Posts

Showing posts from February, 2026

ರೈತ ಹೋರಾಟಗಾರ ಮೇಲೆ ಪೊಲೀಸರ ಲಾಠಿಚಾರ್ಜ್- ಸೋಮವಾರ ಶೃಂಗೇರಿ ಬಂದ್..!

Image
ರೈತ ಹೋರಾಟಗಾರ ಮೇಲೆ ಪೊಲೀಸರ ಲಾಠಿಚಾರ್ಜ್- ಸೋಮವಾರ ಶೃಂಗೇರಿ ಬಂದ್..! ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಘಟನೆ ಹಾಗೂ ರೈತ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದನ್ನು ಖಂಡಿಸಿ ಮಲೆನಾಡು ಹಿತರಕ್ಷಣಾ ವೇದಿಕೆ ಸೋಮವಾರ ಶೃಂಗೇರಿ,ಕೊಪ್ಪ,ಎನ್‌.ಆ‌ರ್.ಪುರ ದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ. ಬಿಜೆಪಿ ಬೆಂಬಲ ಸೂಚಿಸಿದೆ. ಮಹಿಳೆಯ ಮೃತದೇಹ ಸಾಗಿಸುತ್ತಿದ್ದ ವಾಹನ ತಡೆದು ಪ್ರತಿಭಟಿಸಿದ ಗ್ರಾಮಸ್ಥರು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿದರು. ಶಾಸಕ ರಾಜೇಗೌಡ ಸ್ಥಳಕ್ಕೆ ಬಂದಾಗ ಪ್ರತಿಭಟನಾಕಾರರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.  ಮಾಜಿ ಸಚಿವ ಜೀವರಾಜ್ ಸೇರಿ 30ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲಿಯ ಶಾಲಾ ಕಾಲೇಜುಗಳಿಗೆ ರಜೆ ಇರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಕಾಡಾನೆ ದಾಳಿಗೆ ಮಹಿಳೆ ಬಲಿ: ಯಶಸ್ವಿ ಕಾರ್ಯಾಚರಣೆ ನಡೆಸಿ ಕಾಡಾನೆ ಸೆರೆ ಹಿಡಿದ ಅರಣ್ಯ ಇಲಾಖೆ..!

Image
ಕಾಡಾನೆ ದಾಳಿಗೆ ಮಹಿಳೆ ಬಲಿ: ಯಶಸ್ವಿ ಕಾರ್ಯಾಚರಣೆ ನಡೆಸಿ ಕಾಡಾನೆ ಸೆರೆ ಹಿಡಿದ ಅರಣ್ಯ ಇಲಾಖೆ..! ಚಿಕ್ಕಮಗಳೂರು: ಕಾಫಿನಾಡು ಚಿಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಬೆನ್ನಲ್ಲೇ ತ್ವರಿತವಾಗಿ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು, ಯಶಸ್ವಿ ಕಾರ್ಯಾಚರಣೆ ನಡೆಸಿ ನರಹಂತಕ ಕಾಡಾನೆಯನ್ನು ಸೆರೆಹಿಡಿದ್ದ ಘಟನೆ ಫೆ. 22ರ ರವಿವಾರ ಬೆಳಿಗೆ ನಡೆದಿದ್ದು, ಅದರ ವಿವರವಾದ ವರದಿ ಇಲ್ಲಿದೆ. 7 ಸಾಕಾನೆಗಳಿಂದ 2 ಗಂಟೆಗಳ ಸತತ ಕಾರ್ಯಾಚರಣೆ ಚಿಕ್ಕಮಗಳೂರು ತಾಲೂಕಿನ ಕೆರೆಮನೆ ಹಾಗೂ ಬೆರಣಗೋಡು ಬಳಿ ಈ ಕಾರ್ಯಾಚರಣೆ ನಡೆದಿದೆ. ಕಾಡಾನೆ ಮಹಿಳೆಯ ಮೇಲೆ ದಾಳಿ ನಡೆಸಿದ ಕೇವಲ ಅರ್ಧ ಗಂಟೆಯಲ್ಲೇ ಅರಣ್ಯ ವೈದ್ಯಾಧಿಕಾರಿಗಳಾದೆ ಡಾ. ರಮೇಶ್ ಹಾಗೂ ಡಾ. ಯಶಸ್ವಿ ಅವರ ತಂಡ ಕಾರ್ಯಾಚರಣೆಗಿಳಿದು, ಆನೆಗೆ ಯಶಸ್ವಿಯಾಗಿ ಚುಚ್ಚುಮದ್ದು . ಸುಮಾರು 70 ಅರಣ್ಯ ಸಿಬ್ಬಂದಿಗಳ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಭೀಮ, ಜ್ಯೂನಿಯರ್ ಅರ್ಜುನ, ಶ್ರೀಕಂಠ ಹಾಗೊ ಭೀಷ್ಮ ಸೇರಿದಂತೆ ಒಟ್ಟು 7 ಸಾಕಾನೆಗಳನ್ನು ಬಳಸಿಕೊಳ್ಳಲಾಗಿತ್ತು. ಚುಚ್ಚುಮದ್ದು ನೀಡಿದ್ದರೂ ಈ ಚುಚ್ಚುಮದ್ದು ನೀಡಿ ಒಂಟಿ ಸಲಗೆ ತೀವ್ರ ಪ್ರತಿರೋಧ ಒಡ್ಡಿತು. 4 ಸಾಕಾನೆಗಳು ಒಟ್ಟಾಗಿ ತಳ್ಳಿದರೂ ಅಲುಗಾಡದೆ ನಿಂತಿದ್ದ ಕಾಡಾನೆಯನ್ನು, ಸುಮಾರು 2 ಗಂಟೆಗಳ ಸತತ ಪ್ರಯತ್ನದ ಬಳಿಕ ಅಂತಿಮವಾಗಿ ಹಗ ಹಾಕಿ ಸೆರೆಹಿಡಿಯಲಾಯಿತು. ಸೆರೆಹಿಡಿದ ಈ ಕಾಡಾನೆಯನ...

ಕಾಡಾನೆ ಅಟ್ಟಹಾಸ: 4ದಿನದಲ್ಲಿ ಮತ್ತೊಂದು ಬಲಿ.!

