ಚಲಿಸುತ್ತಿದ್ದ ಕಾರು ಆಯತಪ್ಪಿ ಗದ್ದೆಗೆ ಉರುಳಿದಪರಿಣಾಮ:ಓರ್ವ ಧಾರುಣ ಸಾವು..!

ಚಲಿಸುತ್ತಿದ್ದ ಕಾರು ಆಯತಪ್ಪಿ ಗದ್ದೆಗೆ ಉರುಳಿದಪರಿಣಾಮ:ಓರ್ವ ಧಾರುಣ ಸಾವು..!
ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಕಾರು ಉರುಳಿ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ
ಚಿಕ್ಕಮಗಳೂರು ಮೂಲದ ವಿದ್ಯಾರ್ಥಿ ಮೋಹಿನ್ ಮೃತಪಟ್ಟಿದ್ದು ಕಾರಿನಲ್ಲಿದ್ದ ಇನ್ನುಳಿದ ಆರು ಮಂದಿಗೆ ಗಾಯ ವಾಗಿದೆ.
ಅಪಘಾತದಲ್ಲಿ ರಿಹಾನ್, ಸತ್ಯಪಾಲ್, ಪೂರ್ಣ, ಶ್ರೇಯಸ್ ಹಾಗೂ ರಘು ಎಂಬ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಮೂಡಿಗೆರೆಯಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಎಂ ಇ  ಎಸ್‌ ಕಾಲೇಜಿನ ವಿದ್ಯಾರ್ಥಿಗಳು ಕ್ರಿಕೆಟ್ ಆಡಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 

ಚಿಕ್ಕಮಗಳೂರು ತಾಲೂಕಿನ ಮೂಕ್ತಿಹಳ್ಳಿ ಸಮೀಪ ಕೊಟ್ಟಿಗೆಹಾರದಿಂದ ಚಿಕ್ಕಮಗಳೂರಿಗೆ ಬರುವಾಗ ಘಟ‌ನೆ ನಡೆದಿದೆ.
ಸ್ನೇಹಿತರೊಂದಿಗೆ ಕಾರಿನಲ್ಲಿ 7 ಮಂದಿ ಕೊಟ್ಟಿಗೆಹಾರ ಪ್ರವಾಸಕ್ಕೆ ತೆರಳಿದ್ದರು.
ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

Comments

Popular posts from this blog

ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ : 3 ಮಕ್ಕಳು ಸೇರಿ ಓರ್ವ ವೃದ್ದೆ ಸಾವು..!

"ದ್ವಿತೀಯ ಪಿಯುಸಿ ವಿದ್ಯಾರ್ಥಿನಿ " ನೇಣು ಬಿಗಿದು ಆತ್ಮಹತ್ಯೆ "

" ಶೃಂಗೇರಿಯಲ್ಲಿ ಭೀಕರ ಅಪಘಾತ "