಪತ್ರ ಕೊಡಲು ಚಾಲನೆ ಕೊಟ್ಟಿದ್ದಾರೆ' ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು. ಹರಿಹರಪುರದಲ್ಲಿ ಭಾನುವಾರ ನಾಡ ಕಚೇರಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, 'ಬಯಲುಸೀಮೆ ಭಾಗದಲ್ಲಿ ಕಂದಾಯ ಗ್ರಾಮ, ಉಪ ಕಂದಾಯ ಗ್ರಾಮದ ಒಂದೊಂದು ವಿಧಾನಸಭೆ ಕ್ಷೇತ್ರದಲ್ಲಿ ನಾಲೈದು ಸಾವಿರ ಹಕ್ಕುಪತ್ರ ಕೊಟ್ಟಿದ್ದಾರೆ. ನಮ್ಮ ಭಾಗದಲ್ಲಿ ಅರಣ್ಯ ತೊಡಕು ಹೆಚ್ಚಿದೆ' ಎಂದರು. ಟಾಸ್ಕ್ ಫೋರ್ಸ್ ಸಮಿತಿ ರಚನೆ.. 'ಶೃಂಗೇರಿ ಕ್ಷೇತ್ರದಲ್ಲಿ ಸಂಪರ್ಕಿಸಿ ಟಾಸ್ಕ್ ಫೋರ್ಸ್ ಸಮಿತಿ ರಚಿಸುವಂತೆ ಮಾಡಿದ್ದೇನೆ. ಇದರಿಂದ ಡಿ.ಸಿ ಅರಣ್ಯ ಇಲಾಖೆಗೆ ಮೀಸಲು ಮಾಡಿದ ಜಾಗವನ್ನು ಕಂದಾಯ ಇಲಾಖೆಗೆ ಪಡೆದುಕೊಳ್ಳಲು ಸಮಿತಿ ಅವಶ್ಯಕತೆ ಇದೆ. ಅದೂ ಈಗ ಸರ್ವೆ ಕೆಲಸ ಶುರುವಾಗಿದೆ. ಹರಿಹರಪುರ ಪಟ್ಟಣದಲ್ಲಿ ಮುಂದಿನ ತಿಂಗಳು ರಸ್ತೆ ವಿಸ್ತರಣೆ ಬಗ್ಗೆ ಸಾರ್ವಜನಿಕರ ಸಭೆ ನಡೆಸಲಾಗುವುದು. ರಸ್ತೆ ವಿಸ್ತರಣೆಯಾದರೆ ವ್ಯಾಪಾರ, ವ್ಯವಹಾರ ವೃದ್ಧಿಯಾಗುತ್ತದೆ.ಇ...

" ಲಾರಿ ಹಾಗೂ ಕಾರು ನಡುವೆ ಡಿಕ್ಕಿ: ಯುವಕ ಗಂಭೀರ "

Image
" ಲಾರಿ ಹಾಗೂ ಕಾರು ನಡುವೆ ಡಿಕ್ಕಿ: ಯುವಕ ಗಂಭೀರ " ಸೊರಬ: ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಸೋಮವಾರ ಬೆಳಗಿನ ಜಾವ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.  ತೀರ್ಥಹಳ್ಳಿ ಎಳ್ಳಮಾಸ್ಸೆ ಜಾತ್ರೆ ಮುಗಿಸಿಕೊಂಡು ಹಿಂದಿರುಗುತ್ತಿದ್ದ ಮಾದಾಪುರ ಸಮೀಪದ ಲಕ್ಕುವಳ್ಳಿ ಗ್ರಾಮದ ಯುವಕರು ಪ್ರಯಾಣಿಸುತ್ತಿದ್ದ ಮಾರುತಿ ವ್ಯಾಗನರ್‌ ಕಾರು, ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಲಾರಿಯೊಂದಿಗೆ ವಿನಾಯಕ ವೃತ್ತದಲ್ಲಿ ಡಿಕ್ಕಿಯಾಗಿದೆ.