Image
ಕಾಡಾನೆ ಅಟ್ಟಹಾಸ: 4ದಿನದಲ್ಲಿ ಮತ್ತೊಂದು ಬಲಿ.! ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಕಾಡಾನೆಗಳ ರೌದ್ರಾವತಾರ ಮುಂದುವರಿದಿದ್ದು, ಕೇವಲ ನಾಲ್ಕು ದಿನಗಳ ಅಂತರದಲ್ಲಿ ಆನೆ ದಾಳಿಗೆ ಮತ್ತೊಬ್ಬ ಮಹಿಳಾ ಕೂಲಿ ಕಾರ್ಮಿಕರು ಬಲಿಯಾಗಿದ್ದಾರೆ. ಭಾನುವಾರ ನಡೆದ ಈ ಘಟನೆಯಿಂದ ಸ್ಥಳೀಯರು ಆತಂಕಗೊಂಡಿದ್ದು, ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ವಿವರ: ಕೊಪ್ಪ ಅರಣ್ಯ ವಿಭಾಗದ ಹುಣಸೆಹಳ್ಳಿ ಸಮೀಪದ ನಾಗೇಶಗೌಡರ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಮೂಲದ ಬೋರಮ್ಮ ಎಂದು ಗುರುತಿಸಲಾಗಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ ಕಾಡಾನೆ, ಮಹಿಳೆಯನ್ನು ತುಳಿದು ಸಾಯಿಸಿದೆ. ನಾಲ್ಕು ದಿನಗಳಲ್ಲಿ ಇದು ಎರಡನೇ ಸಾವು ಇದೇ ತೋಟದಲ್ಲಿ ಕೇವಲ ನಾಲ್ಕು ದಿನಗಳ ಹಿಂದೆಯಷ್ಟೇ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಯಲ್ಲಪ್ಪ ಎಂಬುವವರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದರು. ಒಂದೇ ವಾರದಲ್ಲಿ ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡಿರುವುದು ತೋಟದ ಕಾರ್ಮಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಸ್ಥಗಿತಗೊಂಡಿರುವ ಕಾರ್ಯಾಚರಣೆ ಸರಣಿ ಸಾವುಗಳಿಂದ ಎಚ್ಚೆತ್ತಿದ್ದ ಅರಣ್ಯ ಇಲಾಖೆ, ಕಾಡಾನೆ ಸೆರೆಗೆ 7 ಕುಮ್ಮಿ ಆನೆಗಳನ್ನು ಸ್ಥಳಕ್ಕೆ ಕರೆತಂದಿತ್ತು. ಆದರೆ, ದಾಳಿ ಮಾಡುತ್ತಿರುವ ಕಾಡಾನೆಯು 'ಮದ' ಏರಿರುವುದರಿಂದ ಅತೀವ ಆಕ್ರಮಣಕಾರಿಯಾಗಿದೆ. ಈ ಹಿನ್ನೆಲ...

"ಶೃಂಗೇರಿ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾನಗರ ಉತ್ತಮ ಎಸ್ ಡಿ ಎಂ ಸಿ :ಕರ್ನಾಟಕ ಸರ್ಕಾರ ಶಿಕ್ಷಣ ಇಲಾಖೆ ಘೋಷಣೆ.

Image
"ಶೃಂಗೇರಿ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾನಗರ ಉತ್ತಮ ಎಸ್ ಡಿ ಎಂ ಸಿ :ಕರ್ನಾಟಕ ಸರ್ಕಾರ ಶಿಕ್ಷಣ ಇಲಾಖೆಘೋಷಣೆ.  ಕರ್ನಾಟಕ ಸರ್ಕಾರವು  ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ತಾಲ್ಲೂಕು ಪಂಚಾಯಿತಿ, ಶೃಂಗೇರಿ ಗ್ರಾಮ ಪಂಚಾಯಿತಿ, ವಿದ್ಯಾರಣ್ಯಪುರ ಶಾಲಾ ಶಿಕ್ಷಣ ಇಲಾಖೆ, ಶೃಂಗೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶೃಂಗೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ಶೃಂಗೇರಿ ಶೃಂಗೇರಿ : ಪುಷ್ಟಿ ಯೋಜನೆಯಡಿಯಲ್ಲಿ 2024- 2025 ನೇ ಸಾಲಿನ ಕರ್ನಾಟಕ ಸರ್ಕಾರ ಶಿಕ್ಷಣ ಇಲಾಖೆ ಘೋಷಣೆ ಮಾಡಿರುವ "ಉತ್ತಮ ಎಸ್.ಡಿ.ಎಂ.ಸಿ" ಆಯ್ಕೆಯಲ್ಲಿ ಶೃಂಗೇರಿ ತಾಲ್ಲೂಕಿನ ಉತ್ತಮ ಹಿರಿಯ ಪ್ರಾಥಮಿಕ ಶಾಲೆಯಾಗಿ "ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ವಿದ್ಯಾನಗರ" ಆಯ್ಕೆಯಾಗಿದೆ. ಮುಖ್ಯ ಅಂಶಗಳು: ಪ್ರಶಸ್ತಿ: 2024-25ನೇ ಸಾಲಿನ ಉತ್ತಮ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಪ್ರಶಸ್ತಿ. ಆಯ್ಕೆಯಾದ ಶಾಲೆ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (GHPS), ವಿದ್ಯಾನಗರ. ಯೋಜನೆ: ಸರ್ಕಾರದ ' ಪುಷ್ಟಿ' ಯೋಜನೆಯ ಅಡಿ ಯಲ್ಲಿ ಈ ಗೌರವ ನೀಡಲಾಗಿದೆ.

"ಗ್ರಾಂಡ್ ಓಪನಿಂಗ್ ಎಸ್ ಎಲ್ ವಿ ಫರ್ನಿಚರ್ಸ್ ಅಂಡ್ ಹೋಂ ಅಪ್ಲಿಯನ್ಸಸ್,"Launching win-win Lucky Dip, Opp.Ganapathi Temple, Sigadalu, Addada post Koppa Taluk.

Image
"ಗ್ರಾಂಡ್ ಓಪನಿಂಗ್ ಎಸ್ ಎಲ್ ವಿ ಫರ್ನಿಚರ್ಸ್ ಅಂಡ್ ಹೋಂ ಅಪ್ಲಿಯನ್ಸಸ್," Launching win-win Lucky Dip,  Opp.Ganapathi Temple,Sigadalu,Addada post Koppa Taluk.

ದೊಡ್ಡಬಳ್ಳಾಪುರ, ಕಲಬುರಗಿಯಲ್ಲಿ ಘೋರ ದುರಂತ: ವಿದ್ಯಾರ್ಥಿ ವಿದ್ಯಾರ್ಥಿನಿ ಇಬ್ಬರ ನಿಗೂಢ ಸಾವು..!

Image
ದೊಡ್ಡಬಳ್ಳಾಪುರ, ಕಲಬುರಗಿಯಲ್ಲಿ ಘೋರ ದುರಂತ: ವಿದ್ಯಾರ್ಥಿ ವಿದ್ಯಾರ್ಥಿನಿ ಇಬ್ಬರ ನಿಗೂಢ ಸಾವು..! ದೊಡ್ಡಬಳ್ಳಾಪುರ : ತಾಲ್ಲೂಕಿನ "ಪ್ರತಿಷ್ಠಿತ ಗೀತಂ ಯೂನಿವರ್ಸಿಟಿ" ಯಲ್ಲಿ ಕರುಣಾಜನಕ ಘಟನೆಯೊಂದು ನಡೆದಿದ್ದು, ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ನಯನ (20) ಎಂದು ಗುರುತಿಸಲಾಗಿದೆ. ಈಕೆ ಗೀತಂ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಹಾಸ್ಟೆಲ್‌ನಲ್ಲಿ ಲಿಫ್ಟ್‌ ಅಳವಡಿಕೆಗಾಗಿ ಬಿಟ್ಟಿದ್ದ ಖಾಲಿ ಜಾಗದ ಮೂಲಕ ಬಿದ್ದ ಪರಿಣಾಮ ಈ ಸಾವು ಸಂಭವಿಸಿದೆ ಎನ್ನಲಾಗಿದೆ. ಘಟನೆಯ ವಿವರ: ಪ್ರಾಥಮಿಕ ವರದಿಗಳ ಪ್ರಕಾರ, ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಆದರೆ, ನಯನ ಅವರ ಈ ನಿರ್ಧಾರಕ್ಕೆ ನಿಖರವಾದ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಯೂನಿವರ್ಸಿಟಿ ಆವರಣದಲ್ಲಿ ಈಗ ಶೋಕದ ವಾತಾವರಣ ನಿರ್ಮಾಣವಾಗಿದೆ. "ಕಲಬುರ...

ಊಟಕ್ಕೆ ಹೋಗಲು ರಸ್ತೆ ದಾಟುವಾಗ ಭೀಕರ ಅಪಘಾತ: ಬೈಕ್​ ಡಿಕ್ಕಿ, ಯುವತಿ ಬಲಿ..!

Image
ಊಟಕ್ಕೆ ಹೋಗಲು ರಸ್ತೆ ದಾಟುವಾಗ ಭೀಕರ ಅಪಘಾತ: ಬೈಕ್​ ಡಿಕ್ಕಿ, ಯುವತಿ ಬಲಿ..! ಬೆಂಗಳೂರು: ಊಟಕ್ಕೆ ಹೋಗಲು ರಸ್ತೆ ದಾಟುತ್ತಿದ್ದಾಗ ಭೀಕರ ಅಪಘಾತ (Deadly Accident) ಸಂಭವಿಸಿದೆ. ರಾಜ್ ಕುಮಾರ್ ರಸ್ತೆಯ ಹೆಚ್‌ಡಿಎಫ್‌ಸಿ ಬ್ಯಾಂಕ್ ಬಳಿ ಈ ದುರ್ಘಟನೆ ನಡೆದಿದೆ. ಊಟಕ್ಕೆ ಹೋಗಲು ರಸ್ತೆ ದಾಟುತ್ತಿದ್ದ 27 ವರ್ಷದ ಯುವತಿ ಯೋಗೇಶ್ವರಿ ಅವರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ (Bike Touch) ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಯೋಗೇಶ್ವರಿ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಘಟನೆ ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿದೆ. ಯೋಗೇಶ್ವರಿ ಕೆಂಪೇಗೌಡ ಲೇಔಟ್ (ಲಗ್ಗೆರೆ ಬಳಿ) ನಿವಾಸಿಯಾಗಿದ್ದರು. ಊಟಕ್ಕೆ ಹೋಗುವ ಸಂದರ್ಭದಲ್ಲಿ ರಸ್ತೆ ದಾಟುತ್ತಿದ್ದಾಗ ರಭಸವಾಗಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ರಸ್ತೆ ದಾಟುತ್ತಿದ್ದಾಗ ಬೈಕ್​ ಡಿಕ್ಕಿ: ಯುವತಿ ಬಲಿ ಇತ್ತ ಯುವತಿ ಕೂಡ ವೇಗವಾಗಿ ಬಂದು ರಸ್ತೆ ದಾಟುತ್ತಿದ್ದಿದ್ದು ಕಾಣುತ್ತದೆ. ಅತ್ತ ಬೈಕ್‌ ಸವಾರ ಕೂಡ ವೇಗವಾಗಿ ಬರುತ್ತಿದ್ದು, ಈ ಸ್ಪೀಡ್ ಹೆಚ್ಚಾಗಿದ್ದರಿಂದ ಯುವತಿ ರಸ್ತೆ ಮೇಲೆ ಹಾರಿ ಬಿದ್ದಿದ್ದಾಳೆ. ತಕ್ಷಣವೇ ಸ್ಥಳೀಯರು ಆಂಬ್ಯುಲೆನ್ಸ್ ಕರೆಸಿ ಯುವತಿಯನ್ನು ಸುಗುಣ ಆಸ್ಪತ್ರೆಗೆ ದಾಖಲಿಸಿದರು. ಆದರೆ ಗಾಯಗಳು ತೀವ್ರವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗಲಿಲ್ಲ. ನ...

" ತಾಯಿ ಆಡಿದ ಬುದ್ದಿಮಾತು : ಮಗಳು ಆತ್ಮಹತ್ಯೆಗೆ ಶರಣು "

Image
" ತಾಯಿ ಆಡಿದ ಬುದ್ದಿಮಾತು : ಮಗಳು ಆತ್ಮಹತ್ಯೆಗೆ ಶರಣು "   ಚಿಕ್ಕಮಗಳೂರು :"  ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ"   ಟಿವಿ ನೋಡುವುದು ಕಡಿಮೆ ಮಾಡು ಎಂದು ತಾಯಿ ಬೈದಿದ್ದಕ್ಕೆ ಬಾಲಕಿಯೊಬ್ಬಳು ವೇಲ್ ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಬಸರಿಕಟ್ಟೆ ಯಲ್ಲಿ ಇಂದು ನಡೆದಿದೆ.        ಪ್ರತಿ ದಿನ ಟಿವಿ ನೋಡುತ್ತ ಬಾಲಕಿ ಸುಪ್ರಿತಾ ಊಟ ಮಾಡುತ್ತಿದ್ದಳು. ಇಂದು ಕೂಡ ಹಾಗೆಯೇ ಊಟ ಮಾಡುತ್ತಿದ್ದಾಗ ಬಾಲಕಿ ಸುಪ್ರಿತಾ ಕೈಯಿಂದ ತಟ್ಟೆ ಕೆಳಗೆ ಬಿದ್ದಿತ್ತು. ಇದರಿಂದ ಕೋಪಗೊಂಡಂತ ಸುಪ್ರಿತಾ ತಾಯಿ ಟಿವಿ ನೋಡುವುದನ್ನು ಕಡಿಮೆ ಮಾಡು ಎಂಬುದಾಗಿ ಬುದ್ಧಿ ಹೇಳಿದ್ದರು. ಸುಪ್ರಿತಾ ತಾಯಿ ಕೆಲಸಕ್ಕೆ ಹೋದಂತ ಸಂದರ್ಭದಲ್ಲಿ ಮನನೊಂದು ವೇಲ್ ನಿಂದ ಮನೆಯ ಮೇಲ್ಪಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಬಾಲಕಿ ತಾಯಿ ಸರೋಜ ಗಂಡನಿಂದ ಬೇರೆಯಾಗಿ ಬೇರೆ ವಾಸವಾಗಿದ್ದರು. ಹಿರಿಯ ಮಗಳು ತಾಯಿ ಜೊತೆ ಇದ್ದರೆ, ಕಿರಿಯ ಮಗಳು ತಂದೆ ಜೊತೆ ಇದ್ದಳು ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದ್ದು.ಈಕುರಿತು     ಜಯಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

17ನೇ ವರ್ಷದ ವರ್ಧಂತಿ ಮಹೋತ್ಸವ ಹಾಗೂ ಸಿರಿ ಸಿಂಗಾರ ಕೋಲ 2026 ಏಪ್ರಿಲ್ 20 ಹಾಗೂ 21 " ಶ್ರೀ ಕ್ಷೇತ್ರ ಜಯಪುರ " ಗುಡ್ಡೇ ಕೊಪ್ಪ ತೀರ್ಥಹಳ್ಳಿ ತಾಲ್ಲೂಕು.

Image
"17ನೇ ವರ್ಷದ  ವರ್ಧಂತಿ ಮಹೋತ್ಸವ ಹಾಗೂ ಸಿರಿ ಸಿಂಗಾರ ಕೋಲ "       2026 ಏಪ್ರಿಲ್ 20 ಹಾಗೂ 21 " ಶ್ರೀ ಕ್ಷೇತ್ರ ಜಯಪುರ " ಗುಡ್ಡೇ ಕೊಪ್ಪ ತೀರ್ಥಹಳ್ಳಿ ತಾಲ್ಲೂಕು.  

ಅಮೆರಿಕದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ: ಆತಂಕದಲ್ಲಿ ಪೋಷಕರು..!

Image
ಅಮೆರಿಕದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ: ಆತಂಕದಲ್ಲಿ ಪೋಷಕರು..! ಬೆಂಗಳೂರು : ಬೆಂಗಳೂರು ಮೂಲದ ವಿದ್ಯಾರ್ಥಿಯೊಬ್ಬರು ಅಮೆರಿಕಾದಲ್ಲಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24 ವರ್ಷದ ಸಾಕೇತ್ ಶ್ರೀನಿವಾಸಯ್ಯ ಎಂಬ ವಿದ್ಯಾರ್ಥಿ ಕ್ಯಾಲಿಫೋರ್ನಿಯಾದ University of California, Berkeley ನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಫೆಬ್ರವರಿ 12ರಂದು ಲೇಕ್ ಅಂಜಾ ಬಳಿ ಕೊನೆಯದಾಗಿ ಕಾಣಿಸಿಕೊಂಡ ಬಳಿಕ ಅವರ ಸುಳಿವು ಸಿಕ್ಕಿಲ್ಲ. ಕೆರೆ ದಡದಲ್ಲಿ ಅವರ ಬಟ್ಟೆ, ಪಾದರಕ್ಷೆ ಹಾಗೂ ವೈಯಕ್ತಿಕ ವಸ್ತುಗಳು ಪತ್ತೆಯಾಗಿದ್ದು, ಅವರು ಈಜಲು ನೀರಿಗೆ ಇಳಿದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ಪೊಲೀಸರು, ಪಾರ್ಕ್ ಸಿಬ್ಬಂದಿ ಹಾಗೂ ನುರಿತ ಡೈವರ್‌ಗಳು ಸೇರಿ ಕೆರೆಯಲ್ಲಿ ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ. ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕವೂ ಪರಿಶೀಲನೆ ಮುಂದುವರಿದಿದೆ. ಇದಕ್ಕೆ ಮಧ್ಯಪ್ರವೇಶಿಸಿರುವ Consulate General of India, San Francisco ಅಧಿಕಾರಿಗಳು ಸ್ಥಳೀಯ ಪೊಲೀಸ್ ಮತ್ತು ವಿಶ್ವವಿದ್ಯಾಲಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಕುಟುಂಬಕ್ಕೆ ಅಗತ್ಯ ನೆರವು ನೀಡುತ್ತಿದ್ದಾರೆ. ಮಗನ ನಾಪತ್ತೆ ಸುದ್ದಿ ತಿಳಿದು ಕುಟುಂಬಸ್ಥರು ದುಃಖದಲ್ಲಿದ್ದು, ಶೀಘ್ರವೇ ಸುರಕ್ಷಿತವಾಗಿ ಪತ್ತೆಯಾಗಲೆಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

"ಕರ್ನಾಟಕದ ಸಂಸ್ಕೃತಿ ಹಾಗೂ ಇತಿಹಾಸದಲ್ಲಿ ಕ್ರೈಸ್ತ ಕನ್ನಡಿಗರ ಪಾತ್ರ"

Image
"ಕರ್ನಾಟಕದ ಸಂಸ್ಕೃತಿ ಹಾಗೂ ಇತಿಹಾಸದಲ್ಲಿ ಕ್ರೈಸ್ತ ಕನ್ನಡಿಗರ ಪಾತ್ರ" ಬೆಂಗಳೂರು : ಕರ್ನಾಟಕದ ಸಂಸ್ಕೃತಿ ಮತ್ತು ಇತಿಹಾಸದಲ್ಲಿ ಕನ್ನಡ ಕ್ರಿಸ್ತರು (Kannada Christians) ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ಇವರ ಹಿನ್ನೆಲೆ, ಸಾಹಿತ್ಯಿಕ ಕೊಡುಗೆ ಮತ್ತು ಪ್ರಸ್ತುತ ಸ್ಥಿತಿಗತಿಯ ಸಂಕ್ಷಿಪ್ತ ಮಾಹಿತಿ ಇಲ್ಲಿದೆ: 1. ಜನಸಂಖ್ಯೆ ಮತ್ತು ಹರಡುವಿಕೆ ಜನಸಂಖ್ಯೆ: 2011ರ ಜನಗಣತಿಯ ಪ್ರಕಾರ, ಕರ್ನಾಟಕದಲ್ಲಿ ಕ್ರೈಸ್ತ ಧರ್ಮದವರು ಒಟ್ಟು ಜನಸಂಖ್ಯೆಯ ಸುಮಾರು 1.87% ರಷ್ಟಿದ್ದಾರೆ. ವ್ಯಾಪ್ತಿ: ಇವರಲ್ಲಿ ಹೆಚ್ಚಿನವರು ಬೆಂಗಳೂರು ನಗರ, ಮಂಗಳೂರು (ದಕ್ಷಿಣ ಕನ್ನಡ), ಉಡುಪಿ, ಕೊಡಗು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಾಸವಾಗಿದ್ದಾರೆ. ವಿವಿಧ ಪಂಗಡಗಳು: ಕ್ಯಾಥೋಲಿಕ್ ಮತ್ತು ಪ್ರೊಟೆಸ್ಟೆಂಟ್ ಪಂಗಡಗಳು ಪ್ರಮುಖವಾಗಿದ್ದು, ಇದರಲ್ಲಿ ಕೊಂಕಣಿ ಭಾಷಿಗ ಕ್ರೈಸ್ತರು ಮತ್ತು ಕನ್ನಡವನ್ನೇ ಮಾತೃಭಾಷೆಯಾಗಿ ಹೊಂದಿರುವ ಕ್ರೈಸ್ತರು ಸೇರಿದ್ದಾರೆ.  2. ಕನ್ನಡ ಸಾಹಿತ್ಯಕ್ಕೆ ಕೊಡುಗೆಗಳು ಕನ್ನಡ ಭಾಷೆ ಮತ್ತು ಸಾಹಿತ್ಯದ ಆಧುನಿಕೀಕರಣದಲ್ಲಿ ಕ್ರೈಸ್ತ ಮಿಷನರಿಗಳ ಸೇವೆ ಅಪಾರವಾದುದು:  ಫರ್ಡಿನೆಂಡ್ ಕಿಟೆಲ್ (Ferdinand Kittel): ಮೊಟ್ಟಮೊದಲ ಬೃಹತ್ ಕನ್ನಡ-ಇಂಗ್ಲಿಷ್ ನಿಘಂಟನ್ನು (Kittel Dictionary) ರಚಿಸಿ ಕನ್ನಡ ಅಕ್ಷರಲೋಕದಲ್ಲಿ ಅಮರರಾಗಿದ್ದಾರೆ. ಹರ್ಮನ್ ಮೊಗ್ಲಿಂಗ್ (Hermann Moegling): ಮೊದಲ...

ದಿಢೀರ್‌ ರಸ್ತೆಗೆ ಬಂದು ಕಾರಿನ ಮೇಲೆ ಜಿಗಿದ ಕಾಡುಕೋಣ..!

Image
ದಿಢೀರ್‌ ರಸ್ತೆಗೆ ಬಂದು ಕಾರಿನ ಮೇಲೆ ಜಿಗಿದ ಕಾಡುಕೋಣ..! ತೀರ್ಥಹಳ್ಳಿ: ತಾಲೂಕಿನ ಹೆಗ್ಗೋಡು ಬಳಿ ಕಾಡುಕೋಣಗಳ ಹಿಂಡು (bison herd) ರಸ್ತೆಗೆ ಏಕಾಏಕಿ ಬಂದಿದ್ದು, ಕಾಡುಕೋಣವೊಂದು ಕಾರಿನ ಮೇಲೆ ಹಾರಿದೆ. ಮಂಗಳವಾರ ಸಂಜೆ ಹರಿಹರಪುರದಿಂದ ಕಮ್ಮರಡಿ ಮಾರ್ಗವಾಗಿ ತೀರ್ಥಹಳ್ಳಿಗೆ ತೆರಳುತ್ತಿದ್ದ ಕಾರಿಗೆ ಕಾಡುಕೋಣಗಳ ಹಿಂಡು ಅಡ್ಡ ಬಂದಿವೆ. ಈ ವೇಳೆ ಒಂದು ಕಾಡುಕೋಣ ಕಾರಿನ ಮೇಲೆ ಹಾರಿದೆ. ಕಾರಿನ ಮುಂಭಾಗ ಜಖಂ ಆಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿದುಬಂದಿದೆ.

ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು..!

Image
ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು..! ಬೆಂಗಳೂರು (ಫೆ.11): ಸಿಲಿಕಾನ್ ಸಿಟಿ ಬೆಂಗಳೂರಿನ ಥಣಿಸಂದ್ರದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಶಾಲಾ ಬಸ್ ಹಾಗೂ ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ಎಳೆ ವಯಸ್ಸಿನ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಬಳಿಯೇ ಈ ದುರ್ಘಟನೆ ನಡೆದಿದ್ದು, ಪೊಲೀಸ್ ಸಿಬ್ಬಂದಿಯ ಕುಟುಂಬದಲ್ಲಿ ಮೌನ ಆವರಿಸಿದೆ. ಘಟನೆಯ ವಿವರ: ನಗರದ ಸಿಎಆರ್ (CAR) ವಿಭಾಗದಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ನಾಗನಗೌಡ ಎಂಬುವವರು ಇಂದು ಬೆಳಿಗ್ಗೆ ತಮ್ಮ ಬೈಕ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ಹೊರಟಿದ್ದರು. ಥಣಿಸಂದ್ರದ ಮುಖ್ಯರಸ್ತೆಯ ಬಳಿ ಚಲಿಸುತ್ತಿದ್ದಾಗ, ಎದುರುಗಡೆಯಿಂದ ಬಂದ ಅಜ್ ಮೋನಿ (Ajmoni School) ಶಾಲೆಗೆ ಸೇರಿದ ಬಸ್ ಅಚಾನಕ್ಕಾಗಿ ಟರ್ನ್ ಪಡೆದುಕೊಂಡಿದೆ. ಈ ವೇಳೆ ಬೈಕ್‌ಗೆ ಬಸ್ ಬಲವಾಗಿ ಡಿಕ್ಕಿ ಹೊಡೆದಿದೆ. ಕಣ್ಣೆದುರೇ ಹರಿದ ಬಸ್ ಚಕ್ರ: ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ನಾಗನಗೌಡ ಮತ್ತು ಇಬ್ಬರು ಮಕ್ಕಳು ರಸ್ತೆಗೆ ಬಿದ್ದಿದ್ದಾರೆ. ದುರದೃಷ್ಟವಶಾತ್, ಮಕ್ಕಳಿಬ್ಬರು ನೇರವಾಗಿ ಬಸ್ಸಿನ ಚಕ್ರದ ಕೆಳಗೆ ಬಿದ್ದಿದ್ದು, ಚಾಲಕ ಬ್ರೇ...

ಒಬ್ಬ ವಿದ್ಯಾರ್ಥಿ ಮೇಲೆ 4 ಜನ ಶಿಕ್ಷಕರಿಂದ ಹಲ್ಲೆ! ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು..!

Image
ಒಬ್ಬ ವಿದ್ಯಾರ್ಥಿ ಮೇಲೆ 4 ಜನ ಶಿಕ್ಷಕರಿಂದ ಹಲ್ಲೆ! ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು..! ಚಿಕ್ಕಬಳ್ಳಾಪುರ: ಗೌರಿಬಿದನೂರು ನಗರದ ಖಾಸಗಿ ವಿದ್ಯಾನಿಧಿ ಶಾಲೆಯಲ್ಲಿ ಸಂಭವಿಸಿದ ಘಟನೆ ಶಿಕ್ಷಣ ವಲಯವನ್ನೇ ಬೆಚ್ಚಿಬೀಳಿಸಿದೆ. ಎಂಟನೇ ತರಗತಿ ವಿದ್ಯಾರ್ಥಿಯೊಬ್ಬನ ಮೇಲೆ ನಾಲ್ವರು ಶಿಕ್ಷಕರು ಸೇರಿ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದ್ದು, ಹಲ್ಲೆಯಿಂದ ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಗ್ರಾಮದ ನಿವಾಸಿಯಾದ ಸುಶಾಂತ್ ಎಂಬ ಎಂಟನೇ ತರಗತಿ ವಿದ್ಯಾರ್ಥಿ ವಿದ್ಯಾನಿಧಿ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತರಗತಿಯಲ್ಲಿ ಸಹಪಾಠಿಯೊಬ್ಬರ ಪುಸ್ತಕದ ಪುಟ ಹರಿದಿದ್ದಾನೆ ಎಂಬ ಕಾರಣ ಮುಂದಿಟ್ಟುಕೊಂಡು, ಶಾಲೆಯ ಶಿಕ್ಷಕರು ಅವನನ್ನು ಕರೆದು ಕಠಿಣವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ನಾಲ್ವರು ಶಿಕ್ಷಕರು ಸೇರಿ ಸುಶಾಂತ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ಪ್ರಜ್ಞೆ ತಪ್ಪಿ ಕುಸಿದುಬಿದ್ದ ಬಾಲಕ ಶಿಕ್ಷಕರ ಹಲ್ಲೆಯಿಂದ ಸುಶಾಂತ್ ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದು, ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಶಾಲಾ ಸಿಬ್ಬಂದಿಯೇ ತಕ್ಷಣವೇ ಆತನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ವಿದ್ಯಾರ್ಥಿಗೆ ಚಿಕಿತ್ಸೆ ಮುಂದುವರಿದಿದ್ದು, ವೈದ್ಯರ ಪ್ರ...

"ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ; ಅಪಘಾತದ ರಭಸಕ್ಕೆ ಕಾರು 2 ತುಂಡು..!"

Image
"ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ; ಅಪಘಾತದ ರಭಸಕ್ಕೆ ಕಾರು 2 ತುಂಡು..!" ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ದಾವಣಗೆರೆಯ ಹೊನ್ನೇಬಾಗಿಯಲ್ಲಿ ಸಂಭವಿಸಿದ್ದು, ಓರ್ವ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ; ಅಪಘಾತದ ರಭಸಕ್ಕೆ ಕಾರು ತುಂಡು ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ದಾವಣಗೆರೆಯ ಹೊನ್ನೇಬಾಗಿಯಲ್ಲಿ ಸಂಭವಿಸಿದ್ದು, ಓರ್ವ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ತುಂಡಾದ ಕಾರು...! ದಾವಣಗೆರೆ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, ಕಾರಿನಲ್ಲಿದ್ದ ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಬಾಗಿ ಗ್ರಾಮದ ಸಮೀಪ ನಡೆದಿದೆ.‌ ನಯಾಜ್ ಖಾನ್ ಕಾರು ಅಪಘಾತದಲ್ಲಿ ಮೃತನಾದ ಚಾಲಕ. ಚನ್ನಗಿರಿ ತಾಲೂಕಿನ ನಲ್ಲೂರಿನಿಂದ ಅಡಿಕೆ ವ್ಯಾಪರಕ್ಕೆಂದು ತೆರಳುತ್ತಿದ್ದ ಒಂದು ಕಾರಿಗೆ ಪಾಂಡೋಮಟ್ಟಿ ಕಡೆಯಿಂದ ಚನ್ನಗಿರಿಗೆ ಬರುತ್ತಿದ್ದ ಮತ್ತೊಂದು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರೊಂದು ಎರಡು ತುಂಡಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರ...

"ರಾಜ್ಯದಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ ಬಸ್ : ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರು..!"

Image
"ರಾಜ್ಯದಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ ಬಸ್ : ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರು..!" ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ 'ಸಂಜನಾ ಟ್ರಾವೆಲ್ಸ್'ಗೆ ಸೇರಿದ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ. ಹೆದ್ದಾರಿ ಕಾಮಗಾರಿ ಹಿನ್ನೆಲೆ ಬಸ್ ನಿಧಾನವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.  ಬಸ್‌ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರು ಇದ್ದರು. ಬೆಂಕಿ ಕಾಣುತ್ತಿದ್ದಂತೆ ಚಾಲಕ ಹಾಗೂ ಪ್ರಯಾಣಿಕರು ತಕ್ಷಣ ಬಸ್‌ನಿಂದ ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯ ತೀವ್ರತೆ ಹೆಚ್ಚಾಗಿ ಬಸ್ ಸಂಪೂರ್ಣ ಸುಟ್ಟು ನಾಶವಾಗಿದೆ. ಸ್ಥಳಕ್ಕೆ ತಕ್ಷಣ ಆಗಮಿಸಿದ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅವಘಡ ತಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿರುವುದರಿಂದ ಲಗೇಜ್ ಬಾಕ್ಸ್​ನಲ್ಲಿ ಇಟ್ಟಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿವೆ. ಬೆಲೆ ಬಾಳುವ ವಸ್ತುಗಳನ್ನು ಕಳೆದುಕೊಂಡು ಪ್ರಯಾಣಿಕರ...

"ಹೆಜಮಾಡಿಯಲ್ಲಿ ಹುಚ್ಚಾಟ ಮೆರೆದಿದ್ದ ಕೇರಳ ವಿದ್ಯಾರ್ಥಿಗಳ ಬಸ್ ಕೂಡ್ಲಿಗಿಯಲ್ಲಿ ಪಲ್ಟಿ, ಹಲವರಿಗೆ ಗಾಯ..!"

Image
"ಹೆಜಮಾಡಿಯಲ್ಲಿ ಹುಚ್ಚಾಟ ಮೆರೆದಿದ್ದ ಕೇರಳ ವಿದ್ಯಾರ್ಥಿಗಳ ಬಸ್ ಕೂಡ್ಲಿಗಿಯಲ್ಲಿ ಪಲ್ಟಿ, ಹಲವರಿಗೆ ಗಾಯ..!" ವಿಜಯನಗರ,ಫೆಬ್ರವರಿ 04: ಬಸ್ ನಲ್ಲಿ ಪ್ರವಾಸಕ್ಕೆಂದು ಬಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಟೋಲ್ ನಲ್ಲಿ ಹುಚ್ಚಾಟವನ್ನು ಮೆರೆದಿದ್ದ ಕೇರಳ ಮೂಲದ ವಿದ್ಯಾರ್ಥಿಗಳ ಬಸ್ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಎಂಬಲ್ಲಿ ಫೆಬ್ರವರಿ 4 ರಂದು ಪಲ್ಟಿಯಾಗಿದೆ. ಹಂಪಿಗೆ ತೆರಳುತ್ತಿದ್ದ ವೇಳೆ ಕೂಡ್ಲಿಗಿ ತಾಲೂಕಿನ ಅಮ್ಮನ ಕೇರಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಶಿಕ್ಷಕಿ ಸೇರಿದಂತೆ ಹಲವರಿಗೆ ಗಾಯಾಗಳಾಗಿದ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ. ಏನಿದು ಘಟನೆ..? ಮಂಗಳವಾರ ರಾತ್ರಿ ಎರಡು ಪ್ರವಾಸಿ ಬಸ್ ಗಳಲ್ಲಿ ಆಗಮಿಸಿದ್ದ ಕೇರಳ ಮೂಲದ ವಿದ್ಯಾರ್ಥಿಗಳು ಟೋಲ್ ಬಳಿ ರಸ್ತೆಯಲ್ಲಿ ಬಸ್ ನಿಲ್ಲಿಸಿ ಮದ್ಯದ ನಶೆಯಲ್ಲಿ ಪಟಾಕಿ ಸಿಡಿಸಿ ಹುಚ್ಚಾಟವನ್ನು ಮೆರೆದಿದ್ದರು. ಇದರಿಂದ ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಮಾತ್ರವಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿ ಸಾಕಷ್ಟು ಆಕ್ರೋಶ ಕೂಡ ಕೇಳಿ ಬಂದಿತ್ತು. ಈ ಬಸ್ KA-20-AC-9541 ಮೇಲ...

"ರಸ್ತೆ ಪಕ್ಕ ನಿಂತಿದ್ದ ಕಾರಿಗೆ B.M.W ಕಾರು ಗುದ್ದಿದ ರಬಸಕ್ಕೆ ನಿಂತ ಕಾರಿನಲ್ಲಿದ್ದ ಮಹಿಳೆ ಸಾವು..!"

Image
"ರಸ್ತೆ ಪಕ್ಕ ನಿಂತಿದ್ದ ಕಾರಿಗೆ B.M.W ಕಾರು ಗುದ್ದಿದ ರಬಸಕ್ಕೆ ನಿಂತ ಕಾರಿನಲ್ಲಿದ್ದ ಮಹಿಳೆ ಸಾವು..!" ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಗ್ರಾಮದಲ್ಲಿ ರಸ್ತೆ ಪಕ್ಕ ಕಾರ್ ನಿಲ್ಲಿಸಿಕೊಂಡು ಕಾರಿನಲ್ಲಿ ಅಶೋಕ್ -ಮಲ್ಲಿಕಾ ದಂಪತಿ ಕುಳಿತಿದ್ದರು. ಅದೇ ತಪ್ಪಾಯ್ತು. ಹಿಂದಿನಿಂದ ವೇಗವಾಗಿ ಬಂದ ಬಿಎಂಡಬ್ಲ್ಯು ಕಾರ್ ಡಿಕ್ಕಿ ಹೊಡೆದು ಮಲ್ಲಿಕಾ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಶಾಲೆ ಎದುರು ಇಂದು ಬೆಳಿಗ್ಗೆ ಎರಡು ಕಾರ್ ಗಳ ನಡುವೆ ಅಪಘಾತ ಸಂಭವಿಸಿದೆ. ರಸ್ತೆ ಪಕ್ಕ ನಿಂತಿದ್ದ ಕಾರಿಗೆ ವೇಗವಾಗಿ ಬಂದ ಬಿಎಂಡಬ್ಲ್ಯು ಕಾರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ರಸ್ತೆ ಪಕ್ಕ ನಿಂತಿದ್ದ ಕಾರ್ ನಲ್ಲಿದ್ದ ಮಲ್ಲಿಕಾ ಎಂಬ ಮಹಿಳೆ ಹಾಗೂ ಪತಿ ಅಶೋಕ್‌ಗೆ ಗಂಭೀರ ಗಾಯವಾಗಿತ್ತು. ಗಾಯಾಳುಗಳನ್ನು ಉಡುಪಿ ಜಿಲ್ಲೆಯ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೇ, ಮಲ್ಲಿಕಾ ಎಂಬ ಮಹಿಳೆಯ ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣದಿಂದ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.  ಮೇಗರವಳ್ಳಿ ಶಾಲೆ ಎದುರು ನಡೆದ ಅಪಘಾತದಿಂದ ಎರಡು ಕಾರುಗಳು ಸಂಪೂರ್ಣ ಜಖಂವಾಗಿದ್ದವು. ರಸ್ತೆ ಪಕ್ಕ ಕಾರ್ ನಿಲ್ಲಿಸಿಕೊಂಡು ಮೇಗರವಳ್ಳಿ ಗ್ರ...

ನೆರಟೂರು ಗ್ರಾಮ ಪಂ ವ್ಯಾಪ್ತಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ..!

Image
ನೆರಟೂರು ಗ್ರಾಮ ಪಂ ವ್ಯಾಪ್ತಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ..! ತೀರ್ಥಹಳ್ಳಿ : ತಾಲೂಕಿನ ನೆರಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುರಾನಿ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಇದು ಸುಮಾರು 3 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ಸ್ಥಳೀಯರಿಂದ ಲಭ್ಯವಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಸುಧೀರ (40) ಎಂದು ಗುರುತಿಸಲಾಗಿದ್ದು ಇವರು ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹುಣಸವಳ್ಳಿ ಸಮೀಪದ  ಕೋಮನೆ ಯವರು ಎಂದು ತಿಳಿದು ಬಂದಿದೆ.  ಹೆಂಡತಿ ಮನೆ ನೆರಟೂರು ಆಗಿದ್ದು ಅಲ್ಲಿ ಮನನೊಂದ ಸುಧೀ‌ರ್ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಶವದ ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಜೆ ಸಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.         ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

"ಜಾತಕ ತೋರಿಸಲು ಹೋದ ಯುವತಿ ಮೇಲೆ ಅರ್ಚಕನಿಂದ ಅತ್ಯಾಚಾರ..!"

Image
"ಜಾತಕ ತೋರಿಸಲು ಹೋದ ಯುವತಿ ಮೇಲೆ ಅರ್ಚಕನಿಂದ ಅತ್ಯಾಚಾರ..!" ಮೂಡಿಗೆರೆ:   ಮದುವೆಗಾಗಿ ಜಾತಕ ತೋರಿಸಲು ಹೋದ ಯುವತಿಯ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ ಎಸಗಿದ ಆರೋಪ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಕೇಳಿಬಂದಿದೆ.        ಹೊರಟ್ಟಿ ಗ್ರಾಮದ ಪುರಾತನ ಈಶ್ವರ-ಪಾರ್ವತಿ ದೇವಸ್ಥಾನದ ಅರ್ಚಕ ಕೃಷ್ಣರಾವ್‌ ವಿರುದ್ಧ ಬಣಕಲ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.    ಜಾತಕದಲ್ಲಿ ದೋಷವಿದೆ ಎಂದು ಹೆದರಿಸಿ 2025 ನವೆಂಬರ್ 23ರಿಂದ 2026 ಫೆಬ್ರವರಿ 2ರವರೆಗೆ ಹಲವು ಬಾರಿ ಅತ್ಯಾಚಾರ ನಡೆಸಿದ ಆರೋಪವಿದೆ.         ಇದೀಗ ನೊಂದ ಯುವತಿ ಅರ್ಚಕನ ವಿರುದ್ಧ ದೂರು ನೀಡಿದ್ದಾಳೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ' ಭಾರತೀಯ ನ್ಯಾಯ ಸಂಹಿತೆ ' ( BNS) ಕಲಂ 64(2)(m) ಹಾಗೂ ಅತ್ಯಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಿರೋ ಬಣಕಲ್ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

ಸಾಗರದ ಉಳ್ಳೂರು ಬಳಿಯಲ್ಲಿ ಭೀಕರ ಅಪಘಾತ: ಅಕ್ಷಯ ಬ್ಯಾಂಕ್ ಸಿಬ್ಬಂದಿ, ಮತ್ತೋರ್ವ ಸ್ಥಳದಲ್ಲೇ ಸಾವು..!

Image
ಸಾಗರದ ಉಳ್ಳೂರು ಬಳಿಯಲ್ಲಿ ಭೀಕರ ಅಪಘಾತ: ಅಕ್ಷಯ ಬ್ಯಾಂಕ್ ಸಿಬ್ಬಂದಿ, ಮತ್ತೋರ್ವ ಸ್ಥಳದಲ್ಲೇ ಸಾವು..! ಶಿವಮೊಗ್ಗ: ಜಿಲ್ಲೆಯ ಉಳ್ಳೂರು ಬಳಿಯಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸಾಗರದ ಅಕ್ಷಯ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಹಾಗೂ ಮತ್ತೊಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರಲ್ಲಿ ಭೀಕರ ಅಪಘಾತವೊಂದು ಕಳೆದ ರಾತ್ರಿ ಸಂಭವಿಸಿದೆ. ಕ್ಯಾಂಟರ್ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಕಾರಿಗೆ ಡಿಕ್ಕಿಯಾದ ಪರಿಣಾಮ ಸಾಗರದ ಅಕ್ಷಯ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದಂತ ಯುವತಿ ಪವಿತ್ರಾ.ಸಿ(25) ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಲ್ಲದೇ ಈಕೆಯ ಸ್ನೇಹಿತ ವೀರೇಶ್ ಟಿ.ಎಸ್(25) ಎಂಬಾತ ಕೂಡ ಸಾವನ್ನಪ್ಪಿದ್ದಾರೆ. ಮೃತ ಪವಿತ್ರಾ ಸೊರಬ ತಾಲ್ಲೂಕಿನ ಮಳಲಗದ್ದೆ ಗ್ರಾಮದ ಚನ್ನಬಸವಯ್ಯ ಪುತ್ರಿಯಾಗಿದ್ದರೇ, ಮೃತ ವೀರೇಶ್ ಸಾಗರ ತಾಲ್ಲೂಕಿನ ತಡಗಳಲೆ ಗ್ರಾಮದವರಾಗಿದ್ದಾರೆ. ಪವಿತ್ರಾ ಸಾಗರದ ಅಕ್ಷಯ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಾ, ಸಾಗರದಲ್ಲೇ ಪಿಜಿಯಲ್ಲಿ ಇದ್ದರು. ಕಳೆದ ರಾತ್ರಿ ಆನಂದಪುರಕ್ಕೆ ಸ್ನೇಹಿತರೊಬ್ಬರ ಕಾರ್ಯಕ್ರಮಕ್ಕೆ ಮಾರುತಿ ಆಲ್ಟೋ ಕಾರಿನಲ್ಲಿ ಸ್ನೇಹಿತ ವೀರೇಶ್ ಜೊತೆಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ವಾಪಾಸ್ ಸಾಗರಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಉಳ್ಳೂರಿನ ಮುಂಡಿಗೆಮಟ